ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ಗೆ ಶ್ರದ್ಧಾಂಜಲಿ ಕೋರಿ ಮೌನಾಚರಣೆ ನಡೆಸಿದ್ದಾರೆ. ಸ್ಟಾಲಿನ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮತ್ತೆ ಹುಟ್ಟಿ ಬರಬೇಡಿ ಎಂದು, ಸ್ಟಾಲಿನ್ ಅಣಕು ತಿಥಿ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ ಕರ್ನಾಟಕ ಜನಪರ ವೇದಿಕೆಯ ಕಾರ್ಯಕರ್ತರು 

ರಾಮನಗರ(ಸೆ.26): ಕಾವೇರಿ ನೀರಿಗಾಗಿ ಇಂದು ಬೆಂಗಳೂರು ಜೊತೆಗೆ ರಾಮನಗರದಲ್ಲಿಯೂ ಕೂಡ ಬಂದ್‌ಗೆ ಕರೆ ನೀಡಲಾಗಿದೆ. ರೈತ ಸಂಘಟನೆಗಳು ರಾಮನಗರ ಬಂದ್‌ಗೆ ಕರೆ ನೀಡಿದ ಹಿನ್ನೆಲೆಯಲ್ಲಿ ಇಂದು(ಮಂಗಳವಾರ) ಬೆಳ್ಳಂಬೆಳಿಗ್ಗೆ ಕರ್ನಾಟಕ ಜನಪರ ವೇದಿಕೆಯ ಕಾರ್ಯಕರ್ತರು ಪ್ರತಿಭಟನೆ ಆರಂಭಿಸಿದ್ದಾರೆ. 

Add Asianetnews Kannada as a Preferred SourcegooglePreferred

ನಗರದ ಐಜೂರು ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕರ್ನಾಟಕ ಜನಪರ ವೇದಿಕೆಯ ಕಾರ್ಯಕರ್ತರು ತಮಿಳುನಾಡು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶವನ್ನ ವ್ಯಕ್ತಪಡಿಸಿದ್ದಾರೆ. 

ಕಾವೇರಿಗಾಗಿ ಬಂದ್‌: ರಾಜ್ಯ ಹಿತದ ಹೋರಾಟಕ್ಕೆ ಸಹಕಾರ, ಡಿಕೆಶಿ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ಗೆ ಶ್ರದ್ಧಾಂಜಲಿ ಕೋರಿ ಮೌನಾಚರಣೆ ನಡೆಸಿದ್ದಾರೆ. ಸ್ಟಾಲಿನ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮತ್ತೆ ಹುಟ್ಟಿ ಬರಬೇಡಿ ಎಂದು, ಸ್ಟಾಲಿನ್ ಅಣಕು ತಿಥಿ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.