ಮಂತ್ರಾಲಯಕ್ಕೆ ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥೆ ಸುಧಾಮೂರ್ತಿ 13 ಕೋಟಿ ದೇಣಿಗೆ ನೀಡಿದ್ದಾರೆ
ರಾಯಚೂರು (ನ.21) : ಮಂತ್ರಾಲಯದಲ್ಲಿ ಸುಸಜ್ಜಿತ ಸ್ನಾನಘಟ್ಟನಿರ್ಮಿಸಲು ಇಸ್ಫೋಸಿಸ್ ಪ್ರತಿಷ್ಠಾನದ ಮುಖ್ಯಸ್ಥೆ ಸುಧಾಮೂರ್ತಿ ಅವರು 13 ಕೋಟಿ ದೇಣಿಗೆ ನೀಡಿರುವುದಾಗಿ ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮೀಜಿ ತಿಳಿಸಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಶುಕ್ರವಾರ ಕ್ಷೇತ್ರದಲ್ಲಿ ನಡೆದ ಪುಷ್ಕರ ಮಹೋತ್ಸವವನ್ನು ಉದ್ದೇಶಿಸಿ ಮಾತನಾಡಿದ ಶ್ರೀಗಳು ಈ ವಿಷಯ ತಿಳಿಸಿದರು
ಮೈಸೂರು ಝೂಗೆ 20 ಲಕ್ಷ ರು. ದೇಣಿಗೆ ಕೊಟ್ಟ ಸುಧಾಮೂರ್ತಿ ...
ಶ್ರೀಮಠದ ತುಂಗಾನದಿತೀರದಲ್ಲಿ ಸುಸಜ್ಜಿತ, ಸುಂದರ, ಸಕಲ ಸವಲತ್ತುಗಳಿರುವ ಸ್ನಾನಘಟ್ಟನಿರ್ಮಿಸಲು ನಿರ್ಧರಿಸಲಾಗಿದೆ. ಅದಕ್ಕಾಗಿ ಶ್ರಿಮಠದ ಅಂತರಂಗ ಭಕ್ತರಾದ ಇಸ್ಫೋಸಿಸ್ನ ಸುಧಾಮೂರ್ತಿ ಅವರು .13 ಕೋಟಿ ದೇಣಿಗೆ ನೀಡಿದ್ದಾರೆ. ಈ ವರ್ಷದಲ್ಲಿ ಸ್ನಾನಘಟ್ಟದ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು.
