Asianet Suvarna News Asianet Suvarna News

ಶರಾವತಿ ನದಿಪಾತ್ರದ ಜನರ ಬಗ್ಗೆ ಎಚ್ಚರ ವಹಿಸಿ: ಸಚಿವ ಮಂಕಾಳು ವೈದ್ಯ ಸೂಚನೆ

ಲಿಂಗನಮಕ್ಕಿ ಜಲಾಶಯದಿಂದ ನೀರು ಹೊರಬಿಡುವಾಗ ನದಿ ಪಾತ್ರದ ಕೆಳದಂಡೆಗಳಲ್ಲಿ ವಾಸಿಸುವ ಜನರಿಗೆ ತೊಂದರೆ ಆಗದಂತೆ ಎಚ್ಚರಿಕೆ ವಹಿಸುವಂತೆ ಬಂದರು ಒಳನಾಡು ಹಾಗೂ ಮೀನುಗಾರಿಕೆ ಸಚಿವ ಮಂಕಾಳು ವೈದ್ಯ ಕೆಪಿಸಿ ಅಧಿಕಾರಿಗಳಿಗೆ ಸೂಚಿಸಿದರು. 

Take care of the people of Sharavati river basin Says Minister Mankalu Vaidya gvd
Author
First Published Jul 31, 2024, 10:52 PM IST | Last Updated Aug 1, 2024, 11:22 AM IST

ತಾಳಗುಪ್ಪ (ಜು.31): ಲಿಂಗನಮಕ್ಕಿ ಜಲಾಶಯದಿಂದ ನೀರು ಹೊರಬಿಡುವಾಗ ನದಿ ಪಾತ್ರದ ಕೆಳದಂಡೆಗಳಲ್ಲಿ ವಾಸಿಸುವ ಜನರಿಗೆ ತೊಂದರೆ ಆಗದಂತೆ ಎಚ್ಚರಿಕೆ ವಹಿಸುವಂತೆ ಬಂದರು ಒಳನಾಡು ಹಾಗೂ ಮೀನುಗಾರಿಕೆ ಸಚಿವ ಮಂಕಾಳು ವೈದ್ಯ ಕೆಪಿಸಿ ಅಧಿಕಾರಿಗಳಿಗೆ ಸೂಚಿಸಿದರು. ಅವರು ಲಿಂಗನಮಕ್ಕಿ ಜಲಾಶಯಕ್ಕೆ ಭೇಟಿ ನೀಡಿ ಬಾಗಿನ ಸಮರ್ಪಿಸಿ ಕೆಪಿಸಿ ಕಾರ್ಯಾಲಯದಲ್ಲಿ ಅಧಿಕಾರಿಗಳ ಸಭೆ ನಡೆಸಿದರು.

ಈ ವರ್ಷ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ವ್ಯಾಪಕ ಮಳೆ ಸುರಿಯುತ್ತಿದ್ದು, ಬಹುತೇಕ ಎಲ್ಲ ಜಲಾಶಯಗಳು ತುಂಬುವ ಹಂತ ತಲುಪಿದೆ, ಜಲಾಶಯದ ಸುರಕ್ಷತೆಯ ದೃಷ್ಟಿಯಿಂದ ನೀರು ನದಿಗೆ ಹರಿಸುವುದು ಅನಿವಾರ್ಯವಾದರೂ ನದಿಪಾತ್ರದ ಎಡದಂಡೆ ಹಾಗೂ ಬಲದಂಡೆಗಳಲ್ಲಿ ವಾಸವಾಗಿರುವ ಜನರ ಬಗ್ಗೆ ಎಚ್ಚರಿಕೆ ವಹಿಸಬೇಕು. ಜಲಾಶಯ ಪೂರ್ತಿ ತುಂಬುವರೆಗೂ ಕಾಯದೆ ಪ್ರತಿಶತ 80 ತುಂಬಿದ ನಂತರ ಜಲಾಶಯದಿಂದ ಸಲ್ಪ-ಸಲ್ಪ ಪ್ರಮಾಣದ ನೀರನ್ನು ನದಿಗೆ ಹರಿಸಬೇಕು.

ಸಮುದ್ರ ಇಳಿತ ಕಂಡಾಗ ನದಿಗೆ ನೀರು ಬಿಟ್ಟರೆ ನೇರವಾಗಿ ಸಮುದ್ರ ಸೇರುತ್ತದೆ ಎಂದರಲ್ಲದೆ, ಇಂತಹ ವೈಜ್ಞಾನಿಕ ಕ್ರಮಗಳನ್ನು ಅನುಸರಿಸುವುದರಿಂದ ನದಿ ಪಾತ್ರದ ಜನರಿಗೆ ಯಾವುದೇ ಪ್ರವಾಹದ ಭೀತಿ ಉಂಟಾಗುವುದಿಲ್ಲ ಎಂದರು. ಕೆಪಿಸಿ ವಿದ್ಯುತ್ ವಿಭಾಗದ ಮುಖ್ಯ ಇಂಜಿನಿಯರ್ ಎಚ್.ಆರ್.ರಮೇಶ್, ಕಾಮಗಾರಿ ವಿಭಾಗದ ಮೋಹನ್, ಭಟ್ಕಳ ಉಪ ವಿಭಾಗಾಧಿಕಾರಿ ಡಾ.ನಯನ, ಗೇರುಸೊಪ್ಪೆ ವಿಭಾಗದ ಅಭಿಯಂತರ ಗಿರೀಶ್ ಮತ್ತು ನಿಗಮದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಮೈಸೂರು ಪಾದಯಾತ್ರೆ ಹಿಂದೆ ಒಳ ಒಪ್ಪಂದ ರಾಜಕಾರಣ: ಶಾಸಕ ಬಸನಗೌಡ ಯತ್ನಾಳ್‌

‘ಪ್ರವಾಹ ಎದುರಿಸಲು ಸನ್ನದ್ಧರಾಗಿ’: ಶರಾವತಿ ನದಿಪಾತ್ರಕ್ಕೆ ಸಂಬಂಧಿಸಿದ ಹೊನ್ನಾವರ ತಾಲೂಕಿನ ೧೩ ಪಂಚಾಯಿತಿ ಪಿಡಿಒಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ, ಜಲಾಶಯ ದ ಸುರಕ್ಷತೆಯ ದೃಷ್ಟಿಯಿಂದ ನೀರು ನದಿಗೆ ಹರಿಸುವುದು ಅನಿವಾರ್ಯವಾದರೂ ಯಾವುದೇ ಸಂದರ್ಭದಲ್ಲಿ ಪ್ರವಾಹವನ್ನು ಎದುರಿಸಲು ಸನ್ನದ್ಧ ಸ್ಥಿತಿಯಲ್ಲಿ ಇರಬೇಕೆಂದು ಸಚಿವ ಮಾಂಕಾಳು ವೈದ್ಯ ಸೂಚಿಸಿದರು.

Latest Videos
Follow Us:
Download App:
  • android
  • ios