Asianet Suvarna News Asianet Suvarna News

ರಸಗೊಬ್ಬರಗಳನ್ನು ನಿಗದಿತ ದರಗಳ ಪ್ರಕಾರ ಮಾರಾಟ ಮಾಡಿ: ಕಿರಣಕುಮಾರ್ ಸೂಚನೆ

ಕೃಷಿ ಇಲಾಖೆ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ 2024-2025 ನೇ ಸಾಲಿಗಾಗಿ ಕೃಷಿ ಪರಿಕರ ಮಾರಟಗಾರರ ತರಬೇತಿ ಕಾರ್ಯಕ್ರಮ ಹಾಗೂ ಸಭೆಯನ್ನು ಜಿಲ್ಲಾ ಕೃಷಿ ತರಬೇತಿ ಕೇಂದ್ರ ಸಭಾಂಗಣದಲ್ಲಿ ಇಂದು (ಮೇ.21) ಹಮ್ಮಿಕೊಳ್ಳಲಾಗಿತ್ತು.

sell fertilizers  as per fixed rates say kirankumar at dharwad gvd
Author
First Published May 22, 2024, 6:42 PM IST

ವರದಿ: ಪರಮೇಶ್ ಅಂಗಡಿ, ಏಷ್ಯಾನೆಟ್ ಸುವರ್ಣ ನ್ಯೂಸ್, ಧಾರವಾಡ

ಧಾರವಾಡ (ಮೇ.22): ಕೃಷಿ ಇಲಾಖೆ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ 2024-2025 ನೇ ಸಾಲಿಗಾಗಿ ಕೃಷಿ ಪರಿಕರ ಮಾರಟಗಾರರ ತರಬೇತಿ ಕಾರ್ಯಕ್ರಮ ಹಾಗೂ ಸಭೆಯನ್ನು ಜಿಲ್ಲಾ ಕೃಷಿ ತರಬೇತಿ ಕೇಂದ್ರ ಸಭಾಂಗಣದಲ್ಲಿ ಇಂದು (ಮೇ.21) ಹಮ್ಮಿಕೊಳ್ಳಲಾಗಿತ್ತು. ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಡಾ.ಕಿರಣಕುಮಾರ ಎಂ ಅವರು ತರಬೇತಿ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿ, ಬೀಜ  ಮತ್ತು ರಸಗೊಬ್ಬರಗಳನ್ನು ನಿಗದಿತ ದರಗಳ ಪ್ರಕಾರ ಮಾರಾಟ ಮಾಡುವುಂತೆ ಸೂಚಿಸಿದರು. ಹಾಗೂ ಕಳಪೆ ಗುಣಮಟ್ಟದ ಬೀಜ ಗೊಬ್ಬರ ಮತ್ತು ಕೀಟನಾಶಕಗಳ ಮಾರಾಟ ಕಂಡುಬಂದಲ್ಲಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಅವರು ತಿಳಿಸಿದರು.
 
ಜಿಲ್ಲೆಯಲ್ಲಿ ಸಾಕಷ್ಟು ಪ್ರಮಾಣದ ರಸಗೊಬ್ಬರ ದಾಸ್ತಾನು ಲಭ್ಯವಿದ್ದು ಯಾವುದೇ ಕೊರತೆ ಇರುವುದಿಲ್ಲ ಪರಿಕರ ಮಾರಾಟಗಾರರು ರಸಗೊಬ್ಬರಗಳನ್ನು ಸಂಗ್ರಹಸಿಟ್ಟುಕೊಂಡು, ತಾತ್ಕಾಲಿಕ ಅಥವಾ ಕೃತಕ ಅಭಾವ ಸೃಷ್ಟಿ ಮಾಡದಂತೆ ಎಚ್ಚರಿಸಿದರು.ಮತ್ತು ಬಿಟಿ ಹತ್ತಿಯಲ್ಲಿ ಬರುವ ಗುಲಾಬಿ ಕಾಯಿಕೊರಕದ ಹತೋಟಿ ಬಗ್ಗೆ ಮಾರಾಟಗಾರರಿಗೆ ತಿಳಿಸಿದರು. ಕೃಷಿ ಇಲಾಖೆ ಉಪ ನಿರ್ದೇಶಕಿ ಜಯಶ್ರೀ ಹಿರೇಮಠ ಅವರು ಮಾತನಾಡಿ ರೈತರಿಗೆ ಸಕಾಲಕ್ಕೆ ಬೀಜ, ಗೊಬ್ಬರಗಳನ್ನು ಪೂರೈಕೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಹಾಗೂ ಪರ್ಯಾಯ ರಸಗೊಬ್ಬರಗಳ ಬಗ್ಗೆ ರೈತರಲ್ಲಿ ಅರಿವು ಮೂಡಿಸಲು ತಿಳಿಸಿದರು.

ನ್ಯಾನೋ ಯೂರಿಯಾ ಗೊಬ್ಬರ ಬಗ್ಗೆ ರೈತರಲ್ಲಿ ಜಾಗೃತಿ ಮೂಡಿಸಿ ಅದರ ಉಪಯುಕ್ತತೆ ಬಗ್ಗೆ ಕೃಷಿ ಉತ್ಪನ್ನ ಮಾರಾಟಗಾರರಲ್ಲಿ ಆಸಕ್ತಿ ಮೂಡಿಸಬೇಕು ಎಂದರು ಜಾರಿದಳದ ಸಹಾಯಕ ಕೃಷಿ ನಿರ್ದೇಶಕ ವಿಠಲರಾವ್ ಅವರು  ಮಾತನಾಡಿ, ರಸಗೊಬ್ಬರ ಕಾಯ್ದೆ, ಕೀಟನಾಶಕಿಗಳ ಕಾಯ್ದೆ, ಬೀಜ ನಿಯಂತ್ರಣ ಹಾಗೂ ಅಧಿನಿಯಮಗಳು ಕುರಿತು ಮಾಹಿತಿ ನೀಡಿದರು. ಧಾರವಾಡ ತಾಲೂಕು ಸಹಾಯಕ ಕೃಷಿ ನಿರ್ದೇಶಕ ರಾಜಶೇಖರ ಅಣಗೌಡರ ಅವರು ಮಾತನಾಡಿ, ಮಾರಾಟ ಪರವಾನಿಗೆ ಇಲ್ಲದಿರುವುದು ಅಥವಾ ಪರವಾನಿಗೆ ನವೀಕರಸದೆ ಇರುವುದು, 

ಮನೆಗೆ ಹೋದ್ರೆ ಪೊಲೀಸ್ ಕರೀತಾರೆ, ಪ್ರಶ್ನೆ ಮಾಡಿದ್ರೆ ಹೊಡೀತಾರೆ: ಸಿಪಿವೈ ವಿರುದ್ದ ಅಸಮಾಧಾನ ಹೊರಹಾಕಿದ ಪುತ್ರಿ ನಿಶಾ!

ರಸಗೊಬ್ಬರಗಳನ್ನು ಹೆಚ್ಚಿನ ದರದಲ್ಲಿ ಮಾರಾಟ ಮಾಡುವುದು ಕಂಡು ಬಂದರೆ ಕಾನೂನ ಕ್ರಮ ಕೈಗೊಳ್ಳುವುದಾಗಿ ಹಾಗೂ ನಿಯಮಿತವಾಗಿ ದಾಸ್ತಾನಿನಲ್ಲಿ ಇರುವ ರಸಗೊಬ್ಬರಗಳು ಫಾಸ್ ಮಿಶಿನ್‌ಗೆ ಹೊಂದಾಣಿಕೆ ಇರುವಂತೆ ನೊಡಿಕೊಳ್ಳಲು ತಿಳಿಸಿದರು ರೈತರಿಗೆ ಶಿಫಾರಸ್ಸಿನ ಅಧಾರದಲ್ಲಿ ರಸಗೊಬ್ಬರಗಳನ್ನು ಮಾರಾಟ ಮಾಡುವುದು, ನ್ಯಾನೋ ಯೂರಿಯಾದ ಕುರಿತು ಹೆಚ್ಚಿನ ಅರಿವು ಮೂಡಿಸಿ ಮಾರಾಟ ಮಾಡಲು ತಿಳಿಸಿದರು.  ಕಾರ್ಯಕ್ರಮದಲ್ಲಿ ರೈತ ನುಖಂಡರಾದ ಗಂಗಾಧರ ಕುಲಕರ್ಣಿ, ಹಂಪಣ್ಣವರ ಸೇರಿದಂತೆ ಅನೇಕ ರೈತರು, ಕೃಷಿ ಪರಿಕರಗಳ ಮಾರಾಟಗಾರರು, ಹಾಗೂ ಕೃಷಿ ಅಧಿಕಾರಿಗಳಾದ  ಗುರುಪ್ರಸಾದ,  ರೇಖಾ ಬೆಳ್ಳಟ್ಟಿ,  ಮೋಹನ್ ದಂಡಗಿ ಅವರು  ಉಪಸ್ಥಿತರಿದ್ದರು.

Latest Videos
Follow Us:
Download App:
  • android
  • ios