ಬೆಳಗಾವಿಯಲ್ಲಿ ಅಧಿವೇಶನ ನಡೆಸಿ: ಸಿಎಂಗೆ ಹೊರಟ್ಟಿ ಪತ್ರ
* ಅಧಿವೇಶನ ಬೆಳಗಾವಿಯಲ್ಲಿ ಮಾಡಿದರೆ ಸೂಕ್ತ
* ಬೆಳಗಾವಿಯಲ್ಲಿ 2 ವರ್ಷದಿಂದ ಅಧಿವೇಶನ ನಡೆದಿಲ್ಲ
* ವಿಧಾನಸಭೆ ಸ್ಪೀಕರ್ ಹಾಗೂ ನಾನೂ ಒಮ್ಮತ ಸೂಚಿಸಿದ್ದೇನೆ: ಹೊರಟ್ಟಿ
ಹುಬ್ಬಳ್ಳಿ(ಜೂ.30): ಮುಂಬರುವ ಅಧಿವೇಶನವನ್ನು ಬೆಳಗಾವಿಯಲ್ಲಿ ನಡೆಸುವಂತೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದೇನೆ. ಈ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿ ಸರ್ಕಾರ ತೀರ್ಮಾನ ಕೈಗೊಳ್ಳಬೇಕು ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಮಾನ್ಯವಾಗಿ ಅಧಿವೇಶನವನ್ನು ಜೂನ್ನಲ್ಲಿ ಮಾಡಲಾಗುತ್ತದೆ. ಆದರೆ, ಈ ವರ್ಷ ಈ ಬಗ್ಗೆ ಯಾವುದೇ ಪ್ರಕ್ರಿಯೆ ನಡೆದಿಲ್ಲ. ಹೀಗಾಗಿ ಜುಲೈನಲ್ಲಿ ಅಧಿವೇಶನ ನಡೆಯಬಹುದು. ಈ ಅಧಿವೇಶನವನ್ನು ಬೆಳಗಾವಿಯಲ್ಲಿ ಮಾಡಿದರೆ ಸೂಕ್ತ ಎಂದರು.
ಬೆಳಗಾವಿ ಅಧಿವೇಶನ ವೇಳೆ ಶಾಸಕರು ಗೋವಾಕ್ಕೆ ಹೋಗಬೇಡಿ : ಎಚ್ಚರಿಕೆ !
ಬೆಳಗಾವಿಯಲ್ಲಿ 2 ವರ್ಷದಿಂದ ಅಧಿವೇಶನ ನಡೆದಿಲ್ಲ. ವಿಪ ಸದಸ್ಯ ಮಹಾಂತೇಶ ಕವಟಗಿಮಠ ಕೂಡ ಈ ಬಗ್ಗೆ ಮನವಿ ಮಾಡಿದ್ದಾರೆ. ಈ ಬಗ್ಗೆ ವಿಧಾನಸಭೆ ಸ್ಪೀಕರ್ ಹಾಗೂ ನಾನೂ ಒಮ್ಮತ ಸೂಚಿಸಿದ್ದೇನೆ. ಸರ್ಕಾರ ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಬೇಕು. ಈ ಬಗ್ಗೆ ಇನ್ನೊಮ್ಮೆ ಸರ್ಕಾರವನ್ನು ಒತ್ತಾಯಿಸುತ್ತೇನೆ ಎಂದರು.