ಎರಡು ಬೈಕ್ ಮುಖಾಮುಖಿ ಡಿಕ್ಕಿ| ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಚಿಕ್ಕ ಗಲಗಲಿ ಬಳಿ ನಡೆದ ಘಟನೆ| ಈ ಸಂಬಂಧ ಬಬಲೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು|
ವಿಜಯಪುರ(ನ.05): ಬೈಕ್ಗಳೆರಡು ಮುಖಾಮುಖಿ ಡಿಕ್ಕಿಯಾಗಿ ಮೂವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಬಬಲೇಶ್ವರ ತಾಲೂಕಿನ ಚಿಕ್ಕ ಗಲಗಲಿ ಬಳಿ ಬುಧವಾರ ನಡೆದಿದೆ.
Add Asianetnews Kannada as a Preferred Source

ಬಬಲೇಶ್ವರ ತಾಲೂಕಿನ ತೊದಲಬಾಗಿಯ ಲಕ್ಷ್ಮಣ ಮಾದರ (45), ಕಾಶಿಬಾಯಿ ಮಾದರ (40) ದಂಪತಿ ಹಾಗೂ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಗಲಗಲಿ ಪಟ್ಟಣದ ಅನಿಲ ರಾಚಣ್ಣ ಮೇಳಗೇರಿ (25) ಮೃತಪಟ್ಟಿದ್ದಾರೆ.
ವಿಜಯಪುರ ಜಿಲ್ಲೆಯಲ್ಲಿ ಭೂಮಿಯಲ್ಲಿ ನಿಗೂಢ ಶಬ್ದ: ಅಂತರ್ಜಲ ಹೆಚ್ಚಳವೇ ಭೂ ಕಂಪನಕ್ಕೆ ಕಾರಣ
ಲಕ್ಷ್ಮಣ ಮಾದರ ತನ್ನ ಪತ್ನಿಯೊಂದಿಗೆ ಬೈಕ್ನಲ್ಲಿ ತೆರಳುತ್ತಿದ್ದಾಗ, ಅನಿಲ ಮೇಳಗೇರಿ ಬೈಕ್ನಲ್ಲಿ ಎದುರುಗಡೆಯಿಂದ ಬರುತ್ತಿದ್ದಾಗ ಈ ಅಪಘಾತ ನಡೆದಿದೆ. ಮೂವರಿಗೂ ತೀವ್ರ ಪೆಟ್ಟಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬೈಕ್ ಹಿಂಬದಿ ಸವಾರ ಗಲಗಲಿಯ ಶಿವಪೂಜಯ್ಯ ಶ್ರೀಶೈಲ ಹಿರೇಮಠ ಗಂಭೀರ ಗಾಯಗೊಂಡಿದ್ದಾನೆ. ಈತನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಬಬಲೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
