2023ರ ಚುನಾವಣೆಗೆ ಈಗಲೇ ಎಲ್ಲಾ ಪಕ್ಷಗಳು ಸಿದ್ಧತೆ ಆರಂಭಿಸಿವೆ. ಇದರ ಬೆನ್ನಲ್ಲೇ  ಕಾಂಗ್ರೆಸ್ ಶಾಸಕ ಜಮೀರ್ ಅಹಮದ್  ಸಿದ್ದರಾಮಯ್ಯ ಅವರ ರಾಜಕೀಯ ಭವಿಷ್ಯದ ಬಗ್ಗೆ ಮಾತನಾಡಿದ್ದಾರೆ. 

ಹುಣಸೂರು (ಫೆ.20): ಸಿದ್ದರಾಮಯ್ಯ ಅವರೇ ನಮ್ಮ ಮುಂದಿನ ಮುಖ್ಯಮಂತ್ರಿ ಎಂದು ಶಾಸಕ ಜಮೀರ್‌ ಅಹ್ಮದ್‌ ಹೇಳಿದರು. 

Add Asianetnews Kannada as a Preferred SourcegooglePreferred

ಶುಕ್ರವಾರ ಪಟ್ಟಣದಲ್ಲಿ ನಡೆದ ಕಾಂಗ್ರೆಸ್‌ ಜನಾಧಿಕಾರ ಸಮಾವೇಶದಲ್ಲಿ ಜಮೀರ್‌ ಅವರು, ಭಾವಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಹೇಳುವ ಮೂಲಕ ಭಾಷಣ ಆರಂಭಿಸಿದರು. 2018ರಲ್ಲಿ ತಪ್ಪು ಮಾಡಿದ್ದೀವಿ ಎಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ. 

ಸಿದ್ದರಾಮಯ್ಯ ಪ್ರಸ್ತಾಪಕ್ಕೆ ಓಕೆ ಎಂದ ರಾಹುಲ್: ಇನ್ಮುಂದೆ ಟಗರು ಆಟ ಶುರು ...

ರಾಜ್ಯದ ಜನರಿಗೆ ಒಳ್ಳೆಯದು ಆಗಬೇಕಾದರೆ ಸಿದ್ದರಾಮಯ್ಯ ಅವರು ಸಿಎಂ ಆಗ್ಬೇಕು. ಸಿದ್ದರಾಮಯ್ಯ ಅವರನ್ನ ಮಾಜಿ ಮುಖ್ಯಮಂತ್ರಿ ಎಂದು ಹೇಳೋಕೆ ಮನಸಾಗ್ತಿಲ್ಲ. ಹೀಗಾಗಿ, ಅವರನ್ನ ಭಾವಿ ಮುಖ್ಯಮಂತ್ರಿ ಎನ್ನುತ್ತೇನೆ ಎಂದು ಹೇಳಿದರು.