* ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಹಲಗೂರು ಬಳಿ ನಡೆದ ಘಟನೆ* ಗಾಯಾಳುಗಳನ್ನ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು* ಕಾರ್ಯನಿಮಿತ್ತ ಚಾಮರಾಜನಗರ ಜಿಲ್ಲೆ ಹನೂರಿಗೆ ತೆರಳಿದ್ದ ಮೃತರು 

ಹಲಗೂರು(ಜೂ.05): ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಹಳ್ಳಕ್ಕೆ ಉರುಳಿಬಿದ್ದು ತಕ್ಷಣವೇ ಬೆಂಕಿ ಹೊತ್ತಿಕೊಂಡ ಪರಿಣಾಮ ಅಪ್ಪ ಇಬ್ಬರು ಮಕ್ಕಳು ಸಜೀವ ದಹನವಾದ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಹಲಗೂರು ಪಟ್ಟಣದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿನ್ನೆ(ಶುಕ್ರವಾರ) ನಡೆದಿದೆ. 

Add Asianetnews Kannada as a Preferred SourcegooglePreferred

ಕಾರನ್ನು ಚಾಲನೆ ಮಾಡುತ್ತಿದ್ದ ಶೇಕ್‌ ಫೈಜಲ್‌(45), ಅವರ ಮಕ್ಕಳಾದ ಸುಹಾನಾ(12) ಮತ್ತು ಶೇಕ್‌ ಅಹಿಲ್‌ (6) ಸಜೀವ ದಹನವಾದವರು. ಮೃತನ ಪತ್ನಿ ಮೆಹಕ್‌ ಮತ್ತು ಮಗಳು ಮಹೈರಾಗೆ ತೀವ್ರ ಸುಟ್ಟಗಾಯಗಳಾಗಿದ್ದು, ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಕೈತಪ್ಪಿದ KSRTC : ಬಾಬಾಸಾಹೇಬ್ ಸಾರಿಗೆ ಎಂದು ಹೆಸರಿಡಲು ಸುಮಲತಾ ಮನವಿ

ಬೆಂಗಳೂರಿನ ನಿವಾಸಿಗಳಾದ ಇವರು ಕಾರ್ಯನಿಮಿತ್ತವಾಗಿ ಚಾಮರಾಜನಗರ ಜಿಲ್ಲೆ ಹನೂರಿಗೆ ತೆರಳಿದ್ದರು. ಶುಕ್ರವಾರ ಮುಂಜಾನೆ ಬೆಂಗಳೂರಿಗೆ ವಾಪಸ್‌ ಆಗುತ್ತಿದ್ದಾಗ ಈ ಅವಘಡ ಸಂಭವಿಸಿದೆ.