ಟಾಟಾ ಮಾರ್ಕೊಪೊಲೊ ಸಿಬ್ಬಂದಿಗೆ ಕೋವಿಡ್‌ ದೃಢ| ಎಂಟು ದಿನ ಕಾರ್ಯಚಟುವಟಿಕೆ ಸ್ಥಗಿತ| ಕೊರೋನಾ ಒಂದು ದುರ್ಬಲ ವೈರಾಣುವಾಗಿದೆ, ಸರಳ ಚಿಕಿತ್ಸೆ ಮೂಲಕ ಸೋಂಕು ನಿವಾರಿಸಿಕೊಳ್ಳಬಹುದಾಗಿದೆ ಕೊರೋನಾ ಭಯದಿಂದ ಯಾರೊಬ್ಬರೂ ಧೃತಿಗೆಡಬಾರದು, ಆತ್ಮಸ್ಥೈರ್ಯ ಕಳೆದುಕೊಳ್ಳಬಾರದು: ಡಿಸಿ| 

ಧಾರವಾಡ(ಜು.26): ನಗರದ ಹೊರವಲಯದ ಕೈಗಾರಿಕಾ ಅಭಿವೃದ್ಧಿ ಪ್ರದೇಶದಲ್ಲಿ ಇರುವ ಟಾಟಾ ಮಾರ್ಕೊಪೊಲೊ ಕಂಪನಿಯನ್ನು ಇಂದಿನಿಂದ(ಭಾನುವಾರ) ಬರುವ ಸೋಮವಾರ ಆಗಸ್ಟ್ 3 ರವರೆಗೆ ಮುಚ್ಚಲು ಕಾರ್ಖಾನೆ ಆಡಳಿತ ಮಂಡಳಿ ನಿರ್ಧರಿಸಿದೆ. ಈ ಕುರಿತು ನಿನ್ನೆ(ಶನಿವಾರ) ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ ಅವರೊಂದಿಗೆ ಕಂಪನಿಯ ಸಿಇಓ ಅವರೊಂದಿಗೆ ಸಭೆ ನಡೆಸಿದ ನಂತರ ಈ ತೀರ್ಮಾನ ಕೈಗೊಳ್ಳಲಾಗಿದೆ.

Add Asianetnews Kannada as a Preferred SourcegooglePreferred

ಕಂಪನಿಯ ಕಾರ್ಮಿಕರಿಗೆ ಸೋಂಕು ಕಾಣಿಸಿಕೊಂಡಿರುವುದರಿಂದ ಸ್ಯಾನಿಟೈಸೇಷನ್, ತಪಾಸಣೆ ನಿರಂತರವಾಗಿ ನಡೆಸಲಾಗುತ್ತಿದೆ. ಕಾರ್ಮಿಕರು, ಸಿಬ್ಬಂದಿ ಹಾಗೂ ಕಂಪನಿಯ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಎಂಟು ದಿನಗಳ ಕಾಲ ಕೈಗಾರಿಕಾ ಘಟಕದ ಚಟುವಟಿಕೆಗಳನ್ನು ಎಂಟು ದಿನಗಳ ಕಾಲ ಸ್ಥಗಿತಗೊಳಿಸಲು ಕಾರ್ಖಾನೆ ಆಡಳಿತ ಮಂಡಳಿಯು ಸ್ವಯಂ ಪ್ರೇರಿತರಾಗಿ ನಿರ್ಣಯಿಸಿದೆ. 

ಧಾರವಾಡ: ಕೊರೋನಾ ಕಾಟಕ್ಕೆ ಒಂದೇ ಕುಟುಂಬ ಮೂವರ ಆತ್ಮಹತ್ಯೆ..!

ಧೃತಿಗೆಡದಿರಲು ಮನವಿ: 

ಕೊರೋನಾ ಒಂದು ದುರ್ಬಲ ವೈರಾಣುವಾಗಿದೆ, ಸರಳ ಚಿಕಿತ್ಸೆ ಮೂಲಕ ಸೋಂಕು ನಿವಾರಿಸಿಕೊಳ್ಳಬಹುದಾಗಿದೆ ಕೊರೋನಾ ಭಯದಿಂದ ಯಾರೊಬ್ಬರೂ ಧೃತಿಗೆಡಬಾರದು, ಆತ್ಮಸ್ಥೈರ್ಯ ಕಳೆದುಕೊಳ್ಳಬಾರದು. ಸೋಂಕಿತರಿಗೆ ಮತ್ತು ಪ್ರಾಥಮಿಕ ಸಂಪರ್ಕ ಹೊಂದಿದವರಿಗೆ ನಿರಂತರವಾಗಿ ದೂರವಾಣಿ ಆಪ್ತಸಮಾಲೋಚನೆ ನಡೆಸಲಾಗುತ್ತಿದೆ. ದೂರವಾಣಿ ಸಂಪರ್ಕ ಲೈನ್ ಗಳ ಸಂಖ್ಯೆ ಇನ್ನಷ್ಟು ಹೆಚ್ಚಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಕೆ‌ ಪಾಟೀಲ ತಿಳಿಸಿದ್ದಾರೆ.

ಧಾರವಾಡ ಮಾನಸಿಕ ಆರೋಗ್ಯ ವಿಜ್ಞಾನ ಸಂಸ್ಥೆ,ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮಾನಸಿಕ ಆರೋಗ್ಯ ಮತ್ತು ಆಯುಷ್ ವಿಭಾಗಗಳ ಮೂಲಕ ಮನೋ ಸ್ವಾಸ್ಥ್ಯ ನಿರ್ವಹಣೆಗೆ ವಿಡಿಯೋ ಸಂವಾದದ ಮೂಲಕ ಅಗತ್ಯ ಸಲಹೆಗಳನ್ನು ನೀಡಲಾಗುತ್ತಿದೆ. ಯೋಗಾಭ್ಯಾಸ ಮಾಡಿಸಲಾಗುತ್ತಿದೆ. ಜಿಲ್ಲೆಯ ಜನತೆ ಇವುಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.