Asianet Suvarna News Asianet Suvarna News

ಯಲ್ಲಾಪುರ: ಅಕ್ರಮ ಜಾನು​ವಾರು ಸಾಗಾ​ಟ, ಮೂವರ ಬಂಧ​ನ

ಅಕ್ರಮವಾಗಿ ಸಾಗಿಸಲಾಗುತ್ತಿದ್ದ 6 ಜಾನುವಾರು ರಕ್ಷಣೆ| ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಪಟ್ಟಣ| ಆರೋಪಿಗಳ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು| 

Three Accused Arrested for Illegal Cattle Shipping Yallapura grg
Author
Bengaluru, First Published Nov 4, 2020, 3:41 PM IST

ಯಲ್ಲಾಪುರ(ನ.04): ಮಿನಿ ಲಾರಿಯೊಂದರಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 6 ಜಾನುವಾರುಗಳನ್ನು ಪಟ್ಟಣದ ಜೋಡುಕೆರೆ ಬಳಿ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಪೊಲೀಸರು ವಶಕ್ಕೆ ಪಡೆದು, ಈ ಸಂಬಂಧ 3 ಜನರನ್ನು ಬಂಧಿಸಿದ ಘಟನೆ ನಡೆದಿದೆ. 

ಬಂಧಿತರನ್ನು ಹರಿಯಾಣದ ಬಿವಾಣಿಯ ಮನಪೂಲ್‌ಸಿಂಗ್‌ ಜಗನ್ನಾಥ, ಈಶ್ವರ ಸಿಂಗ್‌ ವಿಜಯ ಸಿಂಗ್‌ ಹಾಗೂ ಕೇರಳದ ರಿಜಿ ಫಿಲೀಫ್‌ ಎಂದು ಗುರುತಿಸಲಾಗಿದೆ. ಇವರು ಹರಿಯಾಣದಿಂದ ಕೇರಳದ ಕಡೆಗೆ ಮಿನಿ ಲಾರಿಯಲ್ಲಿ 5 ಎಮ್ಮೆಗಳು ಹಾಗೂ ಒಂದು ಹಸುವನ್ನು ಹಿಂಸಾತ್ಮಕವಾಗಿ ತುಂಬಿಕೊಂಡು, ಬಲಿಕೊಡುವ ಉದ್ದೇಶದಿಂದ ಸಾಗಿಸುತ್ತಿದ್ದರು. 

ಯಲ್ಲಾಪುರ: ಅಕ್ರಮವಾಗಿ ಜಾನುವಾರು ಸಾಗಣೆ, ಐವರ ಬಂಧನ

ಪಟ್ಟಣದ ಜೋಡುಕೆರೆ ಬಳಿ ಪೊಲೀಸರು ಲಾರಿಯನ್ನು ತಡೆದು ತಪಾಸಣೆ ನಡೆಸಿದಾಗ ಅಕ್ರಮ ಸಾಗಾಟದ ಸಂಗತಿ ಬಯಲಾಗಿದೆ. 6 ಜಾನುವಾರುಗಳನ್ನು ರಕ್ಷಿಸಿರುವ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಅವರ ವಿರುದ್ಧ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
 

Follow Us:
Download App:
  • android
  • ios