ಕ್ವಿಟ್‌ ಇಂಡಿಯಾ ಚಳವಳಿ ಮಾದರಿಯಲ್ಲಿ ಹೋರಾಟ ಕೈಗೊಳ್ಳಬೇಕು|ರಾಷ್ಟ್ರೀಯ ಪೌರತ್ವ ನೋಂದಣಿಯು ಮಹಾತ್ಮಾ ಗಾಂಧಿ, ಡಾ.ಬಿ.ಆರ್‌.ಅಂಬೇಡ್ಕರ್‌ ಆಶಯಕ್ಕೆ ವಿರುದ್ಧ| ಬಿಜೆಪಿ ಹಾಗೂ ಸಂಘ ಪರಿವಾರ ಪೌರತ್ವ ತಿದ್ದುಪಡಿ ಮಾಡಿ ಕಾಯ್ದೆ ಜಾರಿಗೆ ತರುವ ಮೂಲಕ ಸಂವಿಧಾನಕ್ಕೆ ಕೊಡಲಿ ಪೆಟ್ಟು ಕೊಟ್ಟಿದ್ದಾರೆ|

ಹುಬ್ಬಳ್ಳಿ[ಡಿ.14]: ಪೌರತ್ವ ತಿದ್ದುಪಡಿ ಕಾಯ್ದೆ ಸಂವಿಧಾನ ವಿರೋಧಿ. ಕ್ವಿಟ್‌ ಇಂಡಿಯಾ ಚಳವಳಿಯ ಮಾದರಿಯಲ್ಲಿ ಪೌರತ್ವ ನೋಂದಣಿಯನ್ನು ವಿರೋಧಿಸಬೇಕು, ಹೋರಾಟ ನಡೆಸಬೇಕು ಎಂದು ಸಿಟಿಜನ್‌ ಫಾರ್‌ ಡೆಮಾಕ್ರಸಿಯ ಮುಖ್ಯಸ್ಥ ಎಸ್‌.ಆರ್‌. ಹಿರೇಮಠ ಹೇಳಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಯು ಮಹಾತ್ಮಾ ಗಾಂಧಿ, ಡಾ.ಬಿ.ಆರ್‌.ಅಂಬೇಡ್ಕರ್‌ ಆಶಯಕ್ಕೆ ವಿರುದ್ಧವಾಗಿದೆ. ಆದರೆ ಇದನ್ನು ಬಿಜೆಪಿ ಹಾಗೂ ಸಂಘ ಪರಿವಾರ ಪೌರತ್ವ ತಿದ್ದುಪಡಿ ಮಾಡಿ ಕಾಯ್ದೆ ಜಾರಿಗೆ ತರುವ ಮೂಲಕ ಸಂವಿಧಾನಕ್ಕೆ ಕೊಡಲಿ ಪೆಟ್ಟು ಕೊಟ್ಟಿದ್ದಾರೆ ಎಂದು ಆರೋಪಿಸಿದರು.

ಈ ಕಾಯ್ದೆಯು ಜನರು ಮಾನವೀಯ ಮೌಲ್ಯ, ಸರ್ವ ಜನರು ಭಾತೃತ್ವದಲ್ಲಿ ಇರಬೇಕು ಎಂಬ ಆಶಯಗಳಿಗೆ ತಿಲಾಂಜಲಿ ಹಾಡುವ ಜೊತೆಗೆ ರಾಷ್ಟ್ರದಲ್ಲಿ ಆದ ಸ್ವಾತಂತ್ರ್ಯ ಹೋರಾಟದ ಇತಿಹಾಸವನ್ನು ಹೊಸಕಿ ಹಾಕುವ ಪ್ರಯತ್ನ ಆಗಿದೆ. ಕೂಡಲೇ ರಾಷ್ಟ್ರದ ಎಲ್ಲ ಜನರು ಈ ಹಿಂದೆ ಕ್ವಿಟ್‌ ಇಂಡಿಯಾ ಚಳವಳಿ ಹೋರಾಟದಂತೆ ರಾಷ್ಟ್ರೀಯ ಪೌರತ್ವ ನೋಂದಣಿಯನ್ನು ವಿರೋಧ ಮಾಡಬೇಕೆಂದು ತಿಳಿಸಿದರು.

ನಿಯಮ ಉಲ್ಲಂಘನೆ

ರಾಜ್ಯದಲ್ಲಿ ಉಪ ಲೋಕಾಯುಕ್ತ ಹುದ್ದೆಗೆ ನ್ಯಾಯಮೂರ್ತಿ ಬಿ.ಎಸ್‌. ಪಾಟೀಲ ಅವರನ್ನು ನೇಮಕ ಮಾಡಿರುವುದು ನಿಯಮಗಳ ಉಲ್ಲಂಘನೆಯಾಗಿದ್ದು, ಈ ಹಿನ್ನೆಲೆಯಲ್ಲಿ ಕರ್ನಾಟಕ ಹೈಕೋರ್ಟ್‌ನಲ್ಲಿ ಇದನ್ನು ಪ್ರಶ್ನಿಸಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ಹಾಕಲಾಗಿದ್ದು, ನ್ಯಾಯಾಲಯ ಕೂಡಾ ನಾಲ್ಕು ರಿಸ್ಪೊಂಡಂಟ್‌ಗಳಿಗೆ ನೋಟಿಸ್‌ ಜಾರಿ ಮಾಡಿದೆ ಎಂದು ತಿಳಿಸಿದರು.

ಬೆನಗನಹಳ್ಳಿಯಲ್ಲಿನ 4.20 ಎಕರೆ ಭೂಮಿ ಡಿನೋಟಿಫೀಕೇಶನ್‌ ಪ್ರಕರಣ ಸುಪ್ರೀಂಕೋರ್ಟ್‌ ತ್ರಿಸದಸ್ಯ ಪೀಠದ ಎದುರಿಗೆ ಬಂದಿದ್ದು, ಈ ಹಿನ್ನೆಲೆಯಲ್ಲಿ ಡಿ.ಕೆ. ಶಿವಕುಮಾರ ಹಾಗೂ ಬಿ.ಎಸ್‌. ಯಡಿಯೂರಪ್ಪ ಅವರ ವಿಚಾರಣೆ 2020 ಜ. 7ರಂದು ನಡೆಯಲಿದ್ದು, ಇದನ್ನು ಸಮಾಜ ಪರಿವರ್ತನ ಸಮುದಾಯ ಸ್ವಾಗತಿಸುವುದು ಎಂದರು.