ಶಾಂತವಾಗಿದ್ದ ಕಾರವಾರ ಜಿಲ್ಲೆಯಲ್ಲಿಯೂ ಇಂಥ ದಾಖಲಾಗುತ್ತಿರುವ ಪ್ರಕರಣಗಳು ನಿಜಕ್ಕೂ ಆತಂಕ ಹುಟ್ಟಿಸಿದೆ. ದೇವಾಲಯದ ಆಡಳಿತಾಧಿಕಾರಿ ಮೇಲೆ ಆ್ಯಸಿಡ್ ದಾಳಿಗೆ ಸಂಚು ರೂಪಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

ಕಾರವಾರ[ಜ.06] ಗೋಕರ್ಣದ ಮಹಾಬಲೇಶ್ವರ ದೇವಾಲಯದ (ರಾಮಚಂದ್ರಾಪುರ ಮಠದ) ಕಾರ್ಯದರ್ಶಿ ಮತ್ತು ಆಡಳಿತಾಧಿಕಾರಿ ಜಿ. ಕೆ. ಹೆಗಡೆ ಅವರ ಮೇಲೆ ಆ್ಯಸಿಡ್ ದಾಳಿ ಮಾಡಲು ಸಂಚು ನಡೆದಿದೆ ಎಂದು ಪೊಲೀಸ್ ದೂರು ದಾಖಲಾಗಿದೆ.

Add Asianetnews Kannada as a Preferred SourcegooglePreferred

ಶನಿವಾರ ರಾತ್ರಿ 11 ಗಂಟೆ ಸುಮಾರಿಗೆ ಜಿ.ಕೆ ಹೆಗಡೆ ಅಮಾವಾಸ್ಯೆ ರಥೋತ್ಸವ ಮುಗಿಸಿ ದೇವಾಲಯದಿಂದ ನಿವಾಸಕ್ಕೆ ನಡೆದು ಹೋಗುತ್ತಿರುವಾಗ ವಿಶ್ವನಾಥ, ಫಣಿರಾಜ್ ಗೋಪಿ ಎಂಬುವರು ಬೈಕಿನಲ್ಲಿ ಬಂದು ಹೆಗಡೆಯವರೇ, ನಿಮಗೆ ಆ್ಯಸಿಡ್ ಹಾಕಲು ಗೋಕರ್ಣದಲ್ಲಿ ತಯಾರಿ ನಡೆದಿದೆ . ಆಸಿಡ್ ಬಾಟಲಿಯನ್ನು ತಂದು ಇಟ್ಟಿದ್ದಾರೆ . ಇದರಲ್ಲಿ ಗೋಕರ್ಣದ ಕೆಲವರು ಇದ್ದಾರೆ. ನೀವು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ಹೇಳಿ ಹೋಗಿದ್ದಾರೆ.

ಸರಕಾರದ ಕೈ ತಪ್ಪಿದ ಗೋಕರ್ಣ

ಇದಾದ ಮೇಲೆ ಹೆಗಡೆ ಗೋಕರ್ಣ ಪೊಲೀಸ್ ಠಾಣೆಯಲ್ಲಿ ರಕ್ಷಣೆ ಕೋರಿ ದೂರು ದಾಖಲಿಸಿದ್ದಾರೆ . ಈ ಹಿಂದೆ ನಕಲಿ ಸಿಡಿ ಕೇಸಿನಲ್ಲಿ ದೂರು ದಾಖಲಿಸಿದಾಗ ಜಿ .ಕೆ. ಹೆಗಡೆ ಅವರಿಗೆ ಕೊಲೆ ಬೆದರಿಕೆ ಬಂದಿತ್ತು ಮತ್ತು ಬ್ಲ್ಯಾಕ್ ಮೇಲ್ ಪ್ರಕರಣದಲ್ಲಿಯೂ ಸಹ ಜೀವ ಬೆದರಿಕೆ ಕರೆ ಬಂದಿತ್ತು .

ರಾಮಚಂದ್ರಾಪುರ ಮಠದ ಆಡಳಿತದಲ್ಲಿ ಮಹಾಬಲೇಶ್ವರ ದೇವಾಲಯವು ಅಭಿವೃದ್ಧಿ ಹೊಂದುತ್ತಿರುವುದನ್ನು ಸಹಿಸದ ವಿರೋಧಿಗಳು ಜನತೆಯ ಗಮನವನ್ನು ಬೇರೆಡೆ ಸೆಳೆಯಲು ಮತ್ತು ಇಲ್ಲಿನ ಕಾರ್ಯಕರ್ತರ ಧೃತಿಗೆಡಿಸಲು ಈ ರೀತಿಯ ಷಡ್ಯಂತ್ರ ರೂಪಿಸಿರಬಹುದು ಎಂದು ಜಿ.ಕೆ.ಹೆಗಡೆ ಆರೋಪಿಸಿದ್ದಾರೆ.