ಕೋಲಾರ ಜಿಲ್ಲೆಯ ಬಂಗಾರಪೇಟೆ ಶಿಕ್ಷಣ ಇಲಾಖೆಯ ಅಧಿಕಾರಿ ಕಳ್ಳಾಟ ಬಟಾ ಬಯಲಾಗಿದೆ. ಶಾಲಾ ನವೀಕರಣಕ್ಕೆ ಅಧಿಕಾರಿಯೊಬ್ಬ ಲಂಚ ಕೇಳಿದ ಆಡಿಯೋ ರಿಲೀಸ್.
ಕೋಲಾರ(ಜ.25): ಶಿಕ್ಷಣ ಇಲಾಖೆಯಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಭ್ರಷ್ಟಾಚಾರವನ್ನ ರುಪ್ಸಾ ಬಯಲು ಮಾಡಿದೆ. ಇಲಾಖೆಯ ಅಧಿಕಾರಿಗಳಿಗೆ ಲಂಚ ಕೊಟ್ಟರಷ್ಟೇ ಶಾಲಾ ನವೀಕರಣ ಮಾಡಲಾಗುತ್ತದೆ. ಇಲಾಖೆಯ ಅಧಿಕಾರಿಗಳ ಭ್ರಷ್ಟಚಾರ ಕುರಿತು ಆಡಿಯೋ, ವೀಡಿಯೋ, ದಾಖಲೆಯನ್ನ ರುಪ್ಸಾ ಬಿಡುಗಡೆ ಮಾಡಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಈ ಮೂಲಕ ಕೋಲಾರ ಜಿಲ್ಲೆಯ ಬಂಗಾರಪೇಟೆ ಶಿಕ್ಷಣ ಇಲಾಖೆಯ ಅಧಿಕಾರಿ ಕಳ್ಳಾಟ ಬಟಾ ಬಯಲಾಗಿದೆ. ಶಾಲಾ ನವೀಕರಣಕ್ಕೆ ಅಧಿಕಾರಿಯೊಬ್ಬ ಲಂಚ ಕೇಳಿದ ಆಡಿಯೋ ರಿಲೀಸ್ ಆಗಿದೆ.
ಭ್ರಷ್ಟಾಚಾರ ಕುರಿತು ತನಿಖೆ ನಡೆಸಿ: ಸಿದ್ದು ಸವಾಲ್
ಶಾಲಾ ನವೀಕರಣಕ್ಕೆ ಶಿಕ್ಷಣ ಇಲಾಖೆಯ ಅಧಿಕಾರಿಯೊಬ್ಬ 15 ಸಾವಿರ ಲಂಚ ಕೇಳಿದರು. ಈ ಕುರಿತು ಎರಡು ಆಡಿಯೋಗಳನ್ನ ರುಪ್ಸಾ ರಿಲೀಸ್ ಮಾಡಿದೆ. ಸರ್ಕಾರಿ ಶಾಲೆಯ ದುರ್ಬಳಕೆ ಮಾಡಿಕೊಂಡ ಮತ್ತೊಂದು ಪ್ರಕರಣ ಕೂಡ ಪ್ರಸ್ತಾಪ ಮಾಡಲಾಗಿದೆ.
