* ಸ್ವಕ್ಷೇತ್ರ ಬಾದಾಮಿಗೆ ಆಂಬುಲೆನ್ಸ್ ಕಳುಹಿಸಿಕೊಟ್ಟ ಸಿದ್ದರಾಮಯ್ಯ* ಬಾದಾಮಿಗೆ ಆಂಬುಲೆನ್ಸ್  ಜತೆ ಪಿಪಿಇ ಕಿಟ್, ಮಾಸ್ಕ್​ ರವಾನೆ* ಸಿದ್ದರಾಮಯ್ಯ ಬೆಂಬಲಿಗರು ತಾಲೂಕು ಆಡಳಿತಕ್ಕೆ ಹಸ್ತಾಂತರ

ಬಾಗಲಕೋಟೆ, (ಮೇ.16): ಕರ್ನಾಟಕದ ಹಳ್ಳಿ ಹಳ್ಳಿಗೂ ಕೊರೋನಾ ವ್ಯಾಪಿಸಿದ್ದು, ಜನರು ಆತಂಕದಲ್ಲಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಕ್ಷೇತ್ರವಾದ ಬಾದಾಮಿಗೆ ಮೂರು ಆಂಬುಲೆನ್ಸ್ ಗಳನ್ನು ನೀಡಿದ್ದಾರೆ.

ಆಂಬುಲೆನ್ಸ್ ಜತೆ 50 ಪಿಪಿಇ ಕಿಟ್ ಮತ್ತು 100 ಎನ್95 ಮಾಸ್ಕ್​ಗಳನ್ನು ಸಿದ್ದರಾಮಯ್ಯ ಬಾದಾಮಿಗೆ ಕಳುಹಿಸಿಕೊಟ್ಟಿದ್ದಾರೆ. ಇವುಗಳನ್ನು ಇಂದು (ಭಾನುವಾರ) ತಾಲೂಕಿನಲ್ಲಿರುವ ಸಿದ್ದರಾಮಯ್ಯ ಬೆಂಬಲಿಗರು ತಾಲೂಕು ಆಡಳಿತಕ್ಕೆ ಹಸ್ತಾಂತರಿಸಿದ್ದಾರೆ. ಬಾದಾಮಿ ತಹಸೀಲ್ದಾರ್ ಸುಹಾಸ ಇಂಗಳೆ, ಟಿಎಚ್ ಒ ಡಾ.ಎಂ.ಬಿ.ಪಾಟೀಲ ಅವರಿಗೆ ಈ ಹಸ್ತಾಂತರ ಮಾಡಲಾಗಿದೆ.

ರೆಮ್‌ಡಿಸಿವಿರ್ ದಂಧೆಯಲ್ಲಿ ಸಿಕ್ಕಿಬಿದ್ದ ಶಾಸಕರೊಬ್ಬರ ಸಂಬಂಧಿ!

ಇನ್ನು ಕೊರೋನಾ ಸೋಂಕಿತರ ಅನುಕೂಲಕ್ಕಾಗಿ ಪಕ್ಷದ ವತಿಯಿಂದ ಸಹಾಯವಾಣಿ ಆರಂಭಿಸಲು ಸಿದ್ದರಾಮಯ್ಯ ಅವರು ಮುಖಂಡರಿಗೆ ಸೂಚನೆ ನೋಡಿದ್ದಾರೆ. ಕೋವಿಡ್ ಲಸಿಕೆ ಪಡೆಯಲು ಹೆಸರು ನೋಂದಾಯಿಸಿಕೊಳ್ಳುವವರಿಗೆ ಹೆಲ್ಫ್ ಡೆಸ್ಕ್ ಆರಂಭಿಸಲು ತಿಳಿಸಿದ್ದಾರೆ.