ರೇಣುಕಾಸ್ವಾಮಿ ಕೊಲೆ ಆರೋಪದಡಿ ಇಲ್ಲಿನ ಕೇಂದ್ರ ಕಾರಾಗೃಹದಲ್ಲಿರುವ ದರ್ಶನ್, ಕುಟುಂಬ ಸದಸ್ಯರ ಜೊತೆ ಮಾತಾಡಲು ಫೋನ್ ಸೌಕರ್ಯ ನೀಡಿ ಎಂದು ಮನವಿ ಮಾಡಿಕೊಂಡಿದ್ದರು. ಅವರ ಬೇಡಿಕೆಯನ್ನು ಪರಿಶೀಲಿಸಿ ನಿಯಮದಂತೆ ಬುಧವಾರ ಫೋನ್ ಸೌಲಭ್ಯ ನೀಡಿದ್ದು, ಸುಮಾರು 10 ನಿಮಿಷ ಪತ್ನಿ ವಿಜಯಲಕ್ಷ್ಮಿ ಜೊತೆ ಮಾತನಾಡಿದರು ಎನ್ನಲಾಗಿದೆ. 

ಬಳ್ಳಾರಿ(ಸೆ.05): ಶೌಚಕ್ಕೆ ಸರ್ಜಿಕಲ್ ಚೇರ್, ಸಮಯ ಕಳೆಯಲು ಟಿವಿ ಕೇಳಿದ್ದ ನಟ ದರ್ಶನ್ ಇದೀಗ ಕುಟುಂಬ ಸದಸ್ಯರ ಜೊತೆ ಮಾತಾಡಲು ಫೋನ್ ಕರೆ ಸೌಲಭ್ಯದ ಬೇಡಿಕೆ ಇಟ್ಟಿದ್ದು, ಜೈಲಿನ ನಿಯಮದಂತೆ ಬುಧವಾರ ಆ ಬೇಡಿಕೆ ಈಡೇರಿಸಲಾಗಿದೆ. 

Add Asianetnews Kannada as a Preferred SourcegooglePreferred

ರೇಣುಕಾಸ್ವಾಮಿ ಕೊಲೆ ಆರೋಪದಡಿ ಇಲ್ಲಿನ ಕೇಂದ್ರ ಕಾರಾಗೃಹದಲ್ಲಿರುವ ದರ್ಶನ್, ಕುಟುಂಬ ಸದಸ್ಯರ ಜೊತೆ ಮಾತಾಡಲು ಫೋನ್ ಸೌಕರ್ಯ ನೀಡಿ ಎಂದು ಮನವಿ ಮಾಡಿಕೊಂಡಿದ್ದರು. ಅವರ ಬೇಡಿಕೆಯನ್ನು ಪರಿಶೀಲಿಸಿ ನಿಯಮದಂತೆ ಬುಧವಾರ ಫೋನ್ ಸೌಲಭ್ಯ ನೀಡಿದ್ದು, ಸುಮಾರು 10 ನಿಮಿಷ ಪತ್ನಿ ವಿಜಯಲಕ್ಷ್ಮಿ ಜೊತೆ ಮಾತನಾಡಿದರು ಎನ್ನಲಾಗಿದೆ. 

3991 ಪುಟಗಳ ಚಾರ್ಜ್‌ಶೀಟ್‌ನಲ್ಲಿ ದರ್ಶನ್ ಗ್ಯಾಂಗ್ ನಡೆಸಿದ ಕರಾಳ ಕೃತ್ಯ ಬಯಲು!

ಜೈಲಿನ ನಿಯಮದಂತೆ ವಿಚಾರಣಾಧೀನ ಕೈದಿಗಳಿಗೆ ವಾರದಲ್ಲಿ ಎರಡು ಬಾರಿ ತಲಾ 10 ನಿಮಿಷದಂತೆ ಒಟ್ಟು 20 ನಿಮಿಷ ಮಾತನಾಡಲು ಅವಕಾಶ ಇದೆ. ಯಾರ ಜೊತೆ ಮಾತನಾಡಬೇಕು ಎಂಬಿತ್ಯಾದಿ ಮಾಹಿತಿ ಯೊಂದಿಗೆ 3 ಮೊಬೈಲ್ ಸಂಖ್ಯೆಗಳನ್ನು ನೀಡಬೇಕಿದ್ದು, ಪತ್ನಿ ಹಾಗೂ ವಕೀಲರ ಮೊಬೈಲ್ ಸಂಖ್ಯೆಯನ್ನು ದರ್ಶನ್ ನೀಡಿದ್ದಾರೆ. ಮೊದಲ ಕರೆಯನ್ನು ಪತ್ನಿಗೆ ಮಾಡಿದ್ದಾರೆ. 

ಶೌಚಕ್ಕೆ ಸರ್ಜಿಕಲ್ ಚೇರ್, ಟೀವಿ ಬಳಿಕ ದರ್ಶನ್ ಗೆ ಜೈಲಿನಲ್ಲಿ ಜೈಲಿಗೆ ಭೇಟಿ ನೀಡುವ ಸಾಧ್ಯತೆಯಿದೆ. ಪೋನ್ ಸೌಲಭ್ಯ ಜಾಮೀನು ಸಂಬಂಧ ಚರ್ಚಿಸಲು ದರ್ಶನ್ ಭೇಟಿಗೆ ಗುರುವಾರ ಪತ್ನಿ ವಿಜಯಲಕ್ಷ್ಮಿ ಅವರು ವಕೀಲರ ಜೊತೆ ಬಳ್ಳಾರಿ ಕೊಲೆ ಆರೋಪದಲ್ಲಿ ಬಳ್ಳಾರಿ ಜೈಲಲ್ಲಿರುವ ದರ್ಶನ್ ಈ ಬಾರಿ ಗಣೇಶ ಹಬ್ಬವನ್ನು ಕುಟುಂಬ ಸದಸ್ಯರ ಜೊತೆ ಮಾಡುತ್ತಾರೋ ಅಥವಾ ಬಳ್ಳಾರಿ ಜೈಲಿನಲ್ಲೇ ಹಬ್ಬ ಆಚರಿಸುವ ಅನಿವಾರ್ಯತೆ ಸೃಷ್ಟಿ ಯಾಗಲಿದೆಯೋ ಎನ್ನುವ ಕುತೂಹಲವಿದೆ. ಚಾರ್ಜ್ ಶೀಟ್ ಸಲ್ಲಿಕೆ ಹಿನ್ನೆಲೆ ಜಾಮೀನು ಸಿಗುವ ನಿರೀಕ್ಷೆ ಹೆಚ್ಚಿದೆ ಎನ್ನಲಾಗಿದೆ. ಒಂದು ವೇಳೆ ಜಾಮೀನು ವಿಳಂಬವಾದರೆ ಜೈಲಿನಲ್ಲಿಯೇ ಹಬ್ಬ ಅನಿವಾರ್ಯವಾಗಲಿದೆ.