ತಾವು ಶೀಘ್ರದಲ್ಲೇ ಬಿಜೆಪಿ ಸೇರ್ಪಡೆಯಾಗುವುದಾಗಿ ಸಚಿವರೋರ್ವರು ಹೇಳಿದರು.
ಕೋಲಾರ [ಆ.25]: ಬಿಜೆಪಿ ನಾಯಕರಿಗೆ ಮನವಿ ಮಾಡಿದ್ದೇನೆ ನನಗೆ ಆ ಖಾತೆ ನೀಡುವ ನಿರೀಕ್ಷೆ ಇದೆ ಎಂದು ಸಚಿವ ನಾಗೇಶ್ ಹೇಳಿದರು.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಅನರ್ಹ ಶಾಸಕರೆಲ್ಲರಿಗೂ ಬಿಜೆಪಿ ಸರಕಾರದಲ್ಲಿ ಸಚಿವ ಸ್ಥಾನ ಖಚಿತ, ಅದಕ್ಕಾಗಿಯೇ ಅರ್ಧದಷ್ಟುಸಚಿವ ಸ್ಥಾನಗಳನ್ನು ಉಳಿಸಿಕೊಳ್ಳಲಾಗಿದೆ. ಶೀಘ್ರದಲ್ಲೇ ನಾನು, ಮಾಜಿ ಶಾಸಕರಾದ ಕೊತ್ತೂರು ಮಂಜುನಾಥ್, ಮಾಲೂರು ಮಾಜಿ ಶಾಸಕ ಮಂಜುನಾಥಗೌಡ ಹಾಗೂ ಚಿಂತಾಮಣಿ ಮಾಜಿ ಶಾಸಕ ಸುಧಾಕರ್ ಬಿಜೆಪಿ ಸೇರ್ಪಡೆಯಾಗಲಿದ್ದೇವೆ ಎಂದು ನಾಗೇಶ್ ಹೇಳಿದರು.
ಬಿಜೆಪಿ ಸರಕಾರದಲ್ಲಿ ನನಗೆ ಇಂಧನ ಖಾತೆ ಸಿಕ್ಕರೆ ಸಂತಸವಾಗುತ್ತದೆ. ನನಗೆ ಇಂಧನ ಇಲಾಖೆಯಲ್ಲಿ ಕೆಲಸ ಮಾಡಿದ ಅನುಭವವಿದೆ ಎಂದು ಸಚಿವ ಎಚ್.ನಾಗೇಶ್ ಮತ್ತೊಮ್ಮೆ ಇಂಧನ ಖಾತೆ ಮೇಲೆ ತಮ್ಮ ಒಲವನ್ನು ವ್ಯಕ್ತಪಡಿಸಿದರು.
