ಬೆಳ್ಳಂಬೆಳಗ್ಗೆ ಖಾಸಗಿ ಬಸ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ಐವರು ಗಾಯಗೊಂಡಿದ್ದು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಚಿತ್ರದುರ್ಗ (ನ.28): ಚಿತ್ರದುರ್ಗದಲ್ಲಿ ಬೆಳ್ಳಂಬೆಳಗ್ಗೆ ಖಾಸಗಿ ಬಸ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೆ.ಆರ್.ಹಳ್ಳಿ ಗೇಟ್ ಬಳಿ ಲಾರಿಗೆ ವಿಆರ್ ಎಲ್ ಸಂಸ್ಥೆಗೆ ಸೇರಿದ ಖಾಸಗಿ ಬಸ್ ಡಿಕ್ಕಿಯಾಗಿದೆ.
ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಬಸ್ಸಿನಲ್ಲಿದ್ದ ಐವರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಬೆಳಗ್ಗಿನ ನಿದ್ದೆಯಲ್ಲಿದ್ದವರಿಗೆ ಅಪಘಾತವು ಆಘಾತ ನೀಡಿದೆ.
ಹೆಚ್ಚಿನ ಜಿಲ್ಲಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ
ಅಪಘಾತದಲ್ಲಿ ಗಾಯಗೊಂಡವರನ್ನು ಹಿರಿಯೂರಿನಲ್ಲಿರುವ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಚಿತ್ರದುರ್ಗ : ಭಾರಿ ಮಳೆಗೆ ಬೆಟ್ಟ ಕುಸಿದರೂ ಅಚ್ಚರಿ ರೀತಿಯಲ್ಲಿ ಉಳಿದ ಗರ್ಭಗುಡಿ..
ಈ ಸಂಬಂಧ ಹಿರಿಯೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
