ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತಿರುವ ಮೋದಿ ಹಾಗೂ ಯಡಿಯೂರಪ್ಪ| ಬಳ್ಳಾರಿ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮಾತ್ರ ಪ್ರಗತಿ ಕಾಣಲು ಸಾಧ್ಯ| 33ನೇ ವಾರ್ಡ್‌ನ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುವ ಭರವಸೆ| 

ಬಳ್ಳಾರಿ(ಏ.21): ನಗರದ 33ನೇ ವಾರ್ಡಿನ ಹಿರಿಯ ಕಾಂಗ್ರೆಸ್‌ ಮುಖಂಡ ಕೆ.ಗೂಳೆಪ್ಪ ಮಾಜಿ ಸಂಸದ ಸಣ್ಣಫಕ್ಕೀರಪ್ಪ ಅವರ ಸಮ್ಮುಖದಲ್ಲಿ ಮಂಗಳವಾರ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.

Add Asianetnews Kannada as a Preferred SourcegooglePreferred

ಇದೇ ವೇಳೆ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಾಜ್ಯದ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಬಳ್ಳಾರಿ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮಾತ್ರ ಪ್ರಗತಿ ಕಾಣಲು ಸಾಧ್ಯವಿದೆ. ಈ ಹಿನ್ನಲೆಯಲ್ಲಿ 33ನೇ ವಾರ್ಡ್‌ನ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಬಿ.ಸುನಿತಾ ಅವರನ್ನು ಬೆಂಬಲಿಸಿ, ಅವರ ಗೆಲುವಿಗೆ ಹಗಲಿರುಳು ಶ್ರಮಿಸಲಾಗುವುದು ಎಂದು ಹೇಳಿದರು.

ಬಳ್ಳಾರಿ: ಕೋವಿಡ್‌ ನಿಯಮ ಉಲ್ಲಂಘಿಸಿ ಜಾತ್ರೆ, ಭಕ್ತರ ಮೇಲೆ ಲಾಠಿ ಚಾರ್ಜ್‌

ಬಿಜೆಪಿ ಅಭ್ಯರ್ಥಿ ಸುನಿತಾ ಅವರು ಮಾತನಾಡಿ, ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಳಿಕ 33ನೇ ಸಮಗ್ರ ಅಭಿವೃದ್ಧಿಗೆ ಕೆಲಸ ಮಾಡಲಾಗುವುದು. ಈ ಭಾಗದ ಮೂಲ ಸೌಕರ್ಯಗಳಿಗೆ ಆದ್ಯತೆ ನೀಡಲಾಗುವುದು ಎಂದು ಭರವಸೆ ನೀಡಿದರು. ಬಿಜೆಪಿ ಅಭ್ಯರ್ಥಿ ಬಿ.ಸುನಿತಾ ಅವರ ಪತಿ ಹನುಮಂತಪ್ಪ ಮತ್ತಿತರರು ಉಪಸ್ಥಿತರಿದ್ದರು.