ಪ್ರಕರಣವೊಂದರ ನಿರ್ವಹಣೆಯಲ್ಲಿ ಈ ಮೂವರು ಪೊಲೀಸರು ಕರ್ತವ್ಯಲೋಪ ಎಸಗಿರುವುದು ಮೇಲ್ನೋಟಕ್ಕೆ ಸಾಬೀತಾದ ಹಿನ್ನೆಲೆ ಎಸ್ಪಿ ಶ್ರೀಹರಿಬಾಬು ಅಮಾನತು ಮಾಡಿದ್ದಾರೆ. ಈ ಪ್ರಕರಣದಲ್ಲಿ ಈ ಮೂವರ ವಿರುದ್ಧ ಇಲಾಖೆ ವಿಚಾರಣೆಗೂ ಸೂಚಿಸಲಾಗಿದೆ. 

ಹೊಸಪೇಟೆ(ಮೇ.25): ಪ್ರಕರಣವೊಂದರಲ್ಲಿ ಕರ್ತವ್ಯಲೋಪವೆಸಗಿದ ಆರೋಪದ ಮೇರೆಗೆ ನಗರದ ಠಾಣೆಯ ಎಎಸ್‌ಐ ಸೇರಿ ಮೂವರು ಪೊಲೀಸರನ್ನು ವಿಜಯನಗರ ಜಿಲ್ಲಾ ಎಸ್ಪಿ ಶ್ರೀಹರಿಬಾಬು ಅಮಾನತುಗೊಳಿಸಿದ್ದಾರೆ.

Add Asianetnews Kannada as a Preferred SourcegooglePreferred

ಪಟ್ಟಣ ಠಾಣೆಯ ಎಎಸ್‌ಐ ಕೋದಂಡಪಾಣಿ, ಮುಖ್ಯಪೇದೆ ನಾಗರಾಜ, ಪೇದೆ ಗುರುಬಸವರಾಜ ಅಮಾತುಗೊಂಡ ಸಿಬ್ಬಂದಿ. ಇನ್ನು ಪಟ್ಟಣ ಠಾಣೆ ಪಿಐ ಬಾಳನಗೌಡರ ವಿರುದ್ಧವೂ ಇಲಾಖೆ ವಿಚಾರಣೆಗಾಗಿ ಮೇಲಧಿಕಾರಿಗಳಿಗೆ ವರದಿ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.

ಪೊಲೀಸ್ ಇಲಾಖೆಯನ್ನೂ ಬಿಡ್ತಿಲ್ಲ ಹ್ಯಾಕರ್ಸ್; ವಿಜಯನಗರ ಎಸ್ಪಿ ಹೆಸರಲ್ಲಿ ನಕಲಿ ಖಾತೆ , ಹಣಕ್ಕೆ ಬೇಡಿಕೆ!

ಪ್ರಕರಣವೊಂದರ ನಿರ್ವಹಣೆಯಲ್ಲಿ ಈ ಮೂವರು ಪೊಲೀಸರು ಕರ್ತವ್ಯಲೋಪ ಎಸಗಿರುವುದು ಮೇಲ್ನೋಟಕ್ಕೆ ಸಾಬೀತಾದ ಹಿನ್ನೆಲೆ ಎಸ್ಪಿ ಶ್ರೀಹರಿಬಾಬು ಅಮಾನತು ಮಾಡಿದ್ದಾರೆ. ಈ ಪ್ರಕರಣದಲ್ಲಿ ಈ ಮೂವರ ವಿರುದ್ಧ ಇಲಾಖೆ ವಿಚಾರಣೆಗೂ ಸೂಚಿಸಲಾಗಿದೆ ಎಂದು ತಿಳಿದು ಬಂದಿದೆ.

ಪ್ರಕರಣವೊಂದರ ನಿರ್ವಹಣೆಯಲ್ಲಿ ಕರ್ತವ್ಯಲೋಪವೆಸಗಿರುವುದು ಕಂಡುಬಂದ ಹಿನ್ನೆಲೆ ಹೊಸಪೇಟೆಯ ಪಟ್ಟಣ ಠಾಣೆಯ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಅಂತ ವಿಜಯನಗರ ಎಸ್ಪಿ ಶ್ರೀಹರಿಬಾಬು ತಿಳಿಸಿದ್ದಾರೆ.