ಬೆಲೆ ಏರಿಕೆ ತಡೆಯಲು ಕೇಂದ್ರದಲ್ಲಾಗಲಿ ಅಥವಾ ರಾಜ್ಯದಲ್ಲಾಗಲಿ ಜನಪರ ಸರ್ಕಾರ ಇರಬೇಕು| ಅದಾನಿ, ಅಂಬಾನಿ ಪರವಾದ ಸರ್ಕಾರ ಇರಬಾರದು| ಜನವಿರೋಧಿ ನೀತಿ ಅನುಸರಿಸಿದರೆ ಜನರೇ ಸರ್ಕಾರಕ್ಕೆ ತಕ್ಕ ಉತ್ತರ ನೀಡುತ್ತಾರೆ| ಹಿಂದಿ ಭಾಷಣ, ಕೇಸರಿ ಪೇಟ: ಯಳ್ಳೂರಲ್ಲಿ ಸತೀಶ್‌ ಜಾರಕಿಹೊಳಿ ಪ್ರಚಾರ|

ಬೆಳಗಾವಿ(ಏ.05): ಬೆಳಗಾವಿ ಲೋಕಸಭಾ ಉಪಚುನಾವಣೆ ಕಾಂಗ್ರೆಸ್‌ ಅಭ್ಯರ್ಥಿ ಸತೀಶ್‌ ಜಾರಕಿಹೊಳಿ ಅವರು ಭಾನುವಾರ ಮರಾಠಿ ಭಾಷಿಕರೇ ಹೆಚ್ಚಿರುವ ಯಳ್ಳೂರು ಗ್ರಾಮದಲ್ಲಿ ಹಿಂದಿಯಲ್ಲಿ ಭಾಷಣ ಮಾಡಿದರು. ಅಲ್ಲದೆ, ಕೇಸರಿ ಪೇಟ ಧರಿಸಿ ಮರಾಠಿಗರನ್ನು ಸೆಳೆಯಲು ಯತ್ನಿಸಿದ್ದಾರೆ.

Add Asianetnews Kannada as a Preferred SourcegooglePreferred

ಈ ವೇಳೆ ಮಾತನಾಡಿದ ಜಾರಕಿಹೊಳಿ ಅವರು, ಬೆಲೆ ಏರಿಕೆ ತಡೆಯಲು ಕೇಂದ್ರದಲ್ಲಾಗಲಿ ಅಥವಾ ರಾಜ್ಯದಲ್ಲಾಗಲಿ ಜನಪರ ಸರ್ಕಾರ ಇರಬೇಕು. ಅದಾನಿ, ಅಂಬಾನಿ ಪರವಾದ ಸರ್ಕಾರ ಇರಬಾರದು. ಜನವಿರೋಧಿ ನೀತಿ ಅನುಸರಿಸಿದರೆ ಜನರೇ ಸರ್ಕಾರಕ್ಕೆ ತಕ್ಕ ಉತ್ತರ ನೀಡುತ್ತಾರೆ ಎಂಬ ಸಂದೇಶ ಸಾರಬೇಕಿದೆ ಎಂದು ಮೋದಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

'ರಮೇಶ್ ಜಾರಕಿಹೊಳಿಗೆ ಕೊರೋನಾ ಬಂದಿದೆ'

ಕಳೆದ ನಾಲ್ಕು ತಿಂಗಳಿಂದ ದೆಹಲಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಈವರೆಗೂ ಪ್ರಧಾನಿ ಮೋದಿ ಸ್ಥಳಕ್ಕೆ ಭೇಟಿ ನೀಡಿಲ್ಲ, ಸೆಲೆಬ್ರಿಟಿಗಳ ಹುಟ್ಟುಹಬ್ಬಕ್ಕೆ ಶುಭಾಶಯ ತಿಳಿಸಲು ಮೋದಿ ಅವರಿಗೆ ಸಮಯ ಇದೆ, ರೈತರಿಗಾಗಿ ಸಮಯ ಇಲ್ಲ ಎಂದು ಕಿಡಿಕಾರಿದ್ದಾರೆ.