ಸುತ್ತೂರು ಜಗದ್ಗುರು ಶ್ರೀವೀರಸಿಂಹಾಸನ ಮಹಾಸಂಸ್ಥಾನ ಮಠದ ಶ್ರೀಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳವರ 105ನೇ ಜಯಂತಿಯ ಮೈಸೂರು ಮೃಗಾಲಯಕ್ಕೆ ಒಂದು ಲಕ್ಷ ದೇಣಿಗೆ ನೀಡಲಾಗುತ್ತಿದೆ.
ಮೈಸೂರು (ಆ.26): ಸುತ್ತೂರು ಜಗದ್ಗುರು ಶ್ರೀವೀರಸಿಂಹಾಸನ ಮಹಾಸಂಸ್ಥಾನ ಮಠದ ಶ್ರೀಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳವರ 105ನೇ ಜಯಂತಿಯು ಆ.29ರಂದು ನೆರವೇರಲಿದ್ದು, ಅಂದು ಮೈಸೂರು ಮೖಗಾಲಯದ ಪಶು- ಪಕ್ಷಿಗಳ ಆಹಾರದ ನಿರ್ವಹಣೆಗಾಗಿ ಶ್ರೀಮಠದಿಂದ 1 ಲಕ್ಷ ರು. ಮೊತ್ತದ ಚೆಕ್ ಅನ್ನು ಮೃಗಾಲಯಕ್ಕೆ ನೀಡಲಾಗಿದೆ.
Add Asianetnews Kannada as a Preferred Source

ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಅಜಿತ್ ಕುಲಕರ್ಣಿ ಅವರಿಗೆ ಜೆಎಸ್ಎಸ್ ಮಹಾ ವಿದ್ಯಾಪೀಠದ ಆಡಳಿತ ವಿಭಾಗದ ನಿರ್ದೇಶಕ ಶಂಕರಪ್ಪ ಚೆಕ್ ಹಸ್ತಾಂತರಿಸಿದರು.
ಮೈಸೂರಿನ ಮೃಗಾಲಯಕ್ಕೆ 10 ವರ್ಷಗಳಿಂದಲೂ ರಾಜೇಂದ್ರ ಶ್ರೀಗಳ ಜಯಂತಿಯಂದು ಮೖಗಾಲಯದ ಪಶು-ಪಕ್ಷಿಗಳ ಆಹಾರದ ನಿರ್ವಹಣೆಗಾಗಿ 1 ಲಕ್ಷ ರು. ನೀಡುತ್ತಿರುವುದನ್ನು ಇಲ್ಲಿ ಸ್ಮರಿಸಬಹುದು. ಮೃಗಾಲಯದ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಪಿ.ರವಿ, ಜೆಎಸ್ಎಸ್ ಮಹಾವಿದ್ಯಾಪೀಠದ ಪ್ರೊ.ಮೊರಬದ ಮಲ್ಲಿಕಾರ್ಜುನ, ಬಿ.ನಿರಂಜನಮೂರ್ತಿ ಇದ್ದರು.
