Asianet Suvarna News Asianet Suvarna News

ಕೊಡಗು ಪ್ರವಾಸೋದ್ಯಮ ಮತ್ತೆ ಆರಂಭ: ಮಾರ್ಗ ಸೂಚಿಗಳು ಹೀಗಿವೆ

ಕೊಡಗು ಜಿಲ್ಲೆಯಲ್ಲಿ ಹೊಟೇಲ್‌, ರೆಸ್ಟೋರೆಂಟ್‌, ರೆಸಾರ್ಟ್‌, ಲಾಡ್ಜ್‌, ಹೋಂಸ್ಟೇಗಳನ್ನು ಜೂನ್‌ 8ರಿಂದ ಪ್ರಾರಂಭಿಸಲು ಸರ್ಕಾರ ಅನುಮತಿ ನೀಡಿದ ಹಿನ್ನೆಲೆ, ಸೂಕ್ತ ಮುಂಜಾಗ್ರತಾ ಕ್ರಮಗಳೊಂದಿಗೆ, ಸಮರ್ಪಕ ಮಾರ್ಗ ಸೂಚಿಗಳನ್ನು ಅಳವಡಿಸಿಕೊಂಡು ಪ್ರವಾಸೋದ್ಯಮ ವಹಿವಾಟು ಪ್ರಾರಂಭಿಸಲು ಪ್ರವಾಸೋದ್ಯಮ ರಂಗದಲ್ಲಿ ಸಕ್ರಿಯವಾಗಿರುವ ವಿವಿಧ ಸಂಸ್ಥೆಗಳು ಒಮ್ಮತದ ತೀರ್ಮಾನಕ್ಕೆ ಬಂದಿವೆ.

Set of rules for kodagu tourism after lockdown
Author
Bangalore, First Published Jun 3, 2020, 10:35 AM IST

ಮಡಿಕೇರಿ(ಜೂ. 03): ಕೊಡಗು ಜಿಲ್ಲೆಯಲ್ಲಿ ಹೊಟೇಲ್‌, ರೆಸ್ಟೋರೆಂಟ್‌, ರೆಸಾರ್ಟ್‌, ಲಾಡ್ಜ್‌, ಹೋಂಸ್ಟೇಗಳನ್ನು ಜೂನ್‌ 8ರಿಂದ ಪ್ರಾರಂಭಿಸಲು ಸರ್ಕಾರ ಅನುಮತಿ ನೀಡಿದ ಹಿನ್ನೆಲೆ, ಸೂಕ್ತ ಮುಂಜಾಗ್ರತಾ ಕ್ರಮಗಳೊಂದಿಗೆ, ಸಮರ್ಪಕ ಮಾರ್ಗ ಸೂಚಿಗಳನ್ನು ಅಳವಡಿಸಿಕೊಂಡು ಪ್ರವಾಸೋದ್ಯಮ ವಹಿವಾಟು ಪ್ರಾರಂಭಿಸಲು ಪ್ರವಾಸೋದ್ಯಮ ರಂಗದಲ್ಲಿ ಸಕ್ರಿಯವಾಗಿರುವ ವಿವಿಧ ಸಂಸ್ಥೆಗಳು ಒಮ್ಮತದ ತೀರ್ಮಾನಕ್ಕೆ ಬಂದಿವೆ.

ಈ ಕುರಿತು ಕೊಡಗು ಹೊಟೇಲ್‌, ರೆಸಾರ್ಟ್‌, ರೆಸ್ಟೋರೆಂಟ್‌, ಅಸೋಸಿಯೇಷನ್‌ ಅಧ್ಯಕ್ಷ ಬಿ.ಆರ್‌.ನಾಗೇಂದ್ರಪ್ರಸಾದ್‌, ಹೋಂ ಸ್ಟೇ ಅಸೋಸಿಯೇಷನ್‌ ಅಧ್ಯಕ್ಷ ಬಿ.ಜಿ.ಅನಂತಶಯನ, ಟ್ರಾವಲ್‌ ಮತ್ತು ಟೂರ್‌ ಅಸೋಸಿಯೇಷನ್‌ ಅಧ್ಯಕ್ಷ ಚೆಯ್ಯಂಡ ಸತ್ಯ ಬಿಡುಗಡೆಗೊಳಿಸಿರುವ ಜಂಟಿ ಹೇಳಿಕೆಯಲ್ಲಿ ಈ ಬಗ್ಗೆ ಮಾಹಿತಿ ನೀಡಲಾಗಿದೆ.

ಅಂತರ್‌ ರಾಜ್ಯ ಸಂಚಾರ ಅವಕಾಶ: ಇವಿಷ್ಟು ನಿಯಮ ಅನುಸರಿಸಲೇ ಬೇಕು

ಹೊಟೇಲ್‌, ರೆಸಾರ್ಟ್‌ ರೆಸ್ಟೋರೆಂಟ್‌, ಅಸೋಸಿಯೇಷನ್‌ ಗೌರವ ಸಲಹೆಗಾರ ಜಿ.ಚಿದ್ವಿಲಾಸ್‌, ಜಿಲ್ಲೆಯಲ್ಲಿ ವ್ಯವಸ್ಥಿತವಾದ ಹಾಗೂ ಪರಿಸರ ರಕ್ಷಿಸುವ ನಿಟ್ಟಿನಲ್ಲಿ ಪ್ರವಾಸೋದ್ಯಮ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವವರು ಹಲವು ಬದಲಾವಣೆಗಳನ್ನು ಹಾಗೂ ನೂತನ ಕ್ರಮಗಳನ್ನು ಅಳವಡಿಸುವ ಬಗ್ಗೆ ಹಲವು ಸಲಹೆಗಳನ್ನು ನೀಡಿದ್ದಾರೆ.

ಅನುಸರಿಸಬೇಕಾದ ಕ್ರಮ:

ಮಾಸ್ಕ್‌ ಧರಿಸುವಿಕೆ ಕಡ್ಡಾಯವಾಗಬೇಕು. ಪ್ರವಾಸಿಗರು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು. ಪ್ರತಿ ಕೋಣೆಯನ್ನೂ ಸ್ಯಾನಿಟೈಸ್‌ ಮಾಡಬೇಕು. ಸ್ವಾಗತ, ಅಡುಗೆ ಕೋಣೆ, ಡೈನಿಂಗ್‌ ಹಾಲ್‌, ಅತಿಥಿಗಳ ಕೊಠಡಿಗಳಲ್ಲಿ ಸ್ಯಾನಿಟೈಸರ್‌ ಇಡಬೇಕು.

ಕೊಠಡಿಯ ಬೆಡ್‌ಶೀಟ್‌, ಇತರ ಬಟ್ಟೆಗಳನ್ನು ಅಂಗೀಕೃತ ಡಿಟರ್ಜೆಂಟ್‌ಗಳನ್ನು ಬಳಸಿಯೇ ಒಗೆಯಬೇಕು. ಊಟ ಬಡಿಸುವ ಸಂದರ್ಭ ನೌಕರರು ಮುಖಗವಸು, ಕೈಗವಸು, ತಲೆಗವಸು ಹೊದ್ದಿರಬೇಕು. ಅತಿಥಿಗಳಿಗೆ ಸೇವಾ ಅಗತ್ಯಕ್ಕೆ ನೌಕರರು ಸದಾ ಲಭ್ಯವಿರಬೇಕು. ಪ್ರವಾಸಿ ಬಂದದ್ದು ಎಲ್ಲಿಂದ ಎಂಬ ಬಗ್ಗೆ ಪ್ರಯಾಣದ ಸಮಗ್ರ ವಿವರವನ್ನು ದಾಖಲಿಸಬೇಕು.

ಚಂಡಮಾರುತ ಹಿನ್ನೆಲೆ ರೈಲುಗಳ ಮಾರ್ಗ ಬದಲಾವಣೆ

ಉಗುಳುವುದನ್ನು ಜಿಲ್ಲಾದ್ಯಂತ ಕಡ್ಡಾಯವಾಗಿ ನಿಷೇಧಿಸಿದ ಆದೇಶವನ್ನು ಪಾಲಿಸುವ ನಾಮಫಲಕಗಳನ್ನು ವಾಸ್ತವ್ಯ ಜಾಗದ ಆವರಣದಲ್ಲಿ ಹಾಕಬೇಕು. ಪರಿಸರ, ನದಿ ಮಾಲಿನ್ಯವಾಗದಂತೆ ಗಮನಹರಿಸಲೇಬೇಕು. ಗ್ರಾ.ಪಂ. ಮಟ್ಟದಲ್ಲಿ ಕಸದಬುಟ್ಟಿಗಳನ್ನು ಅಳವಡಿಸಬೇಕು. ಜಿಲ್ಲಾದ್ಯಂತ ಏಕರೀತಿಯ ಪ್ರವಾಸೋದ್ಯಮ ಮಾರ್ಗಸೂಚಿಯನ್ನು ಸಂಸ್ಥೆಗಳು ಜಂಟಿಯಾಗಿ ಜಾರಿಗೊಳಿಸಬೇಕು.

ಸದ್ಯಕ್ಕೆ ಈಜುಕೊಳ ತೆರೆಯಬಾರದು. ಪ್ರತಿ ಲಾಡ್ಜ್‌, ರೆಸಾರ್ಟ್‌, ಹೋಂಸ್ಟೇಗಳಲ್ಲಿ ಸುಸಜ್ಜಿತ ಚಿಕಿತ್ಸಾ ಪೆಟ್ಟಿಗೆ ಕಡ್ಡಾಯವಾಗಿರಬೇಕು. ತುರ್ತು ಸಂದರ್ಭದಲ್ಲಿ ಲಭ್ಯವಿರುವ ವೈದ್ಯರ ಬಗ್ಗೆ ಕಡ್ಡಾಯವಾಗಿ ಮಾಹಿತಿ ಹೊಂದಿರಬೇಕು.

ಮಂಗಳೂರಿಗೆ ಎನ್‌ಡಿಆರ್‌ಎಫ್‌ ತಂಡ ಆಗಮನ

ಇಂತಹ ಸಂದಿಗ್ಧ ಕಾಲದಲ್ಲಿ ಸಂಸ್ಥೆ ಮಾಲೀಕರು ಪರಿಸ್ಥಿತಿಯನ್ನು ಅರಿತು ತಮ್ಮ ಸಂಸ್ಥೆಯ ಆಗುಹೋಗುಗಳ ಬಗ್ಗೆ ಹೆಚ್ಚಿನ ಗಮನ ನೀಡಬೇಕು. ಜವಾಬ್ದಾರಿಗಳನ್ನು ಕೇವಲ ನೌಕರರಿಗೆ ಬಿಡದೆ ಜಿಲ್ಲೆಯ ಆತಿಥ್ಯವನ್ನು ಪ್ರವಾಸಿಗರು ಗೌರವಿಸುವ ನಿಟ್ಟಿನಲ್ಲಿ ಮಾಲೀಕರು ಕೂಡ ಪಾಲುಗಾರರಾಗಬೇಕು.

ಗುಣಮಟ್ಟಹಾಗೂ ಪೌಷ್ಟಿಕಾಂಶದ ಆಹಾರಕ್ಕೆ ಆದ್ಯತೆ ನೀಡಬೇಕು. ಸಿಸಿ ಕ್ಯಾಮರಾವನ್ನು ಅತಿಥಿ ಗೃಹ ಬಾಗಿಲಲ್ಲಿ ಮಾತ್ರವಲ್ಲದೆ ಹೊರಭಾಗದ ಚಟುವಟಿಕಾ ಪ್ರದೇಶಗಳಲ್ಲೂ ಅಳವಡಿಸಬೇಕು. ಪ್ರವಾಸಿಗರು ಕಡ್ಡಾಯವಾಗಿ ಆರೋಗ್ಯ ಸೇತು ಆ್ಯಪ್‌ ಅನ್ನು ಮೊಬೈಲ್‌ನಲ್ಲಿ ಅಳವಡಿಸಿಕೊಂಡಿರಬೇಕು.

ಮದ್ಯದ ಬಾಟಲ್‌ಗಳು ಹಾಗೂ ಕಸವನ್ನು ರಸ್ತೆ ಹಾಗೂ ಪ್ರವಾಸಿ ಕೇಂದ್ರಗಳಲ್ಲಿ ಬಿಸಾಕದಂತೆ ಪ್ರವಾಸಿಗರ ಗಮನ ಸೆಳೆಯಬೇಕು. ಅಲ್ಲದೆ ಈ ಬಗ್ಗೆ ನಾಮಫಲಕ ಅಳವಡಿಸಬೇಕು. ಪ್ರವಾಸಿಗರನ್ನು ಕರೆದು ತರುವ ವಾಹನ ಚಾಲಕರ ಶುಚಿತ್ವ ಹಾಗೂ ಆರೋಗ್ಯದ ಕಡೆಗೂ ಗಮನಕೊಡಬೇಕು. ಎಲ್ಲ ಹೋಂ ಸ್ಟೇಗಳಲ್ಲೂ ವಾಹನ ಚಾಲಕರಿಗೆ ಪ್ರತ್ಯೇಕ ಶೌಚಾಲಯ ವ್ಯವಸ್ಥೆ ಮಾಡಬೇಕು.

ಬಸ್‌ಗಳಿಗೆ ಪ್ರಯಾಣಿಕರ ಕೊರತೆ: ನಿಯಮ ಉಲ್ಲಂಘಿಸಿದ 15 ಬಸ್‌ಗೆ ದಂಡ

ರೆಸಾರ್ಟ್‌ ಹಾಗೂ ಲಾಡ್ಜ್‌ಗಳಲ್ಲಿ ರಾತ್ರಿಯ ಊಟದ ಸಮಯ ಹಾಗೂ ಅತಿಥಿಗಳು ಕೊಠಡಿ ಸೇರಿಕೊಳ್ಳ ಬೇಕಾದ ಸಮಯ ನಿಗದಿಯಾಗಿರುವಂತೆ ಹೋಂ ಸ್ಟೇಗಳಲ್ಲಿಯೂ ರಾತ್ರಿಯ ಸಮಯ ಕಡ್ಡಾಯಗೊಳಿಸಬೇಕು. ಕೆಲವೊಂದು ಕಡೆ ಅತಿಥಿಗಳಿಗೆ ಹೊಟೇಲ್‌ಗಳಿಂದ ಆಹಾರ ಸರಬರಾಜು ಮಾಡುತ್ತಿದ್ದು, ಈ ಬಗ್ಗೆ ಶುಚಿತ್ವವಿರುವ ಹೊಟೇಲ್‌ಗಳನ್ನೇ ಆಯ್ಕೆ ಮಾಡಿಕೊಳ್ಳು ವುದು ಅತ್ಯಗತ್ಯ.

ಕೊರೊನಾ ಭಯ ಹೋಗುವವರೆಗೆ ಅತಿಥಿಗಳಿಗೆ ಊಟ-ತಿಂಡಿ ಸರಬರಾಜು ಮಾಡುವ ಸಂದರ್ಭದಲ್ಲಿ ಬಾಳೆ ಎಲೆ ಹಾಗೂ ಉಪಯೋಗಿಸಿ ಬಿಸಾಡುವ ತಟ್ಟೆಲೋಟಗಳನ್ನು ಬಳಸುವುದು ಉತ್ತಮ. ಇದರಿಂದ ಪ್ರವಾಸಿಗರಿಗೂ ಆಹಾರ ಸೇವಿಸುವ ಬಗ್ಗೆ ವಿಶ್ವಾಸ ಮೂಡುತ್ತದೆ. ಪ್ರವಾಸಿಗರು ಬಂದಿರುವ ವಾಹನ ಸಂಖ್ಯೆಯನ್ನು ಕಡ್ಡಾಯವಾಗಿ ದಾಖಲಿಸಿ ಕೊಳ್ಳಬೇಕು. ರೆಸಾರ್ಟ್‌, ಅತಿಥಿ ಗೃಹಗಳು ಹಾಗೂ ಹೋಂಸ್ಟೇಗಳು ಅತಿಥಿಗಳಿಗೆ ಏಕ ರೀತಿಯ ಹಲವು ನಿಯಮಗಳನ್ನು ಜಾರಿಗೊಳಿಸಿ, ಅತಿಥಿಗಳು ಬರುವ ಮೊದಲೇ ವಾಟ್ಸಾಪ್‌ ಅಥವಾ ಇಮೇಲ್‌ ಮೂಲಕ ಅವರಿಗೆ ಕಳುಹಿಸಬೇಕು.

ಇಂಥ ಮಾರ್ಗಸೂಚಿ ಅನುಷ್ಠಾನಗೊಳಿಸುವ ಮೂಲಕ ಕೊಡಗು ಪ್ರವಾಸಿಗರಿಗೆ ಸುರಕ್ಷಿತ ಎಂಬ ಭಾವನೆಗೆ ಪ್ರತಿಯೋರ್ವ ಪ್ರವಾಸೋದ್ಯಮಿಯೂ ಕಾರಣರಾಗಬೇಕೆಂದು ನಾಗೇಂದ್ರಪ್ರಸಾದ್‌, ಅನಂತಶಯನ, ಸತ್ಯ ಜಂಟಿ ಹೇಳಿಕೆಯಲ್ಲಿ ಮನವಿ ಮಾಡಿದ್ದಾರೆ.

ಕೋವಿಡ್‌-19ರ ಲಾಕ್‌ಡೌನ್‌ ನಂತರ ಪ್ರಾರಂಭವಾಗುವ ಕೊಡಗು ಜಿಲ್ಲಾ ಪ್ರವಾಸೋದ್ಯಮ ಹೊಸ ರೀತಿಯ ಚಿಂತನೆ, ಯೋಜನೆಗಳಿಂದ ಕೂಡಿರಬೇಕೆಂದೂ ಪ್ರವಾಸೋದ್ಯಮ ಸಂಸ್ಥೆಗಳ ಪ್ರಮುಖರು ಮನವಿ ಮಾಡಿದ್ದಾರೆ.

Follow Us:
Download App:
  • android
  • ios