ಬೈಕ್ ಅಪಘಾತದಲ್ಲಿ ಆರೆಸ್ಸೆಸ್ ಪ್ರಮುಖ್ ಸಾವು
ರಸ್ತೆ ಅಪಘಾತದಲ್ಲಿ ಆರ್ ಎಸ್ ಎಸ್ ಮುಖಂಡರೋರ್ವರು ನಿಧನರಾಗಿದ್ದಾರೆ. ಅಪರಿಚಿತ ವಾಹನ ಡಿಕ್ಕಿಯಾಗಿ ಅವಘಡವಾಗಿದೆ.
ಪುತ್ತೂರು (ಡಿ.16) : ಅಪರಿಚಿತ ವಾಹನ ಡಿಕ್ಕಿಯಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಗ್ರಾಮ ವಿಕಾಸ ಮಂಗಳೂರು ವಿಭಾಗ ಪ್ರಮುಖ್, ಬಂಟ್ವಾಳ ಅಗರ್ತಬೈಲು ನಿವಾಸಿ ವೆಂಕಟ್ರಮಣ ಹೊಳ್ಳ (59) ಮೃತಪಟ್ಟಿದ್ದಾರೆ.
ಮಂಗಳವಾರ ನಸುಕಿನ ಜಾವ ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಪುತ್ತೂರು ತಾಲೂಕಿನ ಪೋಳ್ಯ ಎಂಬಲ್ಲಿ ಸಂಭವಿಸಿದೆ.
ಸೋಮವಾರ ರಾತ್ರಿ ಪುತ್ತೂರು ಪಂಚವಟಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕೇಂದ್ರದಲ್ಲಿ ತಂಗಿದ್ದ ವೆಂಕಟ್ರಮಣ ಹೊಳ್ಳ ಅವರು ಮಂಗಳವಾರ ನಸುಕಿನ ಜಾವ 5 ಗಂಟೆ ಸುಮಾರಿಗೆ ಬೈಕ್ನಲ್ಲಿ ಮನೆಗೆ ಮರಳುವ ವೇಳೆ ಈ ಅವಘಡ ಸಂಭವಿಸಿದೆ.
ರಾಮಮಂದಿರ ಹೋರಾಟಗಾರರ ಹತ್ಯೆಗೆ ಸಂಚು! ...
ಪೋಳ್ಯ ಸಮೀಪದ ಪೊಲೀಸ್ ಬ್ಯಾರಿಕೇಡ್ ಬಳಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.