Asianet Suvarna News Asianet Suvarna News

ಗುಡ್ಡಕ್ಕೆ‌ ಗುದ್ದಿದ ಕಾರು: ಮೂರು ಸಾವು, ಏಳು ಮಂದಿ ಗಂಭೀರ

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಆರೋಲ್ಲಿ ಕ್ರಾಸ್ ಬಳಿ ಈ ದುರ್ಘಟನೆ ನಡೆದಿದೆ. ಫಾತೀಮಾ(65), ರುಬಿಯಾ(45) ಹಾಗೂ ಚಾಬು ಸಾಬ್ ಮೃತರೆಂದು ಗುರುತಿಸಲಾಗಿದೆ. ಇವರೆಲ್ಲರೂ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಗ್ರಾಮದವರಾಗಿದ್ದು, ಗೋವಾಕ್ಕೆ ಮದುವೆಗೆಂದು ತೆರಳಿ ವಾಪಾಸ್ ಊರಿಗೆ ಹೋಗುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ.

Three were died And Seven Injured in a Car Accident
Author
Honnavar, First Published Nov 13, 2018, 11:47 AM IST

ಹೊನ್ನಾವರ[ನ.13]: ಕಾರೊಂದು ಗುಡ್ಡಕ್ಕೆ ಗುದ್ದಿದ ಪರಿಣಾಮವಾಗಿ ಮೂವರು ಸ್ಥಳದಲ್ಲೇ ಸಾವನಪ್ಪಿದ್ದು, ಏಳು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಹೊನ್ನಾವರದಲ್ಲಿ ನಡೆದಿದೆ.

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಆರೋಲ್ಲಿ ಕ್ರಾಸ್ ಬಳಿ ಈ ದುರ್ಘಟನೆ ನಡೆದಿದೆ. ಫಾತೀಮಾ(65), ರುಬಿಯಾ(45) ಹಾಗೂ ಚಾಬು ಸಾಬ್ ಮೃತರೆಂದು ಗುರುತಿಸಲಾಗಿದೆ. ಇವರೆಲ್ಲರೂ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಗ್ರಾಮದವರಾಗಿದ್ದು, ಗೋವಾಕ್ಕೆ ಮದುವೆಗೆಂದು ತೆರಳಿ ವಾಪಾಸ್ ಊರಿಗೆ ಹೋಗುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ.

ಅಪಘಾತದಲ್ಲಿ ಏಳು ಮಂದಿಗೆ ಗಂಭೀರ ಗಾಯಗಳಾಗಿದ್ದು, ಇವರೆಲ್ಲರನ್ನೂ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹೊನ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Follow Us:
Download App:
  • android
  • ios