ಪುಟ್ಟ ಬಾಲಕರಿಬ್ಬರು ಈಜಲು ಹೋಗಿ ಕೃಷಿ ಹೊಂಡದಲ್ಲಿ ಮುಳುಗಿ ಸಾವಿಗೀಡಾದ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರದಲ್ಲಿ ನಡೆದಿದೆ. 

ಶಿವಮೊಗ್ಗ (ಏ.29) : ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟ ದುರ್ಘಟನೆ ಬುಧವಾರ ಹೊಸನಗರ ತಾಲೂಕಿನಲ್ಲಿ ನಡೆದಿದೆ.

Add Asianetnews Kannada as a Preferred SourcegooglePreferred

ಹೊಸನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬಲಗ ವರಕೋಡು ಗ್ರಾಮದ ಗಿರೀಶ್ ಎಂಬುವವರ ಮಕ್ಕಳಾದ ನವೀನ್ (10) ಹಾಗೂ ಸೃಜನ್ (8) ಇವರಿಬ್ಬರು ಕುಮಾರಸ್ವಾಮಿ ಎಂಬುವವರ ಜಮೀನಿನಲ್ಲಿರುವ ಕೃಷಿ ಹೊಂಡದಲ್ಲಿ ಮುಳುಗಿ ಮೃತಪಟ್ಟಿದ್ದಾರೆ. 

ವಿಜಯಪುರ; ಬಟ್ಟೆ ತೊಳೆಯಲು ಹೋದ ಸಹೋದರರು ನೀರು ಪಾಲು .

ಬುಧವಾರ ಸಂಜೆ ವೇಳೆಗೆ ಮನೆಯಿಂದ ಹೋದ ಮಕ್ಕಳು ಈಜಲು ಕೃಷಿ ಹೊಂಡಕ್ಕೆ ಇಳಿದಿದ್ದಾರೆ, ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಅಣ್ಣತಮ್ಮ ಇಬ್ಬರು ಮೃತಪಟ್ಟಿದ್ದಾರೆ.

ಮೃತ ಬಾಲಕರ ತಂದೆ ಗಿರೀಶ್ ನೀಡಿದ ದೂರಿನ ಮೇರೆಗೆ ಹೊಸನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.