ತಮ್ಮ ದೇಹವನ್ನು ವೈದ್ಯಕೀಯ ಅಧ್ಯಯನಕ್ಕೆ ದಾನ ನೀಡುವ ಮೂಲಕ ಅವರು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಇವರು ಬೈಲಹೊಂಗಲದ ರಾಮಣ್ಣವರ ಚಾರಿಟೇಬಲ್ ಟ್ರಸ್ಟ್ಗೆ ತಮ್ಮ ದೇಹದಾನದ ಸಂಕಲ್ಪ ಮಾಡಿದ್ದರು. ಅವರ ಇಚ್ಛೆಯಂತೆ ಮೃತದೇಹವನ್ನು ಟ್ರಸ್ಟ್ಗೆ ಹಸ್ತಾಂತರಿಸಲಾಯಿತು.
ಖಾನಾಪುರ(ನ.17): ತಾಲೂಕಿನ ಹಲಸಿ ಗ್ರಾಮದ ನಿವಾಸಿ, ನಿವೃತ್ತ ಪ್ರೌಢಶಾಲಾ ಶಿಕ್ಷಕ ಶಂಕರ ರಾಮಜಿ ಗಂಭೀರ (84) ಬುಧವಾರ ನಿಧನರಾದರು. ಮೃತರು ಪತ್ನಿ, ಮೂವರು ಪುತ್ರರು ಸೇರಿದಂತೆ ಅಪಾರ ಬಂಧು ಬಳಗ ಅಗಲಿದ್ದಾರೆ.
Add Asianetnews Kannada as a Preferred Source

ತಮ್ಮ ದೇಹವನ್ನು ವೈದ್ಯಕೀಯ ಅಧ್ಯಯನಕ್ಕೆ ದಾನ ನೀಡುವ ಮೂಲಕ ಅವರು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಇವರು ಬೈಲಹೊಂಗಲದ ರಾಮಣ್ಣವರ ಚಾರಿಟೇಬಲ್ ಟ್ರಸ್ಟ್ಗೆ ತಮ್ಮ ದೇಹದಾನದ ಸಂಕಲ್ಪ ಮಾಡಿದ್ದರು. ಅವರ ಇಚ್ಛೆಯಂತೆ ಮೃತದೇಹವನ್ನು ಟ್ರಸ್ಟ್ಗೆ ಹಸ್ತಾಂತರಿಸಲಾಯಿತು.
ಎಕರೆಗೆ 4 ಕೋಟಿ ಪರಿಹಾರ ನೀಡುವಂತೆ ಪ್ರಸ್ತಾವನೆ ಸಲ್ಲಿಸಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಟ್ರಸ್ಟ್ ಪರವಾಗಿ ಡಾ.ಮಹಾಂತೇಶ ರಾಮಣ್ಣವರ ಮೃತದೇಹವನ್ನು ತಮ್ಮ ಸುಪರ್ದಿಗೆ ತೆಗೆದುಕೊಂಡರು. ಈ ಸಂದರ್ಭದಲ್ಲಿ ಮೃತರ ಸಂಬಂಧಿಗಳು, ಹಲಸಿ ಗ್ರಾಮದ ಹಿರಿಯರು ಇದ್ದರು.
