ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಸ್ವಕ್ಷೇತ್ರ ಕನಕಪುರದಲ್ಲಿ ಸಾರಿಗೆ ಬಸ್‌ಗಳ ಸಮರ್ಪಕ ನಿರ್ವಹಣೆ ಇಲ್ಲದೆ ನಿತ್ಯ ಸಾರ್ವಜನಿಕರು, ಪ್ರಯಾಣಿಕರು ಪರದಾಡುವಂತಾಗಿದೆ ಎಂದು ಆರೋಪಿಸಿ ನಗರದ ಸಾರಿಗೆ ಸಬ್‌ ನಿಲ್ದಾಣದ ಎದುರು ವಿ​ದ್ಯಾರ್ಥಿಗಳು ಹಾಗೂ ಪ್ರಯಾ​ಣಿ​ಕರು ಪ್ರತಿ​ಭ​ಟನೆ ನಡೆ​ಸಿ​ದರು. 

ಕನಕಪುರ (ಆ.03): ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಸ್ವಕ್ಷೇತ್ರ ಕನಕಪುರದಲ್ಲಿ ಸಾರಿಗೆ ಬಸ್‌ ಗಳ ಸಮರ್ಪಕ ನಿರ್ವಹಣೆ ಇಲ್ಲದೆ ನಿತ್ಯ ಸಾರ್ವಜನಿಕರು, ಪ್ರಯಾಣಿಕರು ಪರದಾಡುವಂತಾಗಿದೆ ಎಂದು ಆರೋಪಿಸಿ ನಗರದ ಸಾರಿಗೆ ಸಬ್‌ ನಿಲ್ದಾಣದ ಎದುರು ವಿ​ದ್ಯಾರ್ಥಿಗಳು ಹಾಗೂ ಪ್ರಯಾ​ಣಿ​ಕರು ಪ್ರತಿ​ಭ​ಟನೆ ನಡೆ​ಸಿ​ದರು. ಬೆಳಿಗ್ಗೆ ಶಾಲಾ ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು, ದಿನನಿತ್ಯ ಬೆಂಗಳೂರು ಕೆಲಸಕ್ಕೆ ತೆರಳುವ ನೌಕರರು, ಹಾಗೂ ಪ್ರಯಾಣಿಕರು ಬಸ್‌ ನಿಲ್ದಾ​ಣದ ಪೆಟ್ರೋಲ್‌ ಬಂಕ್‌ ಮುಂಭಾಗ ಧರಣಿ ಕುಳಿತರು. ಇದ​ರಿಂದ ವಾಹನ ಸಂಚಾರ ಅಸ್ತವ್ಯಸ್ಥಗೊಂಡಿತು. ಒಂದು ಗಂಟೆಗೂ ಹೆಚ್ಚು ಕಾಲ ಪ್ರತಿಭಟನೆ ನಡೆಸಿದ್ದರಿಂದ ಪ್ರಯಾಣಿಕರಿಗೆ ತೀವ್ರ ಪರದಾಡುವಂತಾಯಿತು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಸ್ವಕ್ಷೇತ್ರದಲ್ಲಿಯೇ ಬಸ್ಸುಗಳು ಇಲ್ಲದೆ, ಕಳೆದ 8-10 ವರ್ಷಗಳಿಂದ ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಜನ ಪರದಾಡುತ್ತಿದ್ದರೂ, ಹೇಳುವವರು, ಕೇಳುವವರು ಇಲ್ಲದಂತಾ​ಗಿದೆ. ಇಲ್ಲಿನ ಸಾರಿಗೆ ಅವ್ಯವಸ್ಥೆ ಅಸಮರ್ಪಕ ಕೆಲಸ ನಿರ್ವಹಣೆ ಹಾಗೂ ಸಾರಿಗೆ ಬಸ್‌ ನಿಲ್ದಾಣದಲ್ಲಿನ ಮೂಲ ಸೌಲಭ್ಯಗಳ ಬಗ್ಗೆ ಹತ್ತಾರು ಬಾರಿ ಪ್ರತಿಭಟನೆ, ಧರಣಿ ನಡೆಸಿ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಪ್ರ​ತಿ​ಭ​ಟ​ನಾ​ಕಾ​ರರು ಆಕ್ರೋಶ ವ್ಯಕ್ತಪಡಿಸಿದರು.

ಮರಣ ದೃಢೀಕರಣ ಪತ್ರ ನೀಡಲು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ

ಕೆಆರ್‌ಎಸ್‌ ಪಕ್ಷದ ತಾಲೂಕು ಅಧ್ಯಕ್ಷ ಹೊಸದುರ್ಗ ಪ್ರಶಾಂತ್‌ ಮಾತನಾಡಿ, ಪ್ರಭಾವಿ ಮುಖಂಡರಿದ್ದರೂ ಸಮಸ್ಯೆ ಮಾತ್ರ ಬೆಟ್ಟದಷ್ಟಿದೆ. ನಾವೂ ಇಲ್ಲಿನ ಅವ್ಯವಸ್ಥೆ ಸರಿಪಡಿಸಲು ಒತ್ತಾಯಿಸಿ ಆಮರಣಾಂತರ ಉಪವಾಸ ಸತ್ಯಗ್ರಹ ಹೋರಾಟ ನಡೆಸಿದರು ಪ್ರಯೋಜನವಾಗಿಲ್ಲ ಎಂದು ಕಿಡಿ​ಕಾ​ರಿ​ದ ಅವರು, ಸಾರಿಗೆ ಬಸ್‌ ನಿಲ್ದಾಣದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಇದೆ. ಪ್ರಯಾಣಿಕರ ಸಂಖ್ಯೆ ಹೆಚ್ಚಳದ ಜೊತೆಗೆ ಶಕ್ತಿ ಯೋಜನೆಯಿಂದ ಮತ್ತಷ್ಟುಅಧಿಕ ಮಹಿಳಾ ಪ್ರಯಾಣಿಕರು ಬರತೊಡಗಿದ್ದಾರೆ. ಕಳೆದ 8 ವರ್ಷಗಳಿಂದ ಇರುವ ಸಮಸ್ಯೆ ಇಂದಿಗೂ ಬಗೆಹರಿದಿಲ್ಲ.

ಸಾರಿಗೆ ಸಂಸ್ಥೆ ಕನಕಪುರ ಘಟಕದಲ್ಲಿ ಕೆಟ್ಟು ಎಲ್ಲೆಂದರಲ್ಲಿ ನಿಲ್ಲುವ ಸ್ಕ್ರಾಪ್‌ ಬಸ್ಸುಗಳಿವೆ. ಅಲ್ಲದೆ, ಬಸ್ಸು, ಸಿಬ್ಬಂದಿ, ಅಧಿಕಾರಿಗಳ ಕೊರತೆಯಿಂದ ಯಾವುದೇ ಕೆಲಸ ಕಾರ್ಯಗಳು ಆಗುತ್ತಿಲ್ಲ. ಕೂಡಲೇ ಸರ್ಕಾರ ಉತ್ತಮ ಗುಣಮಟ್ಟದ ಸಾರಿಗೆ ಬಸ್ಸುಗಳನ್ನು ಒದ​ಗಿ​ಸ​ಬೇಕು. ಅಧಿ​ಕಾರಿ ಮತ್ತು ಸಿಬ್ಬಂದಿಗಳ ಕೊರತೆ ​ನೀ​ಗಿ​ಸ​ಬೇಕು. ಇಲ್ಲಿರುವ ಸ್ಕ್ರಾಪ್‌ ಬಸ್ಸುಗಳನ್ನು ಗುಜರಿಗೆ ಕಳುಹಿಸಿ ಉತ್ತಮ ಸಂಚಾರ ಸರ್ಕಾರ ಮಾಡಿಕೊಡದಿದ್ದರೆ ಮುಂದೆ ಸಾರ್ವಜನಿಕರ ಶಾಪಕ್ಕೆ ಗುರಿಯಾಗಬೇಕಾಗುತ್ತದೆ ಎಂದು ಎಚ್ಚರಿಸಿದರು.

ಸಿಬಿಎಸ್‌ಇ ಶಾಲೆಗಳಲ್ಲಿ ಕನ್ನಡ ಕಡ್ಡಾಯ: ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌

ಪ್ರತಿ​ಭ​ಟನಾ ಸ್ಥಳಕ್ಕೆ ಜಿಲ್ಲಾ ಸಾರಿಗೆ ವಿಭಾಗಾಧಿಕಾರಿ ಪುರುಷೋತ್ತಮ, ಎಟಿಸಿ ಶುಭಾ, ಸಬ್‌ ಇನ್ಸ್‌ಪೆಕ್ಟರ್‌ ಉಷಾನಂದಿನಿ ಪ್ರತಿಭಟನಾಕಾರರನ್ನು ಸಮಾಧಾನಪಡಿಸಿ ಆಗಸ್ಟ್‌ 3 ಗುರುವಾರದಿಂದಲೇ ಬಸ್‌ ಸಂಚಾ​ರ​ದಲ್ಲಿ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಭರ​ವಸೆ ನೀಡಿದ ತರು​ವಾಯ ಪ್ರತಿ​ಭ​ಟ​ನಾ​ಕಾರರು ಧರಣಿ ಹಿಂಪ​ಡೆ​ದರು.