Asianet Suvarna News Asianet Suvarna News

ಅಂಬೇಡ್ಕರನ್ನು ಓದುವುದು ಮಾನವೀಯ ಅಧ್ಯಯನದಂತೆ: ಸಚಿವ ಮಹದೇವಪ್ಪ

ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಓದುವುದು ಹೊಸ ದೇಶಕ್ಕೆ ಪ್ರವೇಶದಂತೆ ಹಾಗೂ ಮಾನವೀಯತೆಯನ್ನು ಅಧ್ಯಯನ ಮಾಡುತ್ತಿದ್ದಂತೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದರು. 

Reading Dr BR Ambedkar is like studying humanities Says Minister HC Mahadevappa gvd
Author
First Published Mar 3, 2024, 10:43 PM IST

ಮೈಸೂರು (ಮಾ.03): ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಓದುವುದು ಹೊಸ ದೇಶಕ್ಕೆ ಪ್ರವೇಶದಂತೆ ಹಾಗೂ ಮಾನವೀಯತೆಯನ್ನು ಅಧ್ಯಯನ ಮಾಡುತ್ತಿದ್ದಂತೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದರು. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಡಾ.ಬಿ.ಆರ್. ಅಂಬೇಡ್ಕರ್ ಅಧ್ಯಯನ ಮತ್ತು ಸಂಶೋಧನ ಕೇಂದ್ರ ವತಿಯಿಂದ ಘಟಿಕೋತ್ಸವ ಭವನದಲ್ಲಿ ಆಯೋಜಿಸಿದ್ದ ಡಾ.ಬಿ.ಆರ್. ಅಂಬೇಡ್ಕರ್ ಅವರ ಅಭಿವೃದ್ಧಿ ದೃಷ್ಟಿಕೋನ ಮತ್ತು ಸಮಕಾಲಿನ ಜಗತ್ತು ವಿಷಯ ಕುರಿತ ಎರಡು ದಿನಗಳ ಅಂತಾರಾಷ್ಟ್ರೀಯ ಕಾರ್ಯಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಬಾಬಾ ಸಾಹೇಬರು ದೇಶಕಟ್ಟಲು, ಜನರನ್ನು ಬೆಸೆಯಲು, ಸಾಂಸ್ಕೃತಿಕವಾದ ಬದುಕಿನ ನಿರೂಪಣೆಗೆ ನೀಡಿರುವ ಸತ್ವಭರಿತ ಅನೇಕ ಕೊಡುಗೆಯ ಬಗ್ಗೆ ಎಲ್ಲರೂ ಚಿಂತನೆ ಮಾಡಬೇಕಿದೆ. ಅಸಮಾನತೆ ತೊರೆದು ಸಮ ಸಮಾಜದ ಸಾಧನೆಯ ಗುರಿಯ ಕಡೆಗೆ ಹೆಜ್ಜೆ ಇಡಬೇಕಿದೆ ಎಂದು ಅವರು ಹೇಳಿದರು. ಸಂವಿಧಾನ ಕುರಿತು ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಅದರಂತೆ ವಿಶ್ವವಿದ್ಯಾಲಯಗಳಲ್ಲಿ ಸಂವಿಧಾನ ಕುರಿತು ಸಮಗ್ರವಾದ ಅಧ್ಯಯನ ನಡೆಸಬೇಕಿದೆ. ಪ್ರಾಧ್ಯಾಪಕರು ವಿದ್ಯಾರ್ಥಿಗಳಿಗೆ ಸಂವಿಧಾನದ ಆಶಯಗಳನ್ನು ಬಿತ್ತಬೇಕಿದೆ. ಈ ಮೂಲಕ ಅಂಬೇಡ್ಕರ ಅವರ ಕನಸಾದ ಸಮೃದ್ಧ ಭಾರತದ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕಿದೆ ಎಂದು ಅವರು ಕರೆ ನೀಡಿದರು.

ಜನರಿಗೆ ಭಾರತದ ನೈಜ ಇತಿಹಾಸ ತಿಳಿಸಬೇಕಿದೆ: ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ

ಮಾಧ್ಯಮಗಳ ನಿಲುವು ವೈಚಾರತೆ, ವೈಜ್ಞಾನಿಕ ನಿಲುವುಗಳನ್ನು ಬಲಪಡಿಸುವಂತೆ ಕಾರ್ಯನಿರ್ವಹಿಸಬೇಕಿದೆ. ಸತಿ ಸಹಾಗಮನ ಪದ್ಧತಿ ಪಾಲಿಸಿದವರು ಇಂದು ಸಂವಿಧಾನದ ಮೇಲೆ ಸವಾರಿ ಮಾಡುತ್ತಿದ್ದಾರೆ. ಸಾಮಾಜಿಕ ಹಾಗೂ ಅರ್ಥಿಕ ಸಮಾನತೆವಿಲ್ಲದೆ ಸ್ವಾತಂತ್ರ್ಯಕ್ಕೆ ಅರ್ಥವಿಲ್ಲ. ಭಾರತದ ಎಲ್ಲಾ ಜನರನ್ನು ಸಂರಕ್ಷಣೆ ಮಾಡುವ ಸಂವಿಧಾನವನ್ನು ಬಾಬಸಾಹೇಬರು ನೀಡಿದ್ದಾರೆ. ನಮಗೆ, ನಮ್ಮ ಮಕ್ಕಳಿಗೆ, ಮಹಿಳೆಯರಿಗೆ, ರೈತರಿಗೆ, ಕಾರ್ಮಿಕರಿಗೆ ನೆಮ್ಮದಿ ಬದುಕು ಸಂವಿಧಾನದ ಸಮರ್ಪಕ ಜಾರಿಯಲ್ಲಿದೆ ಎಂದು ತಿಳಿಸಿದರು. 

ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಮಾತನಾಡಿ, ಶಿಕ್ಷಣವು ಸುಲಭವಾಗಿ ಕೈಗೆಟುಕದ ವೇಳೆ ಶೋಷಿತ ಸಮುದಾಯದ ವ್ಯಕ್ತಿ ವರ್ಣಬೇದ, ಜಾತಿಭೇದದ ನಡುವೆ ಸ್ವಾತಂತ್ರ್ಯ ಪೂರ್ವದಲ್ಲಿ ವಿದೇಶದಲ್ಲಿ ಉನ್ನತ ಪದವಿ ಪಡೆದವರು ಡಾ.ಬಿ.ಆರ್. ಅಂಬೇಡ್ಕರ್ ಅವರಾಗಿದ್ದಾರೆ. ಈ ದೇಶದ ಜಾತಿ ಪದ್ಧತಿ, ಅಸ್ಪೃಶ್ಯತೆ ತೊಲಿಗಿಸಲು ಅವರು ನೀಡಿರುವ ಸಂವಿಧಾನ ಪ್ರಪಂಚಕ್ಕೆ ಮಾದರಿಯಾಗಿದೆ ಎಂದರು. ಅಂಬೇಡ್ಕರ್ ಅವರು ಸಂವಿಧಾನ ಕರ್ತೃ ಮಾತ್ರವಲ್ಲ, ಆರ್ಥಿಕ ತಜ್ಞ, ಶಿಕ್ಷಣ ತಜ್ಞ, ಸಾಮಾಜಿಕ ಚಿಂತಕ, ಕ್ರಾಂತಿಕಾರಿ ನಾಯಕ, ತತ್ವಜ್ಞಾನಿ ಹಾಗೂ ಮಾನವತಾವಾದಿ. 

ರಾಜ್ಯ ಸರ್ಕಾರಿ ನೌಕರರಿಗೆ ನೀಡಿದ್ದ ಓಪಿಎಸ್‌ ಜಾರಿಗೆ ಬದ್ಧ: ಸಚಿವ ಸಂತೋಷ್‌ ಲಾಡ್‌

ಈ ನಿಟ್ಟಿನಲ್ಲಿ 21ನೇ ಶತಮಾನದಲ್ಲಿ ಬಾಬಾಸಾಹೇಬರ ದೂರ ದೃಷ್ಟಿತ್ವದ ಅಭಿವೃದ್ಧಿ ವಿಚಾರಗಳು ಹೇಗೆ ಪ್ರತಿಧ್ವನಿಸುತ್ತಿದೆ ಎಂಬುದನ್ನು ಚಿಂತಿಸಿಬೇಕಿದೆ ಎಂದರು. ಈ ವೇಳೆ ಕರ್ನಾಟಕ ರಾಜ್ಯ ಮುಕ್ತ ವಿವಿ ಕುಲಪತಿ ಪ್ರೊ. ಶರಣಪ್ಪ ವಿ.ಹಲಸೆ, ಕುಲಸಚಿವ ಪ್ರೊ.ಕೆ.ಎಲ್.ಎನ್. ಮೂರ್ತಿ, ಪರಿಕ್ಷಾಂಗ ಕುಲಸಚಿವ ಪ್ರೊ. ಪ್ರವೀಣ್, ಪ್ರೊ.ಎನ್. ಲಕ್ಷ್ಮಿ, ಡಾ. ಶಿವಕುಮಾರಸ್ವಾಮಿ, ವ್ಯವಸ್ಥಾಪನ ಮಂಡಳಿ ಸದಸ್ಯ ಬಿ.ಜಿ. ಪಾಟೀಲ್, ಬಾಲಕ ತೇಜಸ್ವಿ ಚಕ್ರವರ್ತಿ ಸೇರಿದಂತೆ ಮೊದಲಾದವರು ಇದ್ದರು.

Follow Us:
Download App:
  • android
  • ios