ಪ್ರತಿಭಾವಂತ ವಿದ್ಯಾರ್ಥಿಯ ಭವಿಷ್ಯ ಮಣ್ಣು ಪಾಲು| ಪಿಯು ಪರೀಕ್ಷೆಯ ಎಲ್ಲ ವಿಷಯದಲ್ಲಿ 90 ರ ಮೇಲ್ಪಟ್ಟು ಅಂಕ ಪಡೆದು, ಪಿಯು ಪರೀಕ್ಷಾ ಮಂಡಳಿಯ ಯಡವಟ್ಟಿನಿಂದ ಇಂಗ್ಲಿಷ್ ವಿಷಯದಲ್ಲಿ ಫೇಲ್ ಆದ ವಿದ್ಯಾರ್ಥಿ| ಗದಗ ಜಿಲ್ಲೆ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದಲ್ಲಿ ನಡೆದ ಘಟನೆ|

ಗದಗ(ಆ.02): ಪಿಯು ಪರೀಕ್ಷಾ ಮಂಡಳಿ ಯಡವಟ್ಟಿಗೆ ವಿದ್ಯಾರ್ಥಿಯೊಬ್ಬ ತೊಂದರೆಗೆ ಸಿಲುಕಿದ ಘಟನೆ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದಲ್ಲಿ ನಡೆದಿದೆ. ಈ ಮೂಲಕ ವಿದ್ಯಾರ್ಥಿಯ ಭವಿಷ್ಯದ ಜೊತೆ ಪಿಯು ಪರೀಕ್ಷಾ ಮಂಡಳಿ ಚೆಲ್ಲಾಟವಾಡುತ್ತಿದೆ. 

Add Asianetnews Kannada as a Preferred SourcegooglePreferred

ಹೌದು, ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದ ಶಬ್ಬೀರ್ ಖಾಜಿ ಎಂಬ ವಿದ್ಯಾರ್ಥಿಯೇ ಪಿಯು ಪರೀಕ್ಷಾ ಮಂಡಳಿ ಯಡವಟ್ಟಿಗೆ ತೊಂದರೆ ಅನುಭವಿಸುತ್ತಿದ್ದಾನೆ. ಕೆಇಎಸ್ ಪಿಯು ಕಾಲೇಜಿನ ವಿದ್ಯಾರ್ಥಿ ಶಬ್ಬೀರ್ ಖಾಜಿ ದ್ವಿತೀಯ ಪಿಯು ಪರೀಕ್ಷೆಯ ಎಲ್ಲ ವಿಷಯದಲ್ಲಿ 90 ರ ಮೇಲ್ಪಟ್ಟು ಅಂಕ ಪಡೆದಿದ್ದಾನೆ. ಆದರೆ, ಪಿಯು ಪರೀಕ್ಷಾ ಮಂಡಳಿಯ ಯಡವಟ್ಟಿನಿಂದ ಇಂಗ್ಲಿಷ್ ವಿಷಯದಲ್ಲಿ ಫೇಲ್ ಆಗಿದ್ದಾನೆ. ಈ ಸಂಬಂಧ ಶಬ್ಬೀರ್ ಖಾಜಿ ಉತ್ತರ ಪ್ರತಿಕೆಯ ಫೋಟೋ ಕಾಪಿ ತರಿಸಿ ನೊಡಿದರೆ 54 ಅಂಕ ಪಡೆದಿದ್ದಾನೆ. ಹೀಗಾಗಿ ಶಬ್ಬೀರ್ ಖಾಜಿ ಮೌಲ್ಯ ಮಾಪನದ ಮೊರೆ ಹೋಗಿದ್ದ, ಮರು ಮೌಲ್ಯ ಮಾಪನದಲ್ಲೂ ಈ ವಿದ್ಯಾರ್ಥಿ ಉತೀರ್ಣ ಬಗ್ಗೆ ಸರಿಯಾದ ಮಾಹಿತಿ ನೀಡಿಲ್ಲ.

ಗದಗ ನಗರದಲ್ಲೂ ಭೂ ಕುಸಿತ: ಆತಂಕದಲ್ಲಿ ಜನತೆ..! 

ಹೀಗಾಗಿ ಪಿಯು ಪರೀಕ್ಷಾ ಮಂಡಳಿ ಯಡವಟ್ಟಿಗೆ ಶಬ್ಬೀರ್ ಖಾಜಿ ಸಮಸ್ಯೆ ಎದುರಿಸುತ್ತಿದ್ದಾನೆ. ಈ ಬಗ್ಗೆ ಜಿಲ್ಲೆಯ ಶಿಕ್ಷಣ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದರೂ ಕೂಡ ಅಧಿಕಾರಿಗಳು ಮಾತ್ರ ಇದಕ್ಕೂ ತಮಗೂ ಯಾವುದೇ ಸಂಬಂಧವಿಲ್ಲವೇನೋ ಎಂಬಂತೆ ವರ್ತಿಸುತ್ತಿದ್ದಾರೆ. ಇದರಿಂದಾಗಿ ವಿದ್ಯಾರ್ಥಿ ಶಬ್ಬೀರ್ ಅತಂತ್ರ ಸ್ಥಿತಿಯಲ್ಲಿದ್ದಾನೆ. 

ಈ ಬಗ್ಗೆ ಮಾತನಾಡಿದ ವಿದ್ಯಾರ್ಥಿ ಶಬ್ಬೀರ್ ಖಾಜಿ, ದಯವಿಟ್ಟು ನನ್ನ ಭವಿಷ್ಯದ ಬಗ್ಗೆ ಶಿಕ್ಷಣ ಇಲಾಖೆ ಗಮನ ಹರಿಸಬೇಕು ಅಂತ ಮನವಿ ಮಾಡಿಕೊಂಡಿದ್ದಾನೆ.