ಕಡಬ ಪೊಲೀಸ್‌ ಠಾಣಾ ವ್ಯಾಪ್ತಿಯ ಕೊಂಬಾರು ಗದ್ದೆ ಮನೆ ನಿವಾಸಿ ತಿಮ್ಮಪ್ಪ ಗೌಡ ಎಂಬುವರ ಪುತ್ರ, ಹತ್ತನೇ ತರಗತಿ ವಿದ್ಯಾರ್ಥಿ ನಂದನ್‌ ಕುಮಾರ್‌ ನೇಣುಬಿಗಿದು ಆತ್ಮಹತ್ಯೆ ಮಾಡಿದ ಘಟನೆ ಗುರುವಾರ ನಡೆದಿದೆ.

ಉಪ್ಪಿನಂಗಡಿ(ಮೇ 22): ಕಡಬ ಪೊಲೀಸ್‌ ಠಾಣಾ ವ್ಯಾಪ್ತಿಯ ಕೊಂಬಾರು ಗದ್ದೆ ಮನೆ ನಿವಾಸಿ ತಿಮ್ಮಪ್ಪ ಗೌಡ ಎಂಬುವರ ಪುತ್ರ, ಹತ್ತನೇ ತರಗತಿ ವಿದ್ಯಾರ್ಥಿ ನಂದನ್‌ ಕುಮಾರ್‌ ನೇಣುಬಿಗಿದು ಆತ್ಮಹತ್ಯೆ ಮಾಡಿದ ಘಟನೆ ಗುರುವಾರ ನಡೆದಿದೆ.

Add Asianetnews Kannada as a Preferred SourcegooglePreferred

ಸುಬ್ರಹ್ಮಣ್ಯ ಕೆ.ಎಸ್‌.ಎಸ್‌. ಕಾಲೇಜಿನಲ್ಲಿ ಹತ್ತನೇ ತರಗತಿಯಲ್ಲಿ ಕಲಿಯುತ್ತಿದ್ದ ಈತ, ಕಳೆದ ಒಂದು ವರ್ಷದಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ. ಈತ ಗುರುವಾರ ಬೆಳಗ್ಗಿನ ಉಪಹಾರ ಸೇವಿಸಿ ಮನೆಯಿಂದ ಹೊರ ಹೋದವನು ಹಿಂತಿರುಗಲಿಲ್ಲ.

ದುಬೈ ಮೂಲದ ಸೋಂಕು ಪ್ರಬಲ: ಮಂಗಳೂರಲ್ಲಿ ಹೆಚ್ಚಿದ ಪ್ರಕರಣ

ಹುಡುಕಾಡಿದಾಗ ಮನೆ ಸಮೀಪ ಮರದಕೊಂಬೆಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ. ಮೃತನು ತಂದೆ, ತಾಯಿ, ಇಬ್ಬರು ಸಹೋದರಿಯರನ್ನು ಅಗಲಿದ್ದಾನೆ. ಕಡಬ ಪೊಲೀಸರಿಂದ ತನಿಖೆ ನಡೆಯುತ್ತಿದೆ.

[ಸಮಸ್ಯೆಗಳು ಜೀವನದ ಅವಿಭಾಜ್ಯ ಅಂಗ. ಸಮಸ್ಯೆಯಿಲ್ಲದ ಮನುಷ್ಯನಿಲ್ಲ. ಯಾವುದೇ ಸಮಸ್ಯೆ ಜೀವನದ ಅಂತ್ಯವಲ್ಲ. ಆತ್ಮಹತ್ಯೆ ಆಲೋಚನೆ ಹೊಳೆದರೆ ಸರ್ಕಾರದ ಸಹಾಯವಾಣಿಗೆ ಕರೆ ಮಾಡಿ: 080 25497777 ಅಥವಾ ಆರೋಗ್ಯ ಸಹಾಯವಾಣಿ 104 ಗೆ ಕರೆ ಮಾಡಿ]