Asianet Suvarna News Asianet Suvarna News

ಶ್ರೀ ಕೃ​ಷ್ಣ​ದೇ​ವ​ರಾ​ಯ ಕಾಲ​ವಾದ ದಿನ ಸ್ಪಷ್ಟ​ವಾಗಿ ತಿಳಿ​ಸು​ವ ಶಾಸನ ಪತ್ತೆ

ಶ್ರೀ ಕೃಷ್ಣ ದೇವರಾಯ ಕಾಲವಾದ ದಿನವನ್ನು ತಿಳಿಸುವ ಸ್ಪಷ್ಟವಾದ ಶಾಸನ ಪತ್ತೆಯಾಗಿದೆ. ಕ್ರಿಸ್ತಶಕ 1529ರ ಅಕ್ಟೋಬರ್‌ 17ರಂದು ಶ್ರೀಕೃಷ್ಣದೇವರಾಯ ಕಾಲ​ವಾ​ದರು ಎಂಬ ಉಲ್ಲೇಖ ಈ ಶಾಸ​ನ​ದ​ಲ್ಲಿ​ದೆ.

Shri krishna Devaraya  Death Inscription Found in Tumakuru snr
Author
Bengaluru, First Published Feb 25, 2021, 9:38 AM IST

ತುಮಕೂರು (ಫೆ.25): ಸಮೀಪದ ಹೊನ್ನೇನಹಳ್ಳಿಯಲ್ಲಿ ವಿಜಯನಗರ ಸಾಮ್ರಾಜ್ಯದ ಕೃಷ್ಣದೇವರಾಯನ ಕಾಲಮಾನ​ವನ್ನು ನಿಖರವಾಗಿ ಸ್ಪಷ್ಟಪಡಿಸುವ ಶಾಸನವೊಂದು ಪತ್ತೆಯಾಗಿದೆ. ಕ್ರಿಸ್ತಶಕ 1529ರ ಅಕ್ಟೋಬರ್‌ 17ರಂದು ಶ್ರೀಕೃಷ್ಣದೇವರಾಯ ಕಾಲ​ವಾ​ದರು ಎಂಬ ಉಲ್ಲೇಖ ಈ ಶಾಸ​ನ​ದ​ಲ್ಲಿ​ದೆ.

ಕ್ರಿಸ್ತ ಶಕ 1336ರಲ್ಲಿ ಹಕ್ಕ, ಬುಕ್ಕರಿಂದ ಆರಂಭವಾದ ವಿಜಯನಗರ ಸಾಮ್ರಾಜ್ಯದ ಶ್ರೀಕೃಷ್ಣ ದೇವರಾಯನ ಸಾವಿನ ಕುರಿತಾದ ನಿಖರತೆ ಈವರೆಗೂ ಇತಿಹಾಸಕಾರರಿಗೆ ಲಭ್ಯವಾಗಿರಲಿಲ್ಲ. ಈವರೆಗೆ ಕೃಷ್ಣದೇವರಾಯ ಮರಣ ಕಾಲವನ್ನು 1529ರ ಅಕ್ಟೋಬರ್‌ ಅಥವಾ ನವೆಂಬರ್‌ ಎಂದು ಅಂದಾಜಿಸಲಾಗಿತ್ತು.

ಆದರೆ ಹೊನ್ನೇ​ನ​ಹ​ಳ್ಳಿ​ಯಲ್ಲಿ ಸಿಕ್ಕಿ​ರುವ ಶಾಸನದಲ್ಲಿ ಶಾಲಿವಾಹನ ಶಕ ವಿರೋಧಿ ನಾಮ ಸಂವತ್ಸರ 1452ರ ಕಾರ್ತಿಕ ಶುದ್ದ15 ಎಂದರೆ ಕ್ರಿಸ್ತಶಕ 1529ರ ಅಕ್ಟೋಬರ್‌ 17ರಂದು ಶ್ರೀಕೃಷ್ಣದೇವರಾಯ ಅಸ್ತಂಗ​ತ​ರಾ​ಗಿ​ದ್ದಾರೆ ಎಂದು ನಮೂದಿಸಿದೆ. 

ಮಂಗಳೂರು: ಅಪೂರ್ವ ತುಳು ಶಾಸನ ಪತ್ತೆ

ಈ ಸಂಬಂಧ ಈ ಶಾಸ​ನ​ವ​ನ್ನು ತುಮಕೂರು ಸೀಮೆಯ ತಿಮ್ಮಣ್ಣ ನಾಯಕರು ಗ್ರಾಮ​ವೊಂದನ್ನು ತುಮಕೂರು ವೀರಪ್ರಸನ್ನ ಹನುಮಂತ ದೇವರ ಪೂಜೆಗಾಗಿ ಧಾರೆ ಎರೆದು ಕೊಟ್ಟಿರುವ ಉಲ್ಲೇ​ಖ​ವಿ​ದೆ. 15 ಸಾಲುಗಳನ್ನು ಒಳಗೊಂಡಿರುವ ಶಾಸನದಲ್ಲಿ 12 ಸಾಲು​ಗ​ಳನ್ನು ಸ್ಪಷ್ಟ​ವಾಗಿ ಓದ​ಬ​ಹು​ದಾ​ಗಿ​ದೆ. ಶಾಸನದ ಮೇಲ್ಭಾಗದಲ್ಲಿ ಶಂಖ, ಚಕ್ರಗಳ ನಡುವೆ ಆಂಜನೇಯನ ಉಬ್ಬು ಚಿತ್ರವಿದ್ದು, ಸೂರ್ಯ, ಚಂದ್ರರ ಗುರುತುಗಳು ಇವೆ. ಶಿಲೆಯ ಹಿಂಭಾಗದಲ್ಲಿ ಮಾರುತಿಯ ಚಿತ್ರವಿದೆ. ಬಾಲದಲ್ಲಿ ಗಂಟೆಯಿದೆ.

Follow Us:
Download App:
  • android
  • ios