ನಮಗೆ ಸಿಗಬೇಕಾದ ನೀರಿನ ಪ್ರಮಾಣ ಪಡೆಯಲು ಹೋರಾಟ ಮಾಡಬೇಕು. ಕಾವೇರಿ ನದಿ ನೀರು ಪ್ರಾಧಿಕಾರ, ಸುಪ್ರೀಂಕೋರ್ಟಿಗೆ ಈ ಬಗ್ಗೆ ಮನವರಿಕೆ ಮಾಡಿಕೊಡಬೇಕು. ಇದಕ್ಕಾಗಿ ಪರಿಣಾಮಕಾರಿ ಜನಾಂದೋಲನ ನಡೆಯಬೇಕು: ಸಾಹಿತಿ ಪ್ರೊ.ಕೆ.ಎಸ್‌. ಭಗವಾನ್‌ 

ಮೈಸೂರು(ಆ.23):  ಕಾವೇರಿ ಸಮಸ್ಯೆ ಪರಿಹಾರಕ್ಕೆ ರಾಷ್ಟ್ರೀಯ ಜಲನೀತಿ ರೂಪಿಸುವುದೇ ಪರಿಹಾರ ಎಂದು ಸಾಹಿತಿ ಪ್ರೊ.ಕೆ.ಎಸ್‌. ಭಗವಾನ್‌ ಹೇಳಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ನಮಗೆ ಸಿಗಬೇಕಾದ ನೀರಿನ ಪ್ರಮಾಣ ಪಡೆಯಲು ಹೋರಾಟ ಮಾಡಬೇಕು. ಕಾವೇರಿ ನದಿ ನೀರು ಪ್ರಾಧಿಕಾರ, ಸುಪ್ರೀಂಕೋರ್ಟಿಗೆ ಈ ಬಗ್ಗೆ ಮನವರಿಕೆ ಮಾಡಿಕೊಡಬೇಕು. ಇದಕ್ಕಾಗಿ ಪರಿಣಾಮಕಾರಿ ಜನಾಂದೋಲನ ನಡೆಯಬೇಕು ಎಂದು ಅವರು ತಿಳಿಸಿದ್ದಾರೆ.

ಆರ್‌ಎಸ್‌ಎಸ್‌ ಎಂದರೆ ರಾಷ್ಟ್ರೀಯ ಸುಳ್ಳುಗಾರರ ಸಂಘ ಎಂದರ್ಥ: ಕೆ.ಎಸ್. ಭಗವಾನ್‌ ಟೀಕೆ

ಕಾವೇರಿ ನೀರನ್ನು ನ್ಯಾಯಬದ್ಧವಾಗಿ ಪಡೆಯುವುದರ ಮೇಲೆ ರಾಜ್ಯದ ಅಭಿವೃದ್ಧಿ ಅವಲಂಬಿತವಾಗಿದೆ. ಒಂದು ಹನಿ ನೀರು ಕೊಡುವುದಿಲ್ಲ ಅಥವಾ ಬಿಡುವುದಿಲ್ಲ ಎಂಬ ಮಾತಿಗೆ ಬದಲಾಗಿ ನಮಗೆ ನ್ಯಾಯಬದ್ಧವಾಗಿ ಬರಬೇಕಾದ ನೀರನ್ನು ಪಡೆಯಲು ಹೋರಾಟ ಮಾಡಬೇಕು ಎಂದು ಅವರು ಸಲಹೆ ಮಾಡಿದ್ದಾರೆ.