Asianet Suvarna News Asianet Suvarna News

ಪೊಲೀಸ್‌ ದಳಗಳ ನಡುವೆ ಸಮನ್ವಯ ಇರಲಿ: ಅಮಿತ್‌ ಶಾ

ಭಯೋತ್ಪಾದನೆ, ಗಡಿ ವ್ಯಾಜ್ಯಗಳು ಸೇರಿದಂತೆ ದೇಶದ ಹಲವು ಸವಾಲುಗಳಿಗೆ ಸಮಂಜಸ ಪರಿಹಾರ ಕಂಡುಕೊಳ್ಳುವುದು. ದೇಶದ ಮಹಾನಗರಗಳ ಕಾನೂನು ಮತ್ತು ಸುವ್ಯವಸ್ಥೆ ಬಲಪಡಿಸುವುದು ಸೇರಿದಂತೆ ಎಲ್ಲ ಪೊಲೀಸ್‌ ವಿವಿಧ ದಳಗಳ ನಡುವೆ ಸಮನ್ವಯ ಸಾಧಿಸಿ, ಸಂವಾದ ನಡೆಸಿ ಭದ್ರತೆ ಹೆಚ್ಚಿಸಲು ಪೊಲೀಸ್‌ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆಯ ಕೇಂದ್ರ ಗುಪ್ತಚರ ಸಂಸ್ಥೆಯ ತರಬೇತಿ ಶಾಲೆಯು ಮಹತ್ವದ ವೇದಿಕೆಯಾಗಲಿದೆ ಎಂದು ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್‌ ಶಾ ಹೇಳಿದರು. 
 

There should be coordination between police forces says union minister amit shah gvd
Author
First Published Jan 1, 2023, 8:48 PM IST

ದೊಡ್ಡಬಳ್ಳಾಪುರ (ಜ.01): ಭಯೋತ್ಪಾದನೆ, ಗಡಿ ವ್ಯಾಜ್ಯಗಳು ಸೇರಿದಂತೆ ದೇಶದ ಹಲವು ಸವಾಲುಗಳಿಗೆ ಸಮಂಜಸ ಪರಿಹಾರ ಕಂಡುಕೊಳ್ಳುವುದು. ದೇಶದ ಮಹಾನಗರಗಳ ಕಾನೂನು ಮತ್ತು ಸುವ್ಯವಸ್ಥೆ ಬಲಪಡಿಸುವುದು ಸೇರಿದಂತೆ ಎಲ್ಲ ಪೊಲೀಸ್‌ ವಿವಿಧ ದಳಗಳ ನಡುವೆ ಸಮನ್ವಯ ಸಾಧಿಸಿ, ಸಂವಾದ ನಡೆಸಿ ಭದ್ರತೆ ಹೆಚ್ಚಿಸಲು ಪೊಲೀಸ್‌ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆಯ ಕೇಂದ್ರ ಗುಪ್ತಚರ ಸಂಸ್ಥೆಯ ತರಬೇತಿ ಶಾಲೆಯು ಮಹತ್ವದ ವೇದಿಕೆಯಾಗಲಿದೆ ಎಂದು ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್‌ ಶಾ ಹೇಳಿದರು. 

ಬೆಂ.ಗ್ರಾ. ಜಿಲ್ಲೆಯ ದೇವನಹಳ್ಳಿ ಸಮೀಪದ ಆವತಿ ಗ್ರಾಮದಲ್ಲಿ ಕೇಂದ್ರ ಗುಪ್ತಚರ ತರಬೇತಿ ಶಾಲೆಯ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿ, ಬಳಿಕ ಅನಂತ ವಿದ್ಯಾನಿಕೇತನ ಶಾಲೆ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾರತ ಟಿಬೆಟ್‌ ಗಡಿ ರಕ್ಷಣಾ ದಳ ಬೆಂಗಳೂರು ವಿಭಾಗದ ವಿವಿಧ ಕಟ್ಟಡಗಳನ್ನು ವರ್ಚುವಲ್‌ ವೇದಿಕೆ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ಗಡಿ ಸುರಕ್ಷಾ ದಳಗಳಲ್ಲಿ ಸೇವೆ ನೀಡುವ ಯೋಧರು ಕೇಂದ್ರ ಸ್ಥಾನಗಳಲ್ಲಿ ಕುಟುಂಬದ ಸದಸ್ಯರೊಂದಿಗೆ ಕಾಲ ಕಳೆಯಲು ವಸತಿ ಸೌಕರ್ಯ ಹೆಚ್ಚಿಸಲಾಗುವುದು. ಕೇಂದ್ರ ಗುಪ್ತಚರ ತರಬೇತಿ ಸಂಸ್ಥೆಯ ಕಟ್ಟಡಕ್ಕೆ ರಾಜ್ಯ ಸರ್ಕಾರ ಉತ್ತಮ ಪರಿಸರದಲ್ಲಿ ನಿವೇಶನ ಒದಗಿಸಿದೆ. ಮುಂಬರುವ ದಿನಗಳಲ್ಲಿ ಬಹಳ ದೇಶದ ಪೊಲೀಸ್‌ ವ್ಯವಸ್ಥೆಗೆ ಬಹಳ ಪ್ರಯೋಜನಕಾರಿಯಾಗಲಿದೆ ಎಂದರು.

ಹೊಸ ವರ್ಷಾಚರಣೆಗೆ ಮಹದೇಶ್ವರ ಬೆಟ್ಟಕ್ಕೆ ಭಕ್ತರ ದಂಡು

ಪೊಲೀಸ್‌ ದಳಗಳ ಬಲವರ್ಧನೆ: ವಿವಿಧ ಪೊಲೀಸ್‌ ದಳಗಳನ್ನು ಬಲಪಡಿಸಲು ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಗೆ ಹೆಚ್ಚು ಪ್ರೋತ್ಸಾಹ ನೀಡಲಾಗುತ್ತಿದೆ. ಸಮಾಜ ಚಲನಶೀಲವಾಗಿರುತ್ತದೆ. ಅದರ ವಿಚಾರ, ಗಮನ, ಧೋರಣೆ, ಸ್ವರೂಪಗಳು ಹಾಗೂ ಪಥ ಬದಲಾಗುತ್ತಿರುತ್ತವೆ. ಅದಕ್ಕೆ ಅನುಗುಣವಾಗಿ ಪೊಲೀಸ್‌ ಬಲಗಳೂ ಕೂಡ ಬದಲಾವಣೆಗಳನ್ನು ಅಳವಡಿಸಿಕೊಳ್ಳದಿದ್ದರೆ ಅಪ್ರಸ್ತುತವಾಗುತ್ತವೆ. ಸಂಶೋಧನೆ ಆಧರಿಸಿ, ಸುರಕ್ಷತಾ ತಂತ್ರಗಳು, ರಣನೀತಿ ರೂಪಿಸಿಕೊಳ್ಳುವುದು ಮಹತ್ವಪೂರ್ಣವಾಗಿರುತ್ತದೆ. ವಿವಿಧ ಪೊಲೀಸ್‌ ಸಂಸ್ಥೆಗಳ ನಡುವೆ ಸಹಯೋಗ ತರುವುದು ಮಹತ್ವಪೂರ್ಣ ಕಾರ್ಯವಾಗಿದೆ. ಹೊಸ ಕಲಿಕೆ, ಸವಾಲುಗಳ ವಿನಿಮಯದೊಂದಿಗೆ ಎಲ್ಲ ಪೊಲೀಸ್‌ ದಳಗಳು ಪರಿಪೂರ್ಣವಾಗಲು ಸಾಧ್ಯಎಂದರು.

ಭಯೋತ್ಪಾದನೆ ನಿಗ್ರಹ ಗುರಿ: ಭಾರತದಂತಹ ದೊಡ್ಡ ದೇಶದಲ್ಲಿ ಹಲವು ಸಂಸ್ಕೃತಿ, ಆಚರಣೆಗಳಿವೆ. ಅದಕ್ಕೆ ಅನುಗುಣವಾಗಿ ದೇಶದ ಆಂತರಿಕ ಕಾನೂನು ಮತ್ತು ಸುವ್ಯವಸ್ಥೆ ವಿಷಯವನ್ನು ಸಂವಿಧಾನದ ರಾಜ್ಯಪಟ್ಟಿಯಲ್ಲಿರಿಸಲಾಗಿದೆ. ಕಾಲಾಂತರದಲ್ಲಿ ಹೆಚ್ಚಿದ ಭಯೋತ್ಪಾದನೆ, ಆತಂಕವಾದ, ಗಡಿ ವಿವಾದಗಳು ಹೊಸ ಸವಾಲುಗಳನ್ನು ಒಡ್ಡಿವೆ. ಇಂತಹ ಸವಾಲುಗಳಿಗೆ ಪರಿಹಾರ ಅನ್ವೇಷಿಸುವುದು ಅಗತ್ಯ. ಇದು ನಿರಂತರವಾಗಿ ನಡೆಯುವ ಪ್ರಕ್ರಿಯೆಯಾಗಿದೆ. ದೇಶದ ಮಹಾನಗರಗಳಲ್ಲಿ ಬಹು ಭಾಷಿಕರು ನೆಲೆಸುತ್ತಿದ್ದಾರೆ. ಬರುವ ದಿನಗಳಲ್ಲಿ ಅಲ್ಲಿನ ಪೊಲೀಸ್‌ ಕಾರ್ಯವೈಖರಿಗೆ ಅದು ಸವಾಲಾಗುತ್ತದೆ. ಮಹಾನಗರಗಳ ಸುರಕ್ಷತೆಗೂ ಸಂಶೋಧನೆ, ಅಧ್ಯಯನಗಳು ಇಲ್ಲಿ ನಡೆಯಲಿವೆ ಎಂದರು.

ಸೈನಿಕರ ಕುಟುಂಬಗಳ ವಸತಿ ಸೌಲಭ್ಯ ಸುಧಾರಣೆ: ಕೋಲ್ಕತ್ತಾ, ಹೈದರಾಬಾದ್‌, ಗಾಜಿಯಾಬಾದ್‌, ರಾಜಸ್ಥಾನ ಮತ್ತಿತರ ಕಡೆಗಳಲ್ಲಿರುವ ಸಿಡಿಐಟಿ ಸಂಸ್ಥೆಯು ಉತ್ತಮ ಕೊಡುಗೆಗಳನ್ನು ನೀಡುತ್ತಿವೆ. ರಾಷ್ಟ್ರೀಯ ವಿಧಿವಿಜ್ಞಾನ ವಿಶ್ವವಿದ್ಯಾಲಯದ ಸಹಯೋಗದಲ್ಲಿ ನಡೆಯುವ ಅಧ್ಯಯನಗಳು ಕರ್ನಾಟಕ ಹಾಗೂ ನೆರೆಯ ರಾಜ್ಯಗಳ ಪೊಲೀಸ್‌ ತನಿಖೆಗಳಿಗೆ ನೆರವಾಗಲಿವೆ. ಬಿಪಿಆರ್‌ ಮತ್ತು ಡಿ ಸಂಸ್ಥೆಗೆ ಕೇಂದ್ರ ಸರ್ಕಾರ ಸಂಪೂರ್ಣ ಸಹಕಾರ, ಪ್ರೋತ್ಸಾಹ ನೀಡಲಿದೆ ಎಂದು ಭರವಸೆ ನೀಡಿದರು. ದೇಶದ ಗಡಿರಕ್ಷಣೆಗೆ ಹಗಲಿರುಳು ದುಡಿಯುತ್ತಿರುವ ಸೈನಿಕರು ತಮ್ಮ ಕುಟುಂಬಗಳೊಂದಿಗೆ ನೆಮ್ಮದಿಯ ಬದುಕು ನಡೆಸುವಂತಾಗಲು ಗಡಿ ಸುರಕ್ಷಾ ದಳಗಳ ಕೇಂದ್ರ ಸ್ಥಾನಗಳಲ್ಲಿ ವಸತಿ ನಿರ್ಮಾಣ ಮಾಡಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಆದ್ಯತೆ ನೀಡಿದ್ದಾರೆ. ಇ-ಆವಾಸ್‌ ಪೋರ್ಟಲ್‌ ಮೂಲಕ ವಸತಿ ಸೌಕರ್ಯಗಳ ಸುಧಾರಣೆಯಾಗುತ್ತಿವೆ ಎಂದರು.

ದೇಶದ ಗಡಿ ಸುರಕ್ಷಾ ದಳಗಳಲ್ಲಿಯೇ ಐಟಿಬಿಪಿಯು ಬಹಳ ದುರ್ಗಮ ಮತ್ತು ವಿಷಮ ವಾತಾವರಣದಲ್ಲಿ ಉತ್ಕೃಷ್ಟದೇಶಭಕ್ತಿಯೊಂದಿಗೆ ಕಾರ್ಯನಿರ್ವಹಿಸುತ್ತಿದೆ. ಭಾರತದ ಒಂದಿಂಚೂ ಜಮೀನು ಅತಿಕ್ರಮಣವಾಗದಂತೆ ಎಚ್ಚರಿಕೆಯ ದೇಶಸೇವೆ ಮಾಡುತ್ತಿದ್ದಾರೆ.ಐಟಿಬಿಪಿ ಯೋಧರು ಭೀಮವೀರರಾಗಿದ್ದಾರೆ. ಆಯುಷ್ಮಾನ್‌ ಆರೋಗ್ಯ ಯೋಜನೆ ಮೂಲಕ ಸೈನಿಕರ ಮತ್ತು ಅವರ ಕುಟುಂಬದ ಆರೋಗ್ಯ ಸೇವೆಗಳ ಗುಣಮಟ್ಟಹೆಚ್ಚಿಸಲಾಗಿದೆ ಎಂದು ಹೇಳಿದರು. ಬೆಂಗಳೂರಿನ ಐಟಿಬಿಪಿ ಕಟ್ಟಡಗಳ ಸಮುಚ್ಛಯದಿಂದ ವರ್ಚುವಲ್‌ ಆಗಿ ಯೋಧರು ಮತ್ತು ಕುಟುಂಬದ ಸದಸ್ಯರು ಮಾತನಾಡಿ, ವಸತಿ ಸೌಕರ್ಯಗಳ ಬಗ್ಗೆ ಸದಭಿಪ್ರಾಯ ವ್ಯಕ್ತಪಡಿಸಿದರು.

ಕೇಂದ್ರ ಗುಪ್ತಚರ ತರಬೇತಿ ಸಂಸ್ಥೆ ಶಿಲಾನ್ಯಾಸ: ಬ್ಯೂರೋ ಆಫ್‌ ಪೊಲೀಸ್‌ ರೀಸರ್ಚ್‌ ಅಂಡ್‌ ಡೆವಲಪ್‌ಮೆಂಟ್‌ (ಬಿಪಿಆರ್‌ಡಿ)ಸಂಸ್ಥೆಯಡಿ ಕಾರ್ಯನಿರ್ವಹಿಸುವ ಕೇಂದ್ರಿಯ ಗುಪ್ತಚರ ತರಬೇತಿ ಸಂಸ್ಥೆಯನ್ನು ಅರ್ಬನ್‌ ಪೊಲೀಸಿಂಗ್‌(ಸ್ಮಾರ್ಚ್‌ ಸಿಟಿ ಪೊಲೀಸಿಂಗ್‌) ಹಾಗೂ ಬ್ಲಾಕ್‌ ಚೈನ್‌ ತಂತ್ರಜ್ಞಾನದ ಉತ್ಕೃಷ್ಟತಾ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲಾಗುವುದು. ಈ ಕೇಂದ್ರದಲ್ಲಿ ಎಲ್ಲಾ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು, ಸಿಪಿಓಗಳು ಹಾಗೂ ಸಿಎಪಿಎಫ್‌ಗಳ ಪೊಲೀಸ್‌ ಅಧಿಕಾರಿಗಳಿಗೆ ತರಬೇತಿ ಕೋರ್ಸ್‌ಗಳನ್ನು ನೀಡಲಾಗುವುದು. ಪೊಲೀಸ್‌ ಅಧಿಕಾರಿಗಳ ತನಿಖಾ ಗುಣಮಟ್ಟವನ್ನು ಸುಧಾರಿಸುವುದು ಈ ಕೇಂದ್ರದ ಪ್ರಮುಖ ಉದ್ದೇಶವಾಗಿದೆ. ದೇವನಹಳ್ಳಿ ತಾಲೂಕಿನ ಆವತಿ ಗ್ರಾಮದಲ್ಲಿ ಈ ಕೇಂದ್ರಕ್ಕಾಗಿ ರಾಜ್ಯ ಸರ್ಕಾರ 35 ಎಕರೆ ಭೂಮಿಯನ್ನು ಒದಗಿಸಿದೆ.

ರಾಜ್ಯಕ್ಕೆ ಅಮಿತ್ ಶಾ ಬಂದು ಹೋದ ಬೆನ್ನಲ್ಲೇ ಬೂತ್ ವಿಜಯ ಅಭಿಯಾನ ಘೋಷಿಸಿದ ಪ್ರಹ್ಲಾದ್ ಜೋಶಿ

ಐಟಿಬಿಪಿ ಕಟ್ಟಡಗಳ ಉದ್ಘಾಟನೆ: ಬೆಂಗಳೂರಿನಲ್ಲಿರುವ ಇಂಡೋ ಟಿಬೆಟಿಯನ್‌ ಬಾರ್ಡರ್‌ ಪೊಲೀಸ್‌ ಪ್ರಾದೇಶಿಕ ಪ್ರಧಾನ ಕಚೇರಿ ಹಲವು ಯೋಜನೆಗಳ ಉದ್ಘಾಟಿಸುವರು. 120 ಸೈನಿಕರ ಬ್ಯಾರಕ್‌ಗಳು, 42 ವಸತಿ ಕಟ್ಟಡಗಳು, ಜಂಟಿ ಆಡಳಿತಾತ್ಮಕ ಕಟ್ಟಡಗಳು ಹಾಗೂ ಅಧಿಕಾರಿಗಳ ಹಾಗೂ ಅಧೀನ ಅಧಿಕಾರಿಗಳ ಮೆಸ್‌ ಕಟ್ಟಡಗಳನ್ನು ಆನ್‌ಲೈನ್‌ ಮೂಲಕ ಉದ್ಘಾಟನೆಗೊಳಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಷಿ, ಗೃಹ ಸಚಿವ ಆರಗ ಜ್ಞಾನೇಂದ್ರ, ವೈದ್ಯಕೀಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ. ಕೆ.ಸುಧಾಕರ್‌, ಪೊಲೀಸ್‌ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ ಮಹಾ ನಿರ್ದೇಶಕ ಬಾಲಾಜಿ ಶ್ರೀವಾಸ್ತವ, ಭಾರತ ಟಿಬೆಟ್‌ ಗಡಿ ಪೊಲೀಸ್‌ ದಳದ ಮಹಾ ನಿರ್ದೇಶಕ ಅನೀಶ್‌ ದಯಾಳ್‌, ಹೆಚ್ಚುವರಿ ಮಹಾ ನಿರ್ದೇಶಕ ನೀರಜ್‌ ಸಿನ್ಹಾ ಮತ್ತಿತರರು ಭಾಗವಹಿಸಿದ್ದರು.

Follow Us:
Download App:
  • android
  • ios