ರಾಜ್ಯದಲ್ಲಿ ಲೋಕಸಭಾ ಉಪ ಚುಣಾವಣೆ ಸದ್ದು ಜೋರಾಗುತ್ತಿದ್ದು ಇದೇ ವೇಳೆ ಮುತಾಲಿಕ್ ಅವರು ಕೂಡ ಸ್ಪರ್ಧೆಯ ಇಂಗಿತ ವ್ಯಕ್ತಪಡಿಸಿದ್ದಾರೆ.
ವಿಜಯಪುರ (ಫೆ.28): ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಸ್ಪರ್ಧಿಸಲು ನನಗೆ ಬಿಜೆಪಿಯಿಂದ ಟಿಕೆಟ್ ನೀಡಬೇಕು ಎಂದು ಶ್ರೀರಾಮಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ ಮುತಾಲಿಕ್ ಮನವಿ ಮಾಡಿದ್ದಾರೆ.
Add Asianetnews Kannada as a Preferred Source

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸಚಿವ ಸುರೇಶ ಅಂಗಡಿ ಅವರ ನಿಧನದಿಂದ ತೆರವಾದ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ಇಚ್ಛೆ ಹೊಂದಿದ್ದು, ಈ ಸಂಬಂಧ ನಾನು ಈಗಾಗಲೇ ಬಿಜೆಪಿ ನಾಯಕರಿಗೆ ಮನವಿ ಮಾಡಿರುವುದಾಗಿ ತಿಳಿಸಿದರು.
ಬಾಬರ್ ಅನುಯಾಯಿಗಳಾದ PFI ಸಂಘಟನೆಯವರು ರಾಕ್ಷಸ ಕುಲದವರು: ಮುತಾಲಿಕ್ ...
ಇನ್ನು ಮೂರು ವರ್ಷ ಅವಧಿಯಲ್ಲಿ ನಾನು ಜನಸೇವೆ ಸಲ್ಲಿಸಲು ಬಯಸಿದ್ದು ಬಿಜೆಪಿ ಹೈಕಮಾಂಡ್ ನನಗೆ ಅವಕಾಶ ಕಲ್ಪಿಸಿ ಕೊಡಬೇಕು. ಒಂದು ವೇಳೆ ನನಗೆ ಅವಕಾಶ ಕೊಡದಿದ್ದರೂ ಬಿಜೆಪಿ ಅಭ್ಯರ್ಥಿ ಪರ ಕೆಲಸ ಮಾಡುತ್ತೇನೆ ಎಂದರು.
