Asianet Suvarna News Asianet Suvarna News

Raichur Republic Day : ಅಂಬೇಡ್ಕರ್ ಪೋಟೋ ತೆರವು.. ಪ್ರತಿಭಟನೆ ಮತ್ತು ಸಮರ್ಥನೆ

* ರಾಯಚೂರಿನಲ್ಲಿ ಗಣರಾಜ್ಯೋತ್ಸವ
* ಕೋರ್ಟ್ ಆವರಣದ ಗಣರಾಜ್ಯೋತ್ಸವದ ವೇಳೆ ಅಂಬೇಡ್ಕರ್ ಪೋಟೋ ತೆಗೆದ ವಿಚಾರ
* ಸೋಶಿಯಲ್ ಮೀಡಿಯಾದಲ್ಲಿ ನ್ಯಾಯಾಧೀಶರ ವಿರುದ್ಧ ಆಕ್ರೋಶ
*  ಮಹಾತ್ಮ ಗಾಂಧೀಜಿ ಪೋಟೋ ಇಡುವುದಕ್ಕೆ ಮಾತ್ರ ಅವಕಾಶ ಇದೆ ಎಂದ ನ್ಯಾಯಾಧೀಶರು

Protest against district judge who vacated Dr br ambedkar photo from Raichur republic day mah
Author
Bengaluru, First Published Jan 26, 2022, 10:48 PM IST

ರಾಯಚೂರು(ಜ. 26)   ರಾಯಚೂರು ಜಿಲ್ಲಾ ನ್ಯಾಯಾಲಯದ ಗಣರಾಜ್ಯೋತ್ಸವ ಸಂದರ್ಭ  ಡಾ. ಬಿ.ಆರ್.ಅಂಬೇಡ್ಕರ್ ಭಾವಚಿತ್ರ ತೆಗೆಸಿದ ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ವಿರುದ್ಧ ದಲಿತ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆಗೆ ಇಳಿದಿವೆ.  ನನಗೆ ಯಾರ ಬಗ್ಗೆಯೂ ರಾಗ ದ್ವೇಷಗಳಿಲ್ಲ. ಸ್ವಾತಂತ್ರ್ಯ ಬಂದಾಗಿನಿಂದಲೂ ಮಹಾತ್ಮ ಗಾಂಧೀಜಿ ಅವರ ಪೋಟೋ ಮಾತ್ರ ಇಟ್ಟುಕೊಂಡು ಬಂದಿದ್ದೇವೆ.  ಅಂಬೇಡ್ಕರ್ ಪೋಟೋ ಇಡುವ ಬಗ್ಗೆ  ಹೈ ಕೋರ್ಟ್ SoPಯಲ್ಲಿ ಉಲ್ಲೇಖ ಇಲ್ಲದ ಕಾರಣ ನಾನು ತೆಗೆಯುವಂತೆ ಕೇಳಿ ಕೊಂಡಿದ್ದೇನೆ ಎಂದು ನ್ಯಾಯಾಧೀಶರು ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ. ಈ ವಿಚಾರ ಸೋಶಿಯಲ್ ಮೀಡಿಯಾದಲ್ಲಿಯೂ ದೊಡ್ಡ ಚರ್ಚೆಗೆ ವೇದಿಕೆಯಾಗಿದೆ. 

73ನೇ ಗಣರಾಜ್ಯೋತ್ಸವ  ಸಂದರ್ಭ ಜಿಲ್ಲಾ(Raichur) ಕೋರ್ಟ್ ಆವರಣದಲ್ಲಿ ಧ್ವಜಾರೋಹಣಕ್ಕಾಗಿ ಸಕಲ ಸಿದ್ದತೆ ಮಾಡಿಕೊಳ್ಳಲಾಗಿತ್ತು. ಅಂಬೇಡ್ಕರ್ (Dr. B. R. Ambedkar) ಮತ್ತು ಗಾಂಧೀಜಿ (Mahatma Gandhi)ಪೋಟೋ  ಒಂದರ ಪಕ್ಕ ಒಂದು ಇಡಲಾಗಿತ್ತು. 

ಈ ವೇಳೆ  ಧ್ವಜಾರೋಹಣಕ್ಕೆ ಬರಲು ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಹಿಂದೇಟು ಹಾಕಿದ್ದಾರೆ. ನಂತರ ಅಂಬೇಡ್ಕರ್ ಭಾವಚಿತ್ರ ತೆಗೆದ ಬಳಿಕ ಧ್ವಜಾರೋಹಣಕ್ಕೆ ರಾಯಚೂರು ಜಿಲ್ಲಾ ನ್ಯಾಯಾಧೀಶರು ಆಗಮಿಸಿದರು.

ರಾಜ್ಯದ ಶಾಲೆಗಳಿಗೆ ಡಾ. ಬಿಆರ್ ಅಂಬೇಡ್ಕರ್ ಹೆಸರು

ನ್ಯಾಯಾಧೀಶರ ವಿರುದ್ಧ ಪ್ರತಿಭಟನೆ: ಜಿಲ್ಲಾ ನ್ಯಾಯಾಲಯದಲ್ಲಿ ಅಂಬೇಡ್ಕರ್ ‌ಪೋಟೋ ತೆಗೆದು ಧ್ವಜಾರೋಹಣ ಮಾಡಿದ್ದಕ್ಕೆ ನ್ಯಾಯಾಧೀಶರ ವಿರುದ್ಧ ಪ್ರತಿಭಟನೆ ನಡೆಯುತ್ತಿದೆ.  ರಾಯಚೂರಿನ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆದಿದೆ.  ವಿವಿಧ ದಲಿತ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದು  ನ್ಯಾಯಾಧೀಶರ ಭಾವಚಿತ್ರ ತುಳಿದು ಹಾಕಿ ಆಕ್ರೋಶ ಹೊರಹಾಕಿದ್ದಾರೆ.

ನ್ಯಾಯಾಧೀಶರು ಹೇಳುವುದೇನು?: ನ್ಯಾಯಾಲಯದ ಸರ್ಕ್ಯೂಲರ್ ಪ್ರಕಾರ ಅಂಬೇಡ್ಕರ್ ಭಾವಚಿತ್ರ ಇಡುವ ಬಗ್ಗೆ ಯಾವುದೇ ಉಲ್ಲೇಖ ಇಲ್ಲ. ನನ್ನ ಗಮನಕ್ಕೆ ತರದೆ ಭಾವಚಿತ್ರ ತಂದು ಇಡಲಾಗಿತ್ತು. ಮಹಾತ್ಮ ಗಾಂಧೀಜಿ ಅವರ ಭಾವಚಿತ್ರ ಇಡುವುದಕ್ಕೆ ಮಾತ್ರ ಅವಕಾಶ ಇದೆ.  ಹಾಗಾಗಿ ನಾನು ಪೋಟೋ ತೆರವು ಮಾಡುವಂತೆ ಹೇಳಿದೆ ಎನ್ನುವುದು ನ್ಯಾಯಾಧೀಶರ ಸಮರ್ಥನೆ.

ರಾಜ್ಯದ ಹಲವು ಕಡೆ ಪ್ರತಿಭಟನೆಗೆ ಇಳಿದಿರುವ  ದಲಿತಪರ ಸಂಘಟನೆಗಳು ಇದು ಅಕ್ಷಮ್ಯ ಅಪರಾಧ, ತಕ್ಷಣ ನ್ಯಾಯಾಧೀಶರನ್ನು ಅಮಾನತು ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ನ್ಯಾಯಾಧೀಶರು ಸಂವಿಧಾನವನ್ನು, ಶಿಷ್ಟಾಚಾರವನ್ನು ಪಾಲನೆ ಮಾಡಿ ಇತರರಿಗೆ ಮಾದರಿಯಾಗಬೇಕು. ಆದರೆ ಇಂಥ ಹೆಜ್ಜೆ ಇಟ್ಟು ಸಂವಿಧಾನನ ಶಿಲ್ಪಿಗೆ ಅಪಮಾನ ಮಾಡಲಾಗಿದೆ ಎಂದು ದಲಿತ ಸಂಘಟನೆಗಳು ಆಕ್ರೋಶ ಹೊರಹಾಕಿವೆ. 

Follow Us:
Download App:
  • android
  • ios