ಚಿಕ್ಕಮಗಳೂರಿನಲ್ಲಿ ನಡೆದ ಕಾರು ಅಪಘಾತದಲ್ಲಿ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿಯಾಗಿ ಅವಘಡ ಸಂಭವಿಸಿದೆ.
ಚಿಕ್ಕಮಗಳೂರು(ಜು.12) : ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದು ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಉದ್ದೇಬೋರನಗಳ್ಳಿ ಗ್ರಾಮದ ಬಳಿ ಘಟನೆ ನಡೆದಿದ್ದು, ಮೂವರು ಸಾವನ್ನಪ್ಪಿದ್ದು, ಇನ್ನು ಮೂವರಿಗೆ ಗಂಭೀರ ಗಾಯಗಳಾಗಿದೆ.
Add Asianetnews Kannada as a Preferred Source

ಗಾಯಾಳುಗಳನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದ್ದು,ಮೃತರು ಬಳ್ಳಾರಿ ಮೂಲದವರೆಂದು ತಿಳಿದು ಬಂದಿದೆ. ಮೃತರ ಹೆಸರು, ಪರಿಚಯ ತಿಳಿದುಬಂದಿಲ್ಲ. ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನ ಪಡೆದು ಮುಡಿ ಕೊಟ್ಟು ವಾಪಸ್ಸಾಗುತ್ತಿದ್ದರು.
40 ಅಡಿ ಕಂದಕಕ್ಕೆ ಉರುಳಿ ಭೀಕರ ಬಸ್ ಅಪಘಾತ : 29 ಮಂದಿ ದುರ್ಮರಣ
ಧರ್ಮಸ್ಥಳದಿಂದ ಬಳ್ಳಾರಿಗೆ ವಾಪಸ್ಸಾಗುವ ವೇಳೆಯಲ್ಲಿ ಮಧ್ಯರಾತ್ರಿ ಚಾಲಕನ ನಿಯಂತ್ರಣ ತಪ್ಪಿಕಾರು ರಸ್ತೆಯ ಪಕ್ಕದಲ್ಲಿದ್ದ ಮರಕ್ಕೆ ಡಿಕ್ಕಿ ಹೊಡೆದಿದೆ. ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
