ಅಪಘಾತದ ರಭಸಕ್ಕೆ ಆಡಿ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಸ್ನೇಹಿತರೆಲ್ಲರೂ ಸಾಯಿಗಗನ್ ಮನೆಗೆ ಬಂದಿದ್ದರು. ಮನೆಯಿಂದ ಕೋಲಾರಕ್ಕೆ ಹೋಗುವಾಗ ಅಪಘಾತ ನಡೆದಿದೆ. 

ಕೋಲಾರ(ಆ.03):  ಆಡಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿ ಮತ್ತೋರ್ವ ಆಶ್ಚರ್ಯಕರ ರೀತಿಯಲ್ಲಿ ಪಾರಾದ ಘಟನೆ ನಗರದ ‌ಹೊರವಲಯದ ಬಂಗಾರಪೇಟೆ ಮುಖ್ಯ ರಸ್ತೆ ಸಹಕಾರ ನಗರ ಬಳಿ ಇಂದು(ಶನಿವಾರ) ನಡೆದಿದೆ. 

Add Asianetnews Kannada as a Preferred SourcegooglePreferred

ಮೃತರು ರೇವಾ ಯೂನಿವರ್ಸಿಟಿ ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ. ಹಾಸನ ಮೂಲದ ಹರ್ಷವರ್ಧನ್, ಬಳ್ಳಾರಿ ಮೂಲದ‌ ಬಸವರಾಜ್ ಹಾಗೂ ಬಂಗಾರಪೇಟೆಯ ನಿಚ್ಚಲ್ ಮೃತ ದುರ್ದೈವಿಗಳು. ಬಂಗಾರಪೇಟೆ ಮೂಲದ ಸಾಯಿ ಗಗನ್ ಬಚಾವ್ ಆಗಿದ್ದಾರೆ. 

Bengaluru: ನೈಸ್ ರಸ್ತೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ರಸ್ತೆ ಅಫಘಾತ: ಹೊಸ ರೂಲ್ಸ್ ಜಾರಿ!

ಅಪಘಾತದ ರಭಸಕ್ಕೆ ಆಡಿ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಸ್ನೇಹಿತರೆಲ್ಲರೂ ಸಾಯಿಗಗನ್ ಮನೆಗೆ ಬಂದಿದ್ದರು. ಮನೆಯಿಂದ ಕೋಲಾರಕ್ಕೆ ಹೋಗುವಾಗ ಅಪಘಾತ ನಡೆದಿದೆ. ಘಟನಾ ಸ್ಥಳಕ್ಕೆ ಕೋಲಾರ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.