ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಮುಂಜಾಗ್ರತಾ ಕ್ರಮವಾಗಿ ಕಲಬುರಗಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ
ಕಲಬುರಗಿ, (ಆಗಸ್ಟ್ 04): ಅಯೋಧ್ಯೆಯಲ್ಲಿ ನಾಳೆ ಅಂದ್ರೆ ಬುಧವಾರ ಶ್ರೀ ರಾಮ ಮಂದಿರದ ಭೂಮಿ ಪೂಜೆ ನಡೆಯುತ್ತಿರುವುದರಿಂದ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಮುಂಜಾಗ್ರತಾ ಕ್ರಮವಾಗಿ ಕಲಬುರಗಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಕಲಬುರಗಿ ನಗರದಾದ್ಯಂತ ಆ.4ರ ಮಧ್ಯಾಹ್ನ 3 ಗಂಟೆಯಿಂದ ಆ.6ರ ಬೆಳಿಗ್ಗೆ 6ಗಂಟೆ ವರೆಗೆ ಸಿ.ಆರ್.ಪಿ.ಸಿ. ಕಲಂ.144 ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಪೊಲೀಸ್ ಆಯುಕ್ತ ಎನ್.ಸತೀಷ್ ಕುಮಾರ್ ಆದೇಶ ಹೊರಡಿಸಿದ್ದಾರೆ.
ಆಗಸ್ಟ್ 5ರಂದು ಕರ್ನಾಟಕದಾದ್ಯಂತ ಪೊಲೀಸ್ ಸರ್ಪಗಾವಲು: ಬಾಲ ಬಿಚ್ಚಿದ್ರೆ ಹುಷಾರ್
ಈ ಅವಧಿಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು ಎನ್.ಸತೀಷಕುಮಾರ್ ಅವರು ಆದೇಶದಲ್ಲಿ ತಿಳಿಸಿದ್ದಾರೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಶಂಕುಸ್ಥಾಪನೆ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಈ ಮುಂಜಾಗ್ರತಾ ಕ್ರಮಕೈಗೊಳ್ಳಲಾಗಿದೆ.
ಅಯೋಧ್ಯೆಯಲ್ಲಿ ಆ.5ರಂದು ಶ್ರೀ ರಾಮ ಮಂದಿರದ ಭೂಮಿ ಪೂಜೆ ನಡೆಯಲಿದೆ.
