Asianet Suvarna News Asianet Suvarna News

ಸುಡುಗಾಡು ಸಿದ್ದರಿಗೆ ಹೊಸ ಬಡಾವಣೆ ಸಿಗೋದು ಯಾವಾಗ? ಜೋಪಡಿಯಲ್ಲಿದೆ 50ಕ್ಕೂ ಹೆಚ್ಚಿನ ಕುಟುಂಬ!

ದಶಕದಿಂದ ನೆನೆಗುದಿಗೆ ಬಿದ್ದಿರುವ ಸಿದ್ದರಾಮೇಶ್ವರ ಬಡಾವಣೆ ನಿರ್ಮಾಣ ಕಾರ್ಯ. ಬಿಸಿಲು, ಮಳೆ, ಗಾಳಿಗೆ ಬಳಲಿವೆ ಇಲ್ಲಿ ಜೋಪಡಿಯಲ್ಲಿರುವ 50ಕ್ಕೂ ಹೆಚ್ಚಿನ ಕುಟುಂಬಗಳು

Sudugadu Siddha tribe community seeks protection and basic needs  family living in Tent house in Chitradurga gow
Author
First Published May 8, 2024, 1:15 PM IST

ಬಿಜಿಕೆರೆ ಬಸವರಾಜ 

ಮೊಳಕಾಲ್ಮೂರು (ಮೇ.8): ಸರ್ಕಾರ ಸಿದ್ದರಾಮೇಶ್ವರ ಬಡಾವಣೆ ಮುಂಜೂರು ಮಾಡಿ ದಶಕ ಕಳೆದರೂ ಅಧಿಕಾರಿಗಳ ಅಸಡ್ಡೆಯಿಂದಾಗಿ ಸುಡುಗಾಡು ಸಿದ್ದರಿಗೆ ಸೂರು ಇಲ್ಲದೆ ಇಂದಿಗೂ ಹಳೆ ಜೋಪಡಿಗಳಲ್ಲಿ ಬದುಕುವಂತಾಗಿದೆ.

ಹೌದು ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ರಾಯಾಪುರ ಗ್ರಾಮದ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಜೋಪಡಿಗಳನ್ನು ನಿರ್ಮಿಸಿಕೊಂಡು ವಾಸ ಮಾಡುತ್ತಿರುವ ಹತ್ತಾರು ಕುಟುಂಬಗಳಿಗೆ ಒಂದೇ ಕಡೆ ಸೂರು ಕಲ್ಪಿಸಲು ಪ್ರತ್ಯೇಕ ಬಡಾವಣೆ ನಿರ್ಮಾಣಕ್ಕಾಗಿ 2017-18 ನೇ ಸಾಲಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ತೀರ್ಮಾನಿಸಲಾಯಿತು. ಅಂದಿನ ಸಮಾಜ ಕಲ್ಯಾಣ ಮಂತ್ರಿ ಎಚ್. ಆಂಜನೇಯ ಸಿದ್ದರಾಮೇಶ್ವರ ಬಡಾವಣೆ ಮುಂಜೂರು ಮಾಡಿ ಅನುದಾನ ಒದಗಿಸಿದ್ದು ಇತಿಹಾಸ.

ಹಾಸನ: ಅನುಮಾನಸ್ಪದ ಸಾವು, ಅಂತ್ಯಸಂಸ್ಕಾರ ಮಾಡಿದ ಶವ 6 ತಿಂಗಳ ಬಳಿಕ ಹೊರತೆಗೆದು ಪರೀಕ್ಷೆ!

ಪ್ರತ್ಯೇಕ ಬಡಾವಣೆ ನಿರ್ಮಾಣಕ್ಕಾಗಿ ರಾಯಾಪುರ ರೇಷ್ಮೆ ಫಾರಂ ಬಳಿ ನಾಲ್ಕು ಎಕರೆ ಜಮೀನು ಗುರುತಿಸಿ ಸ್ವಚ್ಛಗೊಳಿಸಿ ರಸ್ತೆ, ಚರಂಡಿ, ಕುಡಿಯುವ ನೀರು, ವಿದ್ಯುತ್ ಸಂಪರ್ಕ, ಆಟದ ಮೈದಾನ ಸೇರಿ ಅಗತ್ಯ ಮೂಲ ಭೂತ ಸೌಕರ್ಯ ಕಲ್ಪಿಸಿ ಒಂದು ಕೋಟಿಗೂ ಅಧಿಕ ವೆಚ್ಚದಲ್ಲಿ ಬಡಾವಣೆಯನ್ನು ಅಭಿವೃದ್ಧಿ ಪಡಿಸಲಾಗಿತ್ತು. ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಕಳೆದ ಹತ್ತು ವರ್ಷಗಳಿಂದ ವಸತಿ ಸೌಲಭ್ಯ ಕಲ್ಪಿಸದ ಪರಿಣಾಮ ಸುಡುಗಾಡು ಸಿದ್ದರು ವಾಸ ಮಾಡುವ ಜಾಗ ಹೊರತು ಪಡಿಸಿ ಆಟದ ಮೈದಾನ, ಶಾಲೆ, ಅಂಗನವಾಡಿ ಕಟ್ಟಡದ ಜಾಗದಲ್ಲಿ ಜಾಲಿ ಮುಳ್ಳಿನ ಗಿಡಗಳು ಬೆಳೆದು ನಿಂತಿವೆ.

ಪ್ರತ್ಯೇಕ ಬಡಾವಣೆ ನಿರ್ಮಿಸಿ: ಕಳೆದೊಂದು ದಶಕದಿಂದ ವಸತಿ ಸೌಲಭ್ಯಕ್ಕಾಗಿ ಅಲೆದಾಡುತ್ತಿರುವ ಸುಡುಗಾಡು ಸಿದ್ದರಿಗೆ ಈವರೆಗೂ ನಿವೇಶನ ಹಂಚಿಕೆಯಾಗಿಲ್ಲ. ಜಮೀನು ಅಭಿವೃದ್ಧಿ ಪಡಿಸಿದ್ದು ಹೊರತು ಪಡಿಸಿದರೆ ಉಳಿದಂತೆ ಯಾವುದೇ ಕೆಲಸ ಆಗಿಲ್ಲ. ಇಲ್ಲಿನ ಗ್ರಾಪಂ ಹಕ್ಕು ಪತ್ರ ವಿತರಣೆಗೆ ಪಲಾನುಭವಿಗಳನ್ನು ಗುರುತಿಸಿದೆ ಎನ್ನಲಾಗುತ್ತಿದ್ದರೂ ಈವರೆಗೂ ವಿತರಣೆಯಾಗಿಲ್ಲ. ಇದರಿಂದ ಅಲಕ್ಷಿತ ಸಮುದಾಯವನ್ನು ಸಮಾಜದ ಮುಖ್ಯವಾಹಿನಿಗೆ ಕರೆತರುವಂತ ಸರ್ಕಾರದ ಮಹತ್ವದ ಯೋಜನೆ ನೆನೆಗುದಿಗೆ ಬಿದ್ದಂತಾಗಿದೆ.

ರಾಗಿ ಇಳುವರಿ ಕುಂಠಿತ: ಮಾರಾಟಕ್ಕೆ ಹಿಂಜರಿಕೆ, ಕೇವಲ 6857 ರೈತರಿಂದ ಪೂರೈಕೆ!

ಈವರೆಗೂ ಶಾಲೆ, ಅಂಗನವಾಡಿ ಕಟ್ಟಡ ನಿರ್ಮಾಣವಾಗಿಲ್ಲ. ಅಲ್ಲಿನ ಮಕ್ಕಳು 2 ಕಿ.ಮೀ ದೂರದ ರಾಯಾಪುರ ಅಥವಾ ಸಮೀಪದ ಮಲಿಯಮ್ಮನಹಟ್ಟಿ ಸರ್ಕಾರಿ ಶಾಲೆಗೆ ಆಗಮಿಸಬೇಕಿದೆ. ಪಡಿತರಕ್ಕಾಗಿ 2 ಕಿ ಮೀ ಸಾಗಬೇಕಿದೆ. ಐದು ವರ್ಷದೊಳಗಿನ ಮಕ್ಕಳಿಗೆ ಅಂಗವಾಡಿಯ ಸೌಲಭ್ಯ ಇಲ್ಲದಾಗಿದೆ ಎನ್ನಲಾಗುತ್ತಿದೆ.

ಆಟಿಕೆ ಸಾಮಾನು, ಸೂಜಿ ಪಿನ್ನು, ಕೂದುಲು, ಚಿಕ್ಕ ಪುಟ್ಟ ಪ್ಲಾಸ್ಟಿಕ್ ವಸ್ತುಗಳ ವ್ಯಾಪಾರ ಮಾಡಿಕೊಂಡು ಮುರುಕು ಜೋಪಡಿಗಳಲ್ಲಿ ಬದುಕು ಕಟ್ಟಿಕೊಂಡಿರುವ 50ಕ್ಕೂ ಹೆಚ್ಚಿನ ಕುಟುಂಬಗಳು ಬಿಸಿಲು, ಮಳೆ, ಗಾಳಿಗೆ ಬಳಲಿವೆ. ಆದರೆ ಕಳೆದೊಂದು ದಶಕದಿಂದ ಬಡಾವಣೆ ನಿರ್ಮಾಣ ಕಾರ್ಯ ನೆನೆಗುದಿಗೆ ಬಿದ್ದಿರುವುದು ಸುಡುಗಾಡು ಸಿದ್ದರಿಗೆ ಸಿದ್ದರಾಮೇಶ್ವರ ಬಡಾವಣೆ ಗಗನ ಕುಸುಮದಂತಾಗಿದೆ. ಇನ್ನಾದರೂ ಸಂಬಂಧಿಸಿದ ಅಧಿಕಾರಿಗಳು ಸುಡುಗಾಡು ಸಿದ್ದರಿಗೆ ಸೂರು ಕಲ್ಪಿಸಲು ಮುಂದಾಗಬೇಕೆಂದು ಇಲ್ಲಿನ ಜನ ಒತ್ತಾಯಿಸಿದ್ದಾರೆ.

ಸುಡುಗಾಡು ಸಿದ್ದರಿಗೆ ಪ್ರತ್ಯೇಕ ಬಡಾವಣೆ ನಿರ್ಮಾಣಕ್ಕಾಗಿ ಜಾಗ ಗುರುತಿಸಿ ಅಭಿವೃದ್ದಿ ಪಡಿಸಲಾಗಿದೆ. ಜೋಪಡಿಗಳನ್ನು ಕಟ್ಟಿಕೊಂಡು ಬದುಕುತ್ತಿರುವ ಆ ಸಮುದಾಯದ ಶೈಕ್ಷಣಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಶಾಲೆ ,ಅಂಗನವಾಡಿ ಕಟ್ಟಡ ನಿರ್ಮಿಸುವ ಜತೆಗೆ ಕೂಡಲೆ ವಸತಿ ಸೌಲಭ್ಯ ಕಲ್ಪಿಸಬೇಕು.

- ವೈ.ಡಿ.ಕುಮಾರ ಸ್ವಾಮಿ, ಗ್ರಾಪಂ ಸದಸ್ಯ, ರಾಯಾಪುರ.

Follow Us:
Download App:
  • android
  • ios