* ವಿಜಯಪುರ ಜಿಲ್ಲೆ ಕೊಲ್ಹಾರ ತಾಲೂಕಿನ ರೋಣಿಹಾಳ ಕ್ರಾಸ್‌ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಘಟನೆ*  ಕ್ಯಾಂಟರ್‌ನಲ್ಲಿದ್ದ 18 ಎಮ್ಮೆಗಳಲ್ಲಿ 8 ಎಮ್ಮೆಗಳು ಸಾವು*  ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಪೊಲೀಸರು  

ಬಸವನಬಾಗೇವಾಡಿ(ಸೆ.22): ಎಮ್ಮೆಗಳು ತುಂಬಿದ ವಾಹನ ಹಾಗೂ ಸೇಬು ಹಣ್ಣು ತುಂಬಿಕೊಂಡು ಹೋಗುತ್ತಿದ್ದ ಲಾರಿ ಮುಖಾಮುಖಿ ಡಿಕ್ಕಿಯಾಗಿ ಮೂವರು ಮೃತಪಟ್ಟು, ಕ್ಯಾಂಟರ್‌ನಲ್ಲಿದ್ದ 18 ಎಮ್ಮೆಗಳಲ್ಲಿ 8 ಎಮ್ಮೆಗಳು ಮೃತಪಟ್ಟ ಘಟನೆ ಕೊಲ್ಹಾರ ತಾಲೂಕಿನ ರೋಣಿಹಾಳ ಕ್ರಾಸ್‌ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ನಡೆದಿದೆ.

Add Asianetnews Kannada as a Preferred SourcegooglePreferred

ಮೃತರ ಹೆಸರು, ವಿಳಾಸ ಇನ್ನು ಪತ್ತೆಯಾಗಿಲ್ಲ. ಚಂಡಿಗಡದಿಂದ ಕೇರಳಕ್ಕೆ(Kerala) ಸೇಬು ಹಣ್ಣು ತುಂಬಿಕೊಂಡು ಹೋಗುತ್ತಿದ್ದ ಲಾರಿ ಹಾಗೂ ಹುಬ್ಬಳ್ಳಿಯಿಂದ ಎಮ್ಮೆಗಳನ್ನು ಸಾಗಿಸುತ್ತಿದ್ದ ಕ್ಯಾಂಟರ್‌ ವಾಹನಗಳ ಮಧ್ಯೆ ಅಪಘಾತ(Accident) ನಡೆದಿದೆ. ಈ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟರೆ, ಇನ್ನೊಬ್ಬ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. 

ರಾಯಚೂರು: ಪೊಲೀಸ್ ಚೆಕ್‌ಪೋಸ್ಟ್‌ಗೆ ಲಾರಿ ಡಿಕ್ಕಿ, ಎರಡು ತುಂಡಾದ ಚಾಲಕನ ದೇಹ

ಈ ಅಪಘಾತದಿಂದ ಲಾರಿಯಲ್ಲಿ ಸಿಲುಕಿದ ವ್ಯಕ್ತಿಯನ್ನು ಹೊರತೆಗೆಯಲು ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಹರಸಾಹಸ ಪಡುವಂತಾಯಿತು. ಗಂಭೀರಗೊಂಡಿದ್ದ ಉಳಿದ ಎಮ್ಮೆಗಳನ್ನು ವಿಜಯಪುರಕ್ಕೆ ಸಾಗಿಸಲಾಯಿತು. ಕೊಲ್ಹಾರ ಪೊಲೀಸ್‌(Police) ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದೆ. 

ಘಟನಾ ಸ್ಥಳಕ್ಕೆ ಹೆಚ್ಚುವರಿ ಎಸ್‌ಪಿ ಡಾ.ರಾಮಸಿದ್ದಿ, ಡಿವೈಎಸ್ಪಿ ಅರುಣಕುಮಾರ ಕೋಳೂರ, ಸಿಪಿಐ ಸೋಮಶೇಖರ ಜುಟ್ಟಲ್‌, ಕೊಲ್ಹಾರ ಎಎಸ್‌ಐ ಆರ್‌.ಎನ್‌.ಬಿರಾದಾರ ಭೇಟಿ ನೀಡಿ ಪರಿಶೀಲಿಸಿದರು.