Asianet Suvarna News Asianet Suvarna News

ಸಿದ್ಧಗಂಗಾ ಶ್ರೀ ಅಂತಿಮ ದರ್ಶನ ಪಡೆದು ಮರಳುವಾಗ ಅಪಘಾತ

ಸಿದ್ಧಗಂಗಾ ಶ್ರೀ ಶಿವಕುಮಾರ ಸ್ವಾಮೀಜಿ ಲಿಂಗೈಕ್ಯರಾಗಿದ್ದು, ಅವರ ಅಂತಿಮ ದರ್ಶನ ಪಡೆದು ಮರಳುವಾಗ ಅಪಘಾತ ಸಂಭವಿಸಿ ಓರ್ವ ವ್ಯಕ್ತಿ ಸಾವನ್ನಪ್ಪಿ, 6 ಮಂದಿ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. 

Siddaganga Sri Shivakumara Swamy Devotees Car Accident Chikkamagalur
Author
Bengaluru, First Published Jan 22, 2019, 12:28 PM IST

ಚಿಕ್ಕಮಗಳೂರು :  ಸಿದ್ಧಗಂಗಾ ಶ್ರೀಗಳು ಲಿಂಗೈಕ್ಯರಾಗಿದ್ದು, ಅವರ ಅಂತಿಮ ದರ್ಶನ ಪಡೆದು ಮರಳುವಾಗ ಅಪಘಾತ ಸಂಭವಿಸಿದೋರ್ವ ವ್ಯಕ್ತಿ ಸಾವಿಗೀಡಾಗಿದ್ದಾರೆ. 6 ಮಂದಿ ಗಾಯಗೊಂಡಿದ್ದಾರೆ. 

ತುಮಕೂರಿನಿಂದ ತೆರಳುತ್ತಿದ್ದ ವೇಳೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಗೆದ್ಲೆಹಳ್ಳಿಯಲ್ಲಿ ಮರಕ್ಕೆ ಬೊಲೆರೋ ಕಾರು ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ. ಈ ವೇಳೆ ಪರಮೇಶ್ವರಪ್ಪ (40) ಎಂಬ ವ್ಯಕ್ತಿ ಸಾವಿಗೀಡಾಗಿದ್ದಾರೆ. 

ಗಾಯಾಳುಗಳನ್ನು ಕಡೂರು ಆಸ್ಪತ್ರೆಗೆ‌ ದಾಖಲು ಮಾಡಿ, ಚಿಕಿತ್ಸೆ ನೀಡಲಾಗುತ್ತಿದೆ.  ಗಾಯಾಳುಗಳಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಇಬ್ಬರನ್ನು ಶಿವಮೊಗ್ಗ ಆಸ್ಪತ್ರೆಗೆ ರವಾನಿಸಲಾಗಿದೆ.

Follow Us:
Download App:
  • android
  • ios