ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಶ್ರೀಗಂಧದ ಮರ ಕಡಿಯುತ್ತಿದ್ದವರ ಮೇಲೆ ಅರಣ್ಯಾಧಿಕಾರಿ ಗುಂಡಿನ ದಾಳಿ ಅರಣ್ಯಾಧಿಕಾರಿಗಳು ಹಾರಿಸಿದ ಗುಂಡಿಗೆ ಓರ್ವ ಸ್ಥಳದಲ್ಲೇ ಸಾವು

ಕುಣಿಗಲ್‌ (ಆ.22): ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಶ್ರೀಗಂಧದ ಮರ ಕಡಿಯುತ್ತಿದ್ದವರ ಮೇಲೆ ಅರಣ್ಯಾಧಿಕಾರಿಗಳು ಹಾರಿಸಿದ ಗುಂಡಿಗೆ ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹುಲಿಯೂರು ದುರ್ಗ ಅರಣ್ಯ ಪ್ರದೇಶ ವ್ಯಾಪ್ತಿಯ ಕೆಂಕೆರೆ ಮೀಸಲು ಅರಣ್ಯದಲ್ಲಿ ನಡೆದಿದೆ. 

Add Asianetnews Kannada as a Preferred SourcegooglePreferred

ಕಲಬುರಗಿ; ಮಕ್ಕಳ ಮೇಲೆ ಕುದಿಯುವ ಎಣ್ಣೆ ಸುರಿದಿದ್ದ ಮಹಿಳೆಗೆ 5 ವರ್ಷ ಶಿಕ್ಷೆ!

ಗುಂಡೇಟಿಗೆ ಬಲಿಯಾದವನ ಗುರುತು ಇನ್ನೂ ಪತ್ತೆಯಾಗಿಲ್ಲ. ಗುಂಡೇಟಿಗೆ ಬಲಿಯಾದವನು ಸೇರಿದಂತೆ ಮೂವರು ಅರಣ್ಯ ಪ್ರದೇಶದಲ್ಲಿ ಶ್ರೀಗಂಧದ ಮರಗಳನ್ನು ಕಡಿಯುತ್ತಿದ್ದರು ಎನ್ನಲಾಗಿದೆ. 

ಈ ವೇಳೆ ಆರೋಪಿಗಳು ಅರಣ್ಯಾಧಿಕಾರಿಗಳ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ಈ ವೇಳೆ ಅರಣ್ಯ ಇಲಾಖೆಯ ಸಿಬ್ಬಂದಿಯೋರ್ವರಿಗೆ ಪೆಟ್ಟಾಗಿದೆ. ಆಗ ಅರಣ್ಯಾಧಿಕಾರಿಗಳು ಹಾರಿಸಿದ ಗುಂಡು ಚೋರನ ಬೆನ್ನಿಗೆ ತಾಗಿ, ಆತ ಸ್ಥಳದಲ್ಲೇ ಸಾವನ್ನಪ್ಪಿದ್ದು, ಉಳಿದವರು ಪರಾರಿಯಾಗಿದ್ದಾರೆ.