ಮನೆಯ ತೋಟದಲ್ಲಿ ನಿಂತಿದ್ದ ವೇಳೆ ಸಂಜೀವ ಮಠಂದೂರು ಅವರಿಗೆ ಹಾವು ಕಚ್ಚಿದೆ. ತಕ್ಷಣವೇ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂಜೀವ ಮಠಂದೂರು ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 

ಪುತ್ತೂರು(ನ.16):  ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ಸಂಜೀವ ಮಠಂದೂರು ಅವರು ಹಾವು ಕಡಿತದಿಂದ ಅಸ್ವಸ್ಥರಾದ ಘಟನೆ ಇಂದು(ಗುರುವಾರ) ನಡೆದಿದೆ. 

Add Asianetnews Kannada as a Preferred SourcegooglePreferred

ಮನೆಯ ತೋಟದಲ್ಲಿ ನಿಂತಿದ್ದ ವೇಳೆ ಹಾವು ಕಚ್ಚಿದೆ. ತಕ್ಷಣವೇ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂಜೀವ ಮಠಂದೂರು ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 

MANGALURU: ಭಜರಂಗದಳ ಕಾರ್ಯಕರ್ತರಿಗೆ ಗಡೀಪಾರು ನೋಟಿಸ್: ನಳಿನ್ ಕಟೀಲ್ ಆಕ್ರೋಶ!

ಹಾವಿನ ವಿಷ ಏರುವ ಮುನ್ನವೇ ಮಠಂದೂರು ಅವರಿಗೆ ವೈದ್ಯರು ತುರ್ತು ಚಿಕಿತ್ಸೆ ನೀಡಿದ್ದಾರೆ. ತುರ್ತು ಚಿಕಿತ್ಸೆಯಿಂದ ಸಂಜೀವ ಮಠಂದೂರು ಸದ್ಯ ಅಲ್ಪ ಚೇತರಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.