ಶಾಸಕ ಸಂಗಮೇಶ್ ನಡವಳಿಕೆಗೆ ಸಭಾಪತಿ ಹೊರಟ್ಟಿ ಬೇಸರ
ಜನಪ್ರತಿನಿಧಿಗಳು ಕೆಲ ವಿಚಾರಗಳಲ್ಲಿ ಸಮಾಧಾನದಿಂದ ವರ್ತಿಸಬೇಕು| ಸಭಾಪತಿ ಅಥವಾ ಸ್ಪೀಕರ್ಗೆ ಹೋಗಿ ಮನವಿ ಮಾಡಬೇಕು. ಅದನ್ನು ಬಿಟ್ಟು ಮೈಮೇಲಿನ ಬಟ್ಟೆ ಬಿಚ್ಚುವುದು, ಅಸಹ್ಯಕರ ರೀತಿಯಲ್ಲಿ ವರ್ತಿಸುವುದು ಸರಿಯಲ್ಲ| ಸಾರ್ವಜನಿಕ ಜೀವನದಲ್ಲಿರುವ ಜನಪ್ರತಿನಿಧಿಗಳು ಬಹಳ ಎಚ್ಚರಿಕೆಯಿಂದ ಇರಬೇಕು: ಹೊರಟ್ಟಿ|
ಹುಬ್ಬಳ್ಳಿ(ಮಾ.07): ಶಾಸಕರಾದವರು ಸದನದ ಒಳಗೆ, ಹೊರಗೆ ಗೌರವಯುತವಾಗಿ ನಡೆದುಕೊಳ್ಳಬೇಕು. ಸದನದ ಗೌರವ ಹೆಚ್ಚಿಸುವ ರೀತಿಯಲ್ಲಿ ವರ್ತಿಸಬೇಕು. ಭದ್ರಾವತಿ ಕ್ಷೇತ್ರದ ಶಾಸಕ ಬಿ.ಕೆ. ಸಂಗಮೇಶ್ ಶರ್ಟ್ ಬಿಚ್ಚಿದ ಪ್ರಕರಣದಿಂದ ವೈಯಕ್ತಿಕವಾಗಿ ನನಗೆ ಬಹಳ ನೋವಾಗಿದೆ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಬೇಸರ ವ್ಯಕ್ತಪಡಿಸಿದ್ದಾರೆ.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಜನಪ್ರತಿನಿಧಿಗಳು ಕೆಲ ವಿಚಾರಗಳಲ್ಲಿ ಸಮಾಧಾನದಿಂದ ವರ್ತಿಸಬೇಕು. ಸಭಾಪತಿ ಅಥವಾ ಸ್ಪೀಕರ್ಗೆ ಹೋಗಿ ಮನವಿ ಮಾಡಬೇಕು. ಅದನ್ನು ಬಿಟ್ಟು ಮೈಮೇಲಿನ ಬಟ್ಟೆಬಿಚ್ಚುವುದು, ಅಸಹ್ಯಕರ ರೀತಿಯಲ್ಲಿ ವರ್ತಿಸುವುದು ಸರಿಯಲ್ಲ ಎಂದರು.
ಸದನದಲ್ಲಿ ಶರ್ಟ್ ಬಿಚ್ಚಿದ ಶಾಸಕ ಸಂಗಮೇಶ್, ಸ್ಪೀಕರ್ ಗರಂ
ಸಾರ್ವಜನಿಕ ಜೀವನದಲ್ಲಿರುವ ಜನಪ್ರತಿನಿಧಿಗಳು ಬಹಳ ಎಚ್ಚರಿಕೆಯಿಂದ ಇರಬೇಕು. ಪರಿಷತ್ ಕಲಾಪದ ವೇಳೆ ಮಾಧ್ಯಮವನ್ನು ನಿಷೇಧಿಸುವಂತೆ ಅನೇಕರು ಹೇಳಿದ್ದಾರೆ. ಆದರೆ, ನಾನು ಮಾಧ್ಯಮವನ್ನು ಬ್ಯಾನ್ ಮಾಡಿಲ್ಲ. ಮಾಧ್ಯಮದವರು ಎಷ್ಟು ಜನ ಇರುತ್ತಾರೋ ಅಷ್ಟು ನಮಗೆ ಒಳ್ಳೆಯದು ಎಂದರು.