ಕೇಂದ್ರ ಕಾರಾಗೃಹದಲ್ಲಿ ಕೈದಿಯೋರ್ವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ

ಶಿವಮೊಗ್ಗ (ಅ.25): ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಕೈದಿಯೊಬ್ಬ ಕೇಂದ್ರ ಕಾರಾಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

Add Asianetnews Kannada as a Preferred SourcegooglePreferred

ಮಂಜುನಾಥ್‌ (33) ಆತ್ಮಹತ್ಯೆ ಮಾಡಿಕೊಂಡವರು. ಸೋಗಾನೆಯಲ್ಲಿರುವ ಜೈಲಿನ ತುಂಗಾ ವಿಭಾಗದ ಕೊಠಡಿ ಸಂಖ್ಯೆ 35ರ ಶೌಚಾಲಯದಲ್ಲಿ ಅವರು ಟವೆಲ್‌ನಿಂದ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಮಾಹಿತಿ ತಿಳಿದ ಜೈಲಿನ ಸಿಬ್ಬಂದಿ ಕೂಡಲೇ ಮಂಜುನಾಥ್‌ರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಆ ವೇಳೆಗಾಗಲೇ ಆತ ಮೃತಪಟ್ಟಿರುವುದಾಗಿ ಪರೀಕ್ಷಿಸಿದ ವೈದ್ಯರು ತಿಳಿಸಿದ್ದಾರೆ. ಸಾಗರದ ಎನ್‌.ಎಸ್‌.ಬಡಾವಣೆ ನಿವಾಸಿ ಮಂಜುನಾಥ್‌ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದರು.

ಹುತಾತ್ಮ ಯೋಧನ ಪುತ್ರಿ ದೂರು ಕೊಟ್ಟ 1 ಗಂಟೆಯಲ್ಲಿ ಆರೋಪಿ ಅರೆಸ್ಟ್ ..

ಆತನ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.