ತುಂಗಾನದಿಯಲ್ಲಿ ಮುಳುಗಿ ವಿದ್ಯಾರ್ಥಿ ಸಾವು | ಪ್ರವಾಸಕ್ಕೆಂದು ಬಂದಿದ್ದ ವೇಳೆ ದುರ್ಘಟನೆ |
ಚಿಕ್ಕಮಗಳೂರು (ನ. 05): ದೇವಾಲಯದ ಶೌಚಗೃಹದಲ್ಲಿ ಸ್ನಾನಕ್ಕೆ 20 ರೂಪಾಯಿ ಕೇಳಿದರೆಂದು ತುಂಗಾ ನದಿಯಲ್ಲಿ ಸ್ನಾನ ಮಾಡುವಾಗ ಪ್ರವಾಸಕ್ಕೆ ಬಂದಿದ್ದ 9 ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರೋ ಘಟನೆ ಶೃಂಗೇರಿ ತಾಲೂಕಿನ ತುಂಗಾ ನದಿಯಲ್ಲಿ ನಡೆದಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಹಲಸೂರು ಪ್ರಿಯದರ್ಶಿನಿ ಪ್ರೌಢಶಾಲೆಯ ತರುಣ್ ಗೌಡ ಮೃತ ವಿದ್ಯಾರ್ಥಿ. ಶಾಲೆಯಿಂದ ಸುಮಾರು 60 ವಿದ್ಯಾರ್ಥಿಗಳು ಶೃಂಗೇರಿಗೆ ಪ್ರವಾಸಕ್ಕೆ ಬಂದಿದ್ದರು. ಈ ವೇಳೆ ಮಕ್ಕಳು ಸ್ನಾನಕ್ಕೆ ಬಂದಾಗ ಶೌಚಗೃಹದವರು ಒಬ್ಬರಿಗೆ 20 ರೂಪಾಯಿ ಕೇಳಿದ್ದಾರೆ. ಹಣ ಜಾಸ್ತಿಯಾಯಿತೆಂದು ಎಲ್ಲರೂ ತುಂಗಾ ನದಿಗೆ ಸ್ನಾನಕ್ಕೆ ಹೋದಾಗ ಈ ದುರ್ಘಟನೆ ಸಂಭವಿಸಿದೆ.
ಸ್ಥಳಿಯರು ಹಾಗೂ ಪೊಲೀಸರ ಸಹಕಾರದಿಂದ ಸುಮಾರು ಒಂದು ಗಂಟೆಯ ಬಳಿಕ ವಿದ್ಯಾರ್ಥಿಯ ಮೃತದೇಹವನ್ನ ನೀರಿನಿಂದ ಮೇಲೆತ್ತಿದ್ದಾರೆ. ಶೃಂಗೇರಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
