Asianet Suvarna News Asianet Suvarna News

ಮಂಡ್ಯ: ಆದಿಚುಂಚನಗಿರಿಯಲ್ಲಿ ಸಂತ ಭಕ್ತ ಸಂಗಮ ಸಮಾರಂಭ

ಭೈರವೈಕ್ಯ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರ 7ನೇ ವರ್ಷದ ಸಂಸ್ಮರಣಾ ಮಹೋತ್ಸವ ಮತ್ತು 75ನೇ ಜಯಂತ್ಯೋತ್ಸವ ಕಾರ್ಯಕ್ರಮದ ಪ್ರಯುಕ್ತ ಸಂತ ಭಕ್ತ  ಸಂಗಮ ಸಮಾರಂಭ ನಾಗಮಂಗಲದ ಆದಿಚುಂಚನಗಿರಿ ಮಠದಲ್ಲಿ ನಡೆದಿದೆ.

Suvarna News Editor Ravi Hegde participates in programme at Adichunchanagiri mutt
Author
Bangalore, First Published Jan 18, 2020, 2:55 PM IST

ಮಂಡ್ಯ(ಜ.18): ಭೈರವೈಕ್ಯ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರ 7ನೇ ವರ್ಷದ ಸಂಸ್ಮರಣಾ ಮಹೋತ್ಸವ ಮತ್ತು 75ನೇ ಜಯಂತ್ಯೋತ್ಸವ ಕಾರ್ಯಕ್ರಮದ ಪ್ರಯುಕ್ತ ಸಂತ ಭಕ್ತ  ಸಂಗಮ ಸಮಾರಂಭ ನಾಗಮಂಗಲದ ಆದಿಚುಂಚನಗಿರಿ ಮಠದಲ್ಲಿ ನಡೆದಿದೆ.

ಮಠದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ನಡೆದ ಈ ಕಾರ್ಯಕ್ರಮಕ್ಕೆ ಸುವರ್ಣ ನ್ಯೂಸ್-ಕನ್ನಡಪ್ರಭದ ಪ್ರಧಾನ ಸಂಪಾದಕರಾದ ರವಿ ಹೆಗ್ಗಡೆಯವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದಾರೆ.

ಚಿಕ್ಕರಸಿನಕೆರೆ ಬಸಪ್ಪನಿಗೆ ಹುಟ್ಟು ಹಬ್ಬ ಸಂಭ್ರಮ!

ಈ ಕಾರ್ಯಕ್ರಮದಲ್ಲಿ ಬೇಲಿಮಠದ ಶಿವರುದ್ರಮಹಾಸ್ವಾಮೀಜಿ, ಮಾಜಿ ಸಚಿವ ಸಿ.ಎಸ್.ಪುಟ್ಟರಾಜು.ಶಾಸಕ ಸುರೇಶ್ ಗೌಡ, ಆದಿಚುಂಚನಗಿರಿ ವಿವಿ ಕುಲಪತಿ ಚಂದ್ರಶೇಖರಶೆಟ್ಟಿ ಸೇರಿದಂತೆ ಅನೇಕ ಸಾಧು ಸಂತರು,ಸಹಸ್ರಾರು ಮಂದಿ ಭಕ್ತರು ಉಪಸ್ಥಿತರಿದ್ದರು.

Follow Us:
Download App:
  • android
  • ios