ಸ್ಥಳೀಯ ಶಾಸಕ ಬಸವರಾಜ ಬೊಮ್ಮಾಯಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಪಟ್ಟಣದ ಹೊರವಲಯದ ಜೋಡು ಮಾರುತಿ ದೇವರಿಗೆ 101 ತೆಂಗಿನಕಾಯಿ ಒಡೆಯಲಾಯಿತು

ಸವಣೂರು (ಆ.15): ಸ್ಥಳೀಯ ಶಾಸಕ ಬಸವರಾಜ ಬೊಮ್ಮಾಯಿ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡರೆ ಪಟ್ಟಣದ ಹೊರವಲಯದ ಜೋಡು ಮಾರುತಿ ದೇವರಿಗೆ 101 ತೆಂಗಿನಕಾಯಿ ಒಡೆಯಲಾಯಿತು.

Add Asianetnews Kannada as a Preferred SourcegooglePreferred

ಹರಕೆ ಹೊತ್ತಿದ್ದ ಪುರಸಭೆ ಅಧ್ಯಕ್ಷೆ ಶೈಲಾ ಮುದಿಗೌಡ್ರ ಶನಿವಾರ ದೇವಸ್ಥಾನದಲ್ಲಿ ಬಿಜೆಪಿ ತಾಲೂಕು ಘಟಕ ಹಾಗೂ ಬೊಮ್ಮಾಯಿ ಅಭಿಮಾನಿ ಬಳಗದ ಸದಸ್ಯರ ಸಮ್ಮುಖದಲ್ಲಿ ಹರಕೆ ತೀರಿಸಿದರು.

ಬೊಮ್ಮಾಯಿ ಸರ್ಕಾರ ಯಾವುದೇ ಸಂದರ್ಭದಲ್ಲಿ ಪತನಗೊಳ್ಳಬಹುದು: ಹೀಗೊಂದು ಭವಿಷ್ಯ

ಮುಖ್ಯಮಂತ್ರಿಯಾಗಿ ಬೊಮ್ಮಾಯಿ ಉತ್ತಮ ಆಡಳಿತ ನೀಡಲಿ ಎಂದು ಈ ವೇಳೆ ಪ್ರಾರ್ಥಿಸಲಾಯಿತು.

ಬಿಜೆಪಿ ತಾಲೂಕು ಘಟಕ ಅಧ್ಯಕ್ಷ ಗಂಗಾಧರ ಬಾಣದ, ಬಿಜೆಪಿ ಸವಣೂರ ಮಂಡಲ ಕಾರ್ಯದರ್ಶಿ ಚೆನ್ನಬಸಯ್ಯ ದುರ್ಗದಮಠ ಇತರರು ಇದ್ದರು.