ರಾಜ್ಯದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಹಲವು ನಾಯಕರು ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಂಚರಿಸಿ ಸಾಂತ್ವನ ಹೇಳಿದರು.
ಹೂವಿನಹಡಗಲಿ [ಆ.12]: ಕಾರಣಾಂತರಗಳಿಂದ ಕೆಲಸಮದಿಂದ ಪರಸ್ಪರ ಮುಖಕೊಟ್ಟು ಮಾತನಾಡದಿದ್ದ ಬಿಜೆಪಿ ಮುಖಂಡ ಬಿ.ಶ್ರೀರಾಮುಲು ಹಾಗೂ ಶಾಸಕ ಕರುಣಾಕರ ರೆಡ್ಡಿ ಅವರು ಭಾನುವಾರ ಜತೆಯಾಗಿಯೇ ನೆರೆ ಪರಿಶೀಲನೆ ನಡೆಸಿದರು.
Add Asianetnews Kannada as a Preferred Source

ಮಾಜಿ ಸಚಿವ ಜನಾರ್ದನ ರೆಡ್ಡಿ ಮತ್ತು ಸಹೋದರ ಕರುಣಾಕರ ರೆಡ್ಡಿ ನಡುವೆ ಹಲವು ವರ್ಷಗಳಿಂದ ವೈಮನಸ್ಸು ಮುಂದುವರಿದುಕೊಂಡು ಬಂದಿದ್ದು, ಈ ಹಿನ್ನೆಲೆಯಲ್ಲಿ ಶ್ರೀರಾಮುಲು ಅವರು ಕರುಣಾಕರ ರೆಡ್ಡಿಯಿಂದ ಅಂತರ ಕಾಯ್ದುಕೊಂಡಿದ್ದರು. ಜತೆಗೆ, ಹಿಂದೊಮ್ಮೆ ಕರುಣಾಕರ ರೆಡ್ಡಿ ಅವರು ಶ್ರೀರಾಮುಲು ವಿರುದ್ಧ ಅಸಮಾಧಾನವನ್ನೂ ವ್ಯಕ್ತಪಡಿಸಿದ್ದರು.
ರೇಣುಕಾಚಾರ್ಯ ತೆಪ್ಪದ ನಾಟಕ; ಶ್ರೀರಾಮುಲು ಕಬಡ್ಡಿ ಆಟ; ಸಾರ್ಥಕವಾಯ್ತು ಶಾಸಕರೇ!
ಆದರೆ, ಪ್ರವಾಹದ ಈ ಸಂದರ್ಭದಲ್ಲಿ ಇಬ್ಬರೂ ಪರಸ್ಪರ ವಿರೋಧ ಮರೆತು ಹರಪನಹಳ್ಳಿ, ಹೂವಿನಹಡಗಲಿ ಸೇರಿದಂತೆ ಉಳಿದೆಡೆ ಪರಿಶೀಲನೆ ನಡೆಸಿದ್ದು ಎಲ್ಲರ ಹುಬ್ಬೇರುವಂತೆ ಮಾಡಿತು.
