ಟಾಟಾ ಏಸ್, ಬೈಕ್ ಮಧ್ಯೆ ಅಪಘಾತ| ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಚಿಕ್ಕಮ್ಯಾಗೇರಿ ಗ್ರಾಮದ ಹತ್ತಿರ ನಡೆದ ಘಟನೆ| ಗಾಯಾಳುಗಳಿಗೆ ಯಲಬುರ್ಗಾದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ| ಈ ಸಂಬಂಧ ಯಲಬುರ್ಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು|
ಯಲಬುರ್ಗಾ(ಅ.03): ಟಾಟಾ ಏಸ್ ವಾಹನ ಮತ್ತು ಬೈಕ್ ಮುಖಾಮುಖಿ ಡಿಕ್ಕಿ ಹೊಡೆದು ಬೈಕ್ನಲ್ಲಿದ್ದ ಮೂವರು ಮೃತಪಟ್ಟ ಘಟನೆ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಚಿಕ್ಕಮ್ಯಾಗೇರಿ ಗ್ರಾಮದ ಹತ್ತಿರ ನಿನ್ನೆ(ಶುಕ್ರವಾರ) ನಡೆದಿದೆ.
Add Asianetnews Kannada as a Preferred Source

ಅಪಘಾತದಲ್ಲಿ ಗಾಯಗೊಂಡ ಮೂವರನ್ನು ಯಲಬುರ್ಗಾ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ವಿಜಯಪುರದ ಬಳಿ ಭೀಕರ ಅಪಘಾತ: ಅಂಜನಾದ್ರಿ ಬೆಟ್ಟಕ್ಕೆ ಹೊರಟ್ಟಿದ್ದ ಮೂವರು ಭಕ್ತರ ದುರ್ಮರಣ
ಮೃತರನ್ನು ಬೈರಾಪುರ ಗ್ರಾಮದ ಈರಣ್ಣ ಸಿಂಧೋಗಿ (26), ಚಿಕ್ಕಮ್ಯಾಗೇರಿ ಗ್ರಾಮದ ಹನುಮಪ್ಪ ಉಪ್ಪಾರ (26), ಧರ್ಮಪ್ಪ ಹೊಸಳ್ಳಿ (55) ಎಂದು ಗುರುತಿಸಲಾಗಿದೆ. ಈ ಕುರಿತು ಯಲಬುರ್ಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
